NEWSನಮ್ಮಜಿಲ್ಲೆಬೆಂಗಳೂರು

‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂಬಂಧ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ವೃತ್ತದಿಂದ ಹಮ್ಮಿಕೊಂಡಿದ್ದ ‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮತ್ತು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.

ಪಾಲಿಕೆಯ ಎಲ್ಲಾ ಅಧಿಕಾರಿ/ಸಿಬ್ಬಂದಿ ವರ್ಗ, ನಾಗರೀಕರು, ವಿದ್ಯಾರ್ಥಿಗಳು, ಸೈಕಲ್, ಕಾಲ್ನಡಿಗೆ ಮೂಲಕ ನಡೆದ ಜಾಥ ಕಾರ್ಯಕ್ರಮದಲ್ಲಿ ಎಲ್.ಇ.ಡಿ ಪರೆದೆಯುಳ್ಳ ವಾಹನದಲ್ಲಿ ಚುನಾವಣಾ ಗೀತೆಯನ್ನು ಬಳಸಿಕೊಂಡು, ರಸ್ತೆಯುದ್ದಕ್ಕೂ ಬಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಕೂಗುತ್ತಾ ರಸ್ತೆಯುದ್ದಕ್ಕೂ ಮತದಾರರಲ್ಲಿ ಏಪ್ರಿಲ್ 26 ರಂದು ತಪ್ಪದೆ ಮತದಾನ ಮಾಡಲು ಮನವರಿಕೆ ಮಾಡಲಾಯಿತು.

ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ಕುರಿತು ಮಾಹಿತಿ ನೀಡುವುದರ ಜೊತೆಗೆ ನೈತಿಕ ಚುನಾವಣೆ ನಡೆಸುವ ಸಂಬಂಧ ಮತದಾರರಿಗಾಗಿ ಹೊರ ತಂದಿರುವ ಸಿ-ವಿಜಿಲ್, ಕೆವೈಸಿ, ಸಕ್ಷಮ್ ತಂತ್ರಾಂಶಗಳು ಸೇರಿದಂತೆ ಮತದಾರರ ಸಹಾಯವಾಣಿ-1950 ಬಗ್ಗೆ ನಾಗರೀಕರಲ್ಲಿ‌ ಅರಿವು ಮೂಡಿಸಲಾಯಿತು.

ಜಕ್ಕೂರು ವೃತ್ತದಲ್ಲಿ ಮಾನವ ಸರಪಳಿ ಹಾಗೂ ಜಾಗೃತಿ ಗೀತೆ: ಜಕ್ಕೂರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಾಗರೀಕರಲ್ಲಿ ಮತದಾನ ಮಾಡಲು ಜಾಗೃತಿ ಮೂಡಿಸುವ ಕೆಲಸ ಮಾಡಲಾಯಿತು. ಜೊತೆಗೆ ಮತದಾನದ ಕುರಿತು ಜಾಗೃತಿ ಗೀತೆಯನ್ನು ಹಾಡಲಾಯಿತು.

ಮತಗಟ್ಟೆಗಳ ಬಳಿ ಕನಿಷ್ಟ ಸೌಲಭ್ಯಗಳ ಪರಿಶೀಲನೆ: ಜಕ್ಕೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ 7 ಮತಗಟ್ಟೆಗಳು ಬರಲಿದ್ದು, ಕನಿಷ್ಟ ಸೌಲಭ್ಯಗಳಿರುವುದನ್ನು ಪರಿಶೀಲಿಸಿ, ಮತದಾನದ ದಿನ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಥ ಸಾಗಿದ ಹಾದಿ: ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ನಿಂದ, ಜಕ್ಕೂರು ಮುಖ್ಯ ರಸ್ತೆ ಮೂಲಕ, ಜಕ್ಕೂರು ವೃತ್ತ, ಶ್ರೀ ಕೆ.ವಿ ಭೈರೇಗೌಡ ವೃತ್ತ, ಜಕ್ಕೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಮತಗಟ್ಟೆಯವರೆಗು ಸಾಗಿ ಮತಗಟ್ಟೆಯ ಆವರಣದಲ್ಲಿ “ಚುನಾವಣಾ ಪರ್ವ ದೇಶದ ಗರ್ವ” ಎಂಬ ದ್ಯೇಯ ಒಳಗೊಂಡಿರುವ ಬಾವುಟವನ್ನು ದ್ವಜಾರೋಹಣ ಮಾಡಲಾಯಿತು.

ನಗರದಾದ್ಯಂತ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮ ಆಯೋಜನೆ: ನಗರದಾದ್ಯಂತ ವಾರ್ಡ್ ವಾರು ಅಪರ ಜಿಲ್ಲಾ ಚುನಾವಣಾಧಿಕಾರಿ, ಚು‌ನಾವಣಾಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಜಾಥ ನಡೆಸಿ, ಸ್ಥಳೀಯ ಮತಗಟ್ಟೆ ವ್ಯಾಪ್ತಿಯ ಮತದಾರರೊಂದಿಗೆ ಮತದಾನ ಮಾಡುವ ಮತಗಟ್ಟೆಗೆ ಭೇಟಿ ನೀಡಿ ಮತದಾರರಿಗೆ ಕನಿಷ್ಟ ಮೂಲಭೂತ ಸೌಕರ್ಯಗಳ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಲಾಯಿತು‌.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ  ಕಾಂತರಾಜು, ವಲಯ ಆಯುಕ್ತ ಕರೀಗೌಡ, ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್, ಉಪ ಆಯುಕ್ತ ಮಮತಾ, ಚುನಾವಣಾ ರಾಯಭಾರಿಯಾದ ನೀತು ವನಜಾಕ್ಷಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ