Please assign a menu to the primary menu location under menu

CrimeNEWSನಮ್ಮಜಿಲ್ಲೆಬೆಂಗಳೂರು

BBMP: ಕರ್ತವ್ಯ ಲೋಪ -ಆರು ಮಂದಿ ಕಂದಾಯ ಅಧಿಕಾರಿಗಳ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ತವ್ಯ ಲೋಪ ಆರೋಪದಡಿ ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಆರು ಮಂದಿ ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಮನೀಷ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.

ಈ ಅಧಿಕಾರಿಗಳ ವಿರುದ್ಧ ಆಸ್ತಿ ತೆರಿಗೆ ಸಂಬಂಧಿತ ಕರ್ತವ್ಯ ಲೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಕಾರಣ ಕೇಳಿ ಜಂಟಿ ಆಯುಕ್ತ ಅಜಿತ್ ಅವರಿಗೆ ನೋಟಿಸ್ ಹಾಗೂ ಕಂದಾಯ ಉಪ ಆಯುಕ್ತ ಡಿ.ಕೆ.ಬಾಬು ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸುವಂತೆ ಸೂಚಿಸಿದ್ದರು.

ಬೊಮ್ಮನಹಳ್ಳಿ ವಲಯದಲ್ಲಿ ಆಸ್ತಿ ತೆತಿಗೆ ಸಂಗ್ರಹ, ತೆರಿಗೆ ಬಾಕಿ, ಟಾಪ್- 50 ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಗೃಹ ಹಾಗೂ ಗೃಹೇತರ ಕಟ್ಟಡಗಳ ಮಾಲೀಕರ ಆಸ್ತಿಗಳನ್ನು ಮುಟ್ಟುಗೋಲು ಹಾಗೂ ಬೀಗಮುದ್ರೆ ಹಾಕದ ಪ್ರಕರಣಗಳು ಜ.30 ರಂದು ನಡೆಸಿದ ಪರಿಶೀಲನೆ ವೇಳೆ ಕಂಡು ಬಂದಿದ್ದವು.

ಈ ಹಿನ್ನೆಲೆಯಲ್ಲಿ ಜಂಟಿ ಆಯುಕ್ತರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಹಾಗೂ ಡಿ.ಕೆ.ಬಾಬು ಅವರ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದ್ದಾರೆ.

ಡಿಸಿ ಬಾಬು ಕಳೆದ ಎರಡು ತಿಂಗಳಲ್ಲಿ ಟಾಪ್-50 ಗೃಹೇತರ ಕಟ್ಟಡಗಳಲ್ಲಿ ಒಂದು ಕಟ್ಟಡವನ್ನು ಸೀಲ್ ಮಾಡಿಲ್ಲ. ಅದೇ ರೀತಿ ಟಾಪ್ -50 ವಸತಿ ಕಟ್ಟಡಗಳಲ್ಲಿ ಒಂದು ಆಸ್ತಿಯನ್ನು ಅಟ್ಯಾಚ್ ಮೆಂಟ್ ಮಾಡಿಲ್ಲ. ಈ ಕುರಿತಂತೆ ಡಿಕೆ ಬಾಬು ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕಿದೆ ಎಂದು ಮೌದ್ಗಿಲ್ ವಿವರಿಸಿದ್ದಾರೆ.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ