NEWSನಮ್ಮರಾಜ್ಯಸಂಸ್ಕೃತಿ

ಬೀಡನಹಳ್ಳಿ: ಇಂದು ವಿಜೃಂಭಣೆಯಿಂದ ನೆರವೇರಿದ ಶ್ರೀನಂದಿಬಸವೇಶ್ವರ ಸ್ವಾಮಿಯ 12ನೇ ಕೊಂಡೋತ್ಸವ

ವಿಜಯಪಥ ಸಮಗ್ರ ಸುದ್ದಿ

l ದೇವರಾಜು ಬೀಡನಹಳ್ಳಿ
ಬನ್ನೂರು: ಹೋಬಳಿಯ ಬೀಡನಹಳ್ಳಿಯ ಶ್ರೀ ನಂದಿಬಸವೇಶ್ವರ ಸ್ವಾಮಿಯ 12ನೇ ಕೊಂಡ ಮಹೋತ್ಸವ ಮಾ.18ರ ಸೋಮವಾರ ಮುಂಜಾನೆ 6ರಿಂದ 6.45ರವರೆಗೆ ವಿಜೃಂಭಣೆಯಿಂದ ನೆರವೇರಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತಿ.ನರಸೀಪುರ ತಾಲೂಕಿನ, ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದ ಶ್ರೀ ನಂದಿಬಸವೇಶ್ವರ ಸ್ವಾಮಿಯ ಕೊಂಡವನ್ನು ಕಾಶಿವೇಷಧಾರಿ ಮಹದೇವಸ್ವಾಮಿ ಅವರು ಗಜಗಾಂಭೀರ್ಯದಿಂದ ಹಾಯ್ದರು. ಇವರ ನಂತರ ಶ್ರೀಸ್ವಾಮಿಯ ಗುಡ್ಡಪ್ಪನವರಾದ ನಂಜುಂಡೆಗೌಡ ಮತ್ತು ರಾಜೇಶ್‌ ಅವರು ಕೂಡ ಈಬಾರಿ ಭಾರಿ ನಿಧಾನವಾಗಿ ಕೊಂಡ ಹಾಯುವ ಮೂಲಕ ಭಕ್ತರಲ್ಲಿ ಭಕ್ತಿಯ ಸೆಲೆಯನ್ನು ಮೂಡಿಸಿದರು.

ಇನ್ನು ಕೊಂಡ ಹಾಯುವುದಕ್ಕೂ ಮುನ್ನಾ ಮುಂಜಾನೆ ಶ್ರೀಸ್ವಾಮಿಯ ಸನ್ನಿಧಿಯಿಂದ ಶ್ರೀಸ್ವಾಮಿಯ ಬಸವನ ಜತೆಗೆ ಗ್ರಾಮದೇವತೆ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಯೊಂದಿಗೆ ರಾಜ ಬೀದಿಯಲ್ಲಿ ಮೆರವಣಿಗೆ ಮೂಲಕ ಗುರುಸ್ವಾಮಿ ಅವರ ಮನೆಗೆ ಕರೆತರಲಾಯಿತು.

ಗುರುಸ್ವಾಮಿ ಅವರ ಮನೆಯಲ್ಲಿ ಗ್ರಾಮದೇವತೆ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳಿಗೆ ಹೂ ಹೊಂಬಾಳೆ ಮಾಡಿದ ನಂತರ ಶ್ರೀಸ್ವಾಮಿಗೆ ಹರಕೆ ಹೊತ್ತ ಭಕ್ತರು ಬಾಯಿಬೀಗ ಚುಚ್ಚಿಸಿಕೊಂಡರು. ಈ ವೇಳೆ ತಮಟೆ, ಕೊಂಬು ಕಹಳೆಗಳ ಮಂಗಳವಾದ್ಯಗಳೊಂದಿಗೆ ಸಾವಿರಾರು ಭಕ್ತರು ಮೆರವಣಿಗೆ ಮೂಲಕ ಶ್ರೀಸ್ವಾಮಿಯ ಆವರಣ ತಲುಪಿದರು. ರಾತ್ರಿಯಿಡಿ ಹುಣಸೆ ಕಟ್ಟಿಗೆಗಳನ್ನು ಸುಟ್ಟು ಬೇಸಿಗೆ ಸೂರ್ಯನನ್ನು ಮೀರಿಸುವಂತೆ ಸಿದ್ಧಗೊಳಿಸಿದ್ದ ಕೊಂಡದ ಬಳಿ ಎಲ್ಲರೂ ಬಂದು ಸೇರಿದರು.

ಬಾಯಿಬೀಗ ಹರಕೆ ಹೊತ್ತಿದ್ದ ಭಕ್ತರು ಪಂಜಿನ ಸೇವೆಯನ್ನು ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಮಾಡಿ ಶ್ರೀಸ್ವಾಮಿಗೆ ಭಕ್ತಿಯಿಂದ ನಮಿಸಿದರು. ಇನ್ನು ಕೊಂಡದ ಬಳಿ ಬರುತ್ತಿದ್ದಂತೆ ಕೊಂಗ ಬೀಸಿ ಕೆಂಡದ ಮೇಲೆ ಇದ್ದ ಬೂದಿಯನ್ನು ತೆರವುಗೊಳಿಸಲಾಯಿತು. ಬಳಿಕ ಕಾಶಿಯ ವೇಷಧಾರಿ ಮಹದೇವಸ್ವಾಮಿ, ಅವರ ಹಿಂದೆ ಶ್ರೀಸ್ವಾಮಿಯ ದೇವರ ಗುಡ್ಡಪ್ಪನವರಾದ ನಂಜುಂಡೇಗೌಡ ಮತ್ತು ರಾಜೇಶ್‌ ಅವರು ಕೊಂಡ ಹಾಯ್ದರು.

ಕೊಂಡ ಹಾಯುವುದನ್ನು ಪ್ರತಿಯೊಬ್ಬರೂ ನೋಡಲೆಂದು ಬೆಳ್ಳಿ ಪರದೆಯ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ನೆರೆದಿದ್ದ ಸಾವಿರಾರು ಭಕ್ತರು ಕೊಂಡ ಹಾಯುವುದನ್ನು ತಮ್ಮ ಕಣ್ಣುಗಳಿಂದ ತುಂಬಿಕೊಂಡು ಬೀಡನಹಳ್ಳಿಯ ಶ್ರೀ ನಂದಿಬಸವೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾದರು.

ಇನ್ನು ಭಾನುವಾರ ಬಂಡಿಯುತ್ಸವ ನಡೆಯಿತು. ಇಂದು ಕೊಂಡೋತ್ಸವ ನೆರವೇರುವ ಮೂಲಕ ಬಂಡಿಕೊಂಡೋತ್ಸವ ಪೂರ್ಣಗೊಂಡಿತು. ಒಟ್ಟಾರೆ ಕಳೆದ 11 ವರ್ಷದಲ್ಲೇ  ಇಂದು ನಡೆದ 12ನೇ ಕೊಂಡೋತ್ಸವ ಭಾರಿ ವಿಜೃಂಭಣೆಯಿಂದ ಕೂಡಿತ್ತು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ