NEWSನಮ್ಮಜಿಲ್ಲೆಬೆಂಗಳೂರು

BBMP: ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಿಗೆ ಬೀಗಮುದ್ರೆ – 44,400 ರೂ. ದಂಡ ವಸೂಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಬಿಬಿಎಂಪಿ ಅಧಿಕಾರಿಗಳು ಮಳಿಗೆಗೆ ಬೀಗ ಹಾಕಿ ಸೀಲ್ ಮಾಡಿದ ಘಟನೆ ಇಂದು ನಡೆದಿದೆ.

ರಾಜರಾಜೇಶ್ವರಿ ನಗರದ ಜೆ.ಪಿ.ಪಾರ್ಕ್ ವಾರ್ಡ್ ನ ಮೋಹನ್ ಕುಮಾರ್ ಮುಖ್ಯ ರಸ್ತೆಯ ಮಳಿಗೆಗಳು ಹಾಗೂ ರಾಜರಾಜೇಶ್ವರಿ ನಗರ ವಾರ್ಡ್ ನ ಐಡಿಯಲ್ ಹೋಮ್ಸ್ ನಲ್ಲಿನ ಜವಹಾರ್ ಲಾಲ್ ನೆಹರು ರಸ್ತೆಯಲ್ಲಿರುವ ಮಳಿಗೆಗಳಿಗೆ ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಈಗಗಾಲೇ ಸೂನಚೆ ನೀಡಲಾಗಿತ್ತು.

ಆದರೂ ಇಂದು ಪರಿಶೀಲನೆ ನಡೆಸಿದ ವೇಳೆ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವುದನ್ನು ಗಮನಿಸಿ ಜೆ.ಪಿ. ಪಾರ್ಕ್ ವಾರ್ಡ್ ನಲ್ಲಿ ಆರ್.ಎಸ್.ವೆಜಿಟೆಬಲ್ ಮಳಿಗೆ, ಗ್ರೀನ್ ವಾಲಿ ಫಾರಂ, ಜಾಫರ್ ಫೋಟ್ ಶಾಪ್ ಹಾಗೂ ಆರ್.ಆರ್ ನಗರ ವಾರ್ಡ್ ನಲ್ಲಿ ಮಾತಾಜಿ ಡಿಪಾರ್ಟ್ಮೆಂಟಲ್ ಸ್ಟೋರ್ಸ್, ಸತೀಶ್ ಸ್ಟೋರ್ಸ್, ಕನಕಶ್ರೀ ಕ್ರೀಯೇಷನ್ಸ್ ಸೇರಿ 6 ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜರಾಜೇಶ್ವರಿನಗರ ವಲಯದ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರ ಸೂಚನೆಯಂತೆ ಬೀಗ ಹಾಕಿ ಸೀಲ್ ಮಾಡಿರುವ ಮಳಿಗೆಗಳ ಮುಂಭಾಗದಲ್ಲಿ “ಈ ಅಂಗಡಿ ಮಳಿಗಯಲ್ಲಿ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಈಗಾಗಲೇ ಈ ಹಿಂದೆ ಹಲವಾರು ಬಾರಿ ಸೂಚನೆ ನೀಡಿದ್ದರೂ ಸಹ ಪ್ಲಾಸ್ಟಿಕ್ ಬಳಸುತ್ತಿದ್ದರು. ಹೀಗಾಗಿ ಹಸಿರು ನ್ಯಾಯಾಧೀಕರಣ ಮಂಡಳಿ ರಾಜ್ಯಮಟ್ಟದ ಸಮಿತಿ ನಿರ್ದೇಶನಗಳಂತೆ ಈ ಅಂಗಡಿ ಮಳಿಗೆಯನ್ನು ಮುಂದಿನ ಆದೇಶದವರೆವಿಗೂ ಪಾಲಿಕೆಯ ವತಿಯಿಂದ ಮುಚ್ಚಲಾಗಿದೆ ಎಂಬ ಬಿತ್ತಿಪತ್ರವನ್ನು ಅಂಟಿಸಲಾಗಿದೆ ಎಂದು ತಿಳಿಸಿದ್ದಾರೆ.

44,400 ರೂ. ದಂಡ ವಸೂಲಿ: ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದ ಮಳಿಗೆಗೆಗಳಿಂದ ಒಟ್ಟಾರೆ 44,400 ರೂ. ಗಳ ದಂಡ ವಸೂಲಿ ಮಾಡಲಾಗಿದೆ.

ಧ್ವನಿವರ್ಧಕಗಳ ಮೂಲಕ ಜಾಗೃತಿ: ಸಾರ್ವಜನಿಕರಿಗೆ ಮಾರ್ಷಲ್ ವಾಹನದ ಧ್ವನಿವರ್ಧಕದ ಮೂಲಕ ಹಾಗೂ ಪ್ರತಿದಿನ ಮನೆಮನೆಗಳಿಂದ ತ್ಯಾಜ್ಯ ಸಂಗ್ರಹಣೆ ಮಾಡುವ ಆಟೋಟಿಪ್ಪರ್‌ಗಳ ಧ್ವನಿವರ್ದಕದ ಮೂಲಕ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಕೈಚೀಲವನ್ನು ಬಳಸದಂತೆ ಜಾಗೃತಿ ಮೂಡಿಸಲಾಗುತ್ತದೆ.

ಪರಿಶೀಲನೆಯ ವೇಳೆ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಭಿಯಂತರರು ಮತ್ತು ಸಿಬ್ಬಂದಿಗಳು, ಕಾಮಗಾರಿ ವಿಭಾಗದ ಅಭಿಯಂತರರು, ಆರೋಗ್ಯ ವಿಭಾಗದ ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು