ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
41ಕೆರೆ, ತಾತ್ಕಾಲಿಕ ಕಲ್ಯಾಣಿ ಹಾಗೂ 489 ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್) ಗಳ ವ್ಯವಸ್ಥೆಯನ್ನು ಬಿಬಿಎಂಪಿ ಎಲ್ಲ ವಾರ್ಡ್ಗಳಲ್ಲಿ ಮಾಡಲಾಗುತ್ತಿದೆ. ಜತೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳ ವ್ಯವಸ್ಥೆ ಕೂಡ ಕಲ್ಪಿಸಲಾಗುತ್ತಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ.
ಮುಂದುವರಿದು, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಹೇರೋಹಳ್ಳಿ ಕೆರೆ ಕಲ್ಯಾಣಿಯಲ್ಲಿ ವಿಸರ್ಜನೆಗೆ ಅವಕಾಶವಿಲ್ಲ: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಬರುವ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಈ ಬಾರಿ ತಾಂತ್ರಿಕ ಕಾರಣಗಳಿಂದ ಗಣೇಶ ವಿಸರ್ಜಿಸುವುದನ್ನು ಸ್ಥಗಿತಗೊಳಿಸಲಾಗಿದೆ. ಆದ್ದರಿಂದಾಗಿ ಸಾರ್ವಜನಿಕರು ಬದಲಿ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕೋರಿದೆ.
ಯಡಿಯೂರು ಕೆರೆ ಕಲ್ಯಾಣಿಯಲ್ಲಿ ವಿಸರ್ಜನೆಗೆ ವ್ಯವಸ್ಥೆ: ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪೈಕಿ ದಿನಾಂಕ: 27-08-2025 ರಿಂದ 17-09-2025 ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಯಡಿಯೂರು ಕೆರೆಯಲ್ಲಿ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
Related

You Might Also Like
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...
ಉತ್ತರಾಖಂಡ್ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ-ಸದಸ್ಯರ ನಿಯೋಗ ಗ್ರಾಮಾಂತರ ಜಿಲ್ಲೆಗೆ ಭೇಟಿ
ಬೆಂಂಗಳೂರು ಗ್ರಾಮಾಂತರ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯರಾದ ಜಂಗ್ಪಂಗಿ, ಎಂ.ಸಿ. ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ...