NEWSನಮ್ಮಜಿಲ್ಲೆಬೆಂಗಳೂರು

ಬಿಬಿಎಂಪಿಯಿಂದ ದೀರ್ಘಕಾಲದಿಂದ ಆಸ್ತಿ ತೆರಿಗೆ ಕಟ್ಟದವರ ಸ್ಥಿರ ಆಸ್ತಿಗಳ ಹರಾಜು: ಮುನೀಶ್ ಮೌದ್ಗಿಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಲು ಬಿಬಿಎಂಪಿಯು ದೀರ್ಘಕಾಲದಿಂದ ಆಸ್ತಿ ತೆರಿಗೆಯನ್ನು ಪಾವತಿ ಮಾಡದ ಸುಸ್ತಿದಾರರ ಸ್ಥಿರ ಆಸ್ತಿಗಳನ್ನು ತುರ್ತು ಮಾರಾಟ ಮಾಡಲು ಹರಾಜ ಪ್ರಕ್ರಿಯೆಯನ್ನು ಆರಂಭಿಸುತ್ತಿದೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಕೆಲ ಆಸ್ತಿ ಮಾಲೀಕರು ಕೆಳಗಿನ ಹಂತಗಳ ಪ್ರಕ್ರಿಯೆಯ ಹೊರತಾಗಿಯೂ ಬಾಕಿ ಆಸ್ತಿತೆರಿಗೆಯನ್ನು ಪಾವತಿಸಿಲ್ಲ, ಆದುದರಿಂದ ಈ ಹರಾಜು ಪ್ರಕ್ರಿಯೆಯನ್ನು ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್ 156 ಉಪಪ್ರಕರಣ 5ರ ಅಡಿಯಲ್ಲಿ ಮಾಡಲಾಗುತ್ತಿದೆ.
(1) ಕಾರಣ ತೋರಿಸು ಸೂಚನೆ
(2) ಬೇಡಿಕೆ ನೋಟಿಸ್
(3) ಆಸ್ತಿಗಳ ಮುಟ್ಟುಗೋಲು
(4) ವಸತಿಯೇತರ ಆಸ್ತಿಗಳ ಸಂದರ್ಭದಲ್ಲಿ ಬೀಗಮುದ್ರೆ ಹಾಕುವುದು ಎಲ್ಲದಕ್ಕೂ ಸ್ಪಂದಿಸದಿರುವುದರಿಂದ ಕೊನೆಯ ಹಂತವಾಗಿ ಆಸ್ತಿ ತೆರಿಗೆ ವಸೂಲಾತಿಗಾಗಿ ಈ ಆಸ್ತಿಗಳನ್ನು ಹರಾಜಿಗೆ ಇಡಲಾಗುತ್ತಿದೆ.

ಹರಾಜಿನಲ್ಲಿ ಸ್ವೀಕರಿಸಿದ ಯಾವುದೇ ಹೆಚ್ಚುವರಿ ಹಣವನ್ನು ಪಾಲಿಕೆಗೆ ಸಂದಾಯವಾಗಬೇಕಿರುವ ಪೂರ್ಣ ಬಾಕಿ ವಸೂಲಿ ಮಾಡಿದ ನಂತರ ಮಾಲೀಕರ ಬ್ಯಾಂಕ್ ಖಾತೆಗೆ ಜಮೆಮಾಡಲಾಗುವುದು ಎಂದು ವಿವರಿಸಿದ್ದಾರೆ.

ಇನ್ನು ಪಾಲಿಕೆಯಲ್ಲಿನ 8-10 ಪ್ರಮುಖ ಸುಸ್ತಿದಾರರುಗಳನ್ನು ಪ್ರತಿ ವಲಯದಿಂದ ಸುಮಾರು 1-2 ಸುಸ್ತಿದಾರರುಗಳನ್ನು ಗುರುತಿಸಲಾಗಿದೆ ಮತ್ತು ಸ್ಥಿರ ಆಸ್ತಿಗಳ ಮಾರಾಟದ ಹರಾಜು ಮಾರಾಟ ದಿನಾಂಕವನ್ನು ನಿಗದಿಪಡಿಸುವ ನೋಟಿಸ್‌ಗಳನ್ನು ನೀಡಲಾಗಿದೆ, ಅವು ದೀರ್ಘಕಾಲದ ಆಸ್ತಿ ತೆರಿಗೆಯನ್ನು ಪಾವತಿ ಮಾಡದ ಪ್ರಕರಣಗಳಾಗಿವೆ.

ಇದು ಒಂದು ಆರಂಭವಾಗಿದ್ದು, ಪ್ರತಿ ವಾರ ಹೆಚ್ಚು ಹೆಚ್ಚು ಆಸ್ತಿಗಳನ್ನು (ಹೆಚ್ಚು ಬಾಕಿ ಉಳಿದಿರುವ) – ವಾಣಿಜ್ಯ/ಕೈಗಾರಿಕಾ ಮತ್ತು ವಸತಿ ಎರಡೂ ಸೇರಿದಂತೆ- ಆಸ್ತಿ ತೆರಿಗೆ ಬಾಕಿಗಳನ್ನು ವಸೂಲಿ ಮಾಡಲು ಹರಾಜಿಗೆ ಇಡಲಾಗುತ್ತದೆ.

ಮುಂದಿನ ವಾರ ಹೆಚ್ಚಿನ ಆಸ್ತಿಗಳನ್ನು ಹರಾಜು ಮಾರಾಟಕ್ಕೆ ಯೋಜಿಸಲಾಗಿದೆ. ತೆರಿಗೆ ಬಾಕಿಗಳನ್ನು ಪಾವತಿಸದ ಸುಮಾರು 2 ಲಕ್ಷ ಆಸ್ತಿಗಳಿವೆ ಮತ್ತು ಬಿಬಿಎಂಪಿಯಿಂದ ಇದೇ ರೀತಿಯ ಬಲವಂತದ ವಸೂಲಾತಿ ಕ್ರಮವನ್ನು ತಪ್ಪಿಸಲು ತಕ್ಷಣವೇ ತಮ್ಮ ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿ ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ