ಬೆಳಗಾವಿ: ಸೈಬರ್ ಕ್ರೈಂ ವಂಚಕರ ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆಗೆ ಶರಣಾದ ದಂಪತಿ. ಆತ್ಮಹತ್ಯೆಗೆ ಮುನ್ನ ವಯಸ್ಸಾದ ದಂಪತಿ ಇಂಗ್ಲಿಷ್ನಲ್ಲಿ ಬರೆದ ಡೆತ್ನೋಟ್ ಲಭ್ಯವಾಗಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ.
ವಿಷಯ ತಿಳಿದ ಬಳಿಕ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಪ್ರತಿಕ್ರಿಯಿಸಿ, ಸೈಬರ್ ವಂಚಕರು ಬೆದರಿಕೆ ಕರೆ ಮಾಡಿ ಡಯಾಗೊ ಅವರಿಂದ 50 ಲಕ್ಷ ರೂ.ಗೂ ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಆದರೂ ಅಷ್ಟಕ್ಕೇ ಸುಮ್ಮನಾಗದೇ ಮತ್ತೆ ಮತ್ತೆ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದು ತಮ್ಮ ಜೀವನವನ್ನೇ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.
ಇನ್ನು ತಮ್ಮ ಡೆತ್ ನೋಟ್ನಲ್ಲಿ, ದಂಪತಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿರುವುದಾಗಿ ಉಲ್ಲೇಖಿಸಿದ್ದಾರೆ. ಅದನ್ನು ತಮ್ಮ ಆಸ್ತಿಗಳನ್ನು ಮಾರಿ ಮರುಪಾವತಿಸಬೇಕೆಂದು ಹೇಳಿದ್ದಾರೆ ಎಂದು ಎಸ್ಪಿ ತಿಳಿಸಿದರು.
ಡೆತ್ನೋಟ್ನಲ್ಲಿ ಏನಿದೆ?: ಕೆಲ ದಿನಗಳ ಹಿಂದೆ ದೆಹಲಿ ಕ್ರೈಂ ಬ್ರ್ಯಾಂಚ್ನಿಂದ ನಮಗೆ ವಿಡಿಯೋ ಕರೆ ಬಂದಿತ್ತು. ಆ ಕರೆಯಲ್ಲಿ ನೀವು ಅಪರಾಧ ಒಂದರಲ್ಲಿ ಭಾಗಿಯಾಗಿದ್ದೀರಿ ಎಂದು ಬೆದರಿಕೆ ಹಾಕಲಾಗಿತ್ತು. ಬಳಿಕ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಭಯಗೊಂಡು ನಾವು ಅವರು ಹೇಳಿದ ಖಾತೆಗೆ ಹಣ ಹಾಕಿದ್ದೆವು.
ಹಣ ಪಾವತಿ ಮಾಡಿದ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಹಣ ನೀಡಬೇಕು ಒಂದು ವೇಳೆ ಹಣ ನೀಡದಿದ್ದರೆ ಅರೆಸ್ಟ್ ಮಾಡುತ್ತೇವೆ ಎಂದು ಬೆದರಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದಿದ್ದಾರೆ. ಡೆತ್ ನೋಟ್ನಲ್ಲಿ ದಂಪತಿ ತಮ್ಮ ದೇಹವನ್ನು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಗೆ ದಾನ ಮಾಡುವಂತೆ ಮನವಿ ಮಾಡಿದ್ದಾರೆ.
ಮೃತ ಡಿಯಾಗೋ ಮಹಾರಾಷ್ಟ್ರ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮತ್ತು ಇತರ ಪರೀಕ್ಷೆಗಳಿಗೆ ತರಬೇತಿ ನೀಡಿದ್ದರು. ದಂಪತಿಯ ಶವವನ್ನು ಹಸ್ತಾಂತರಿಸಿದ್ದರೂ ತಾಂತ್ರಿಕ ಕಾರಣಗಳಿಂದ ಬಿಐಎಂಎಸ್ ಶವಗಳನ್ನು ಸ್ವೀಕರಿಸಲಿಲ್ಲ. ನಂತರ ದಂಪತಿಯ ಮೃತ ಶರೀರವನ್ನು ಬೀಡಿ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಬೆಳಕಿಗೆ ಬಂದಿದ್ದು ಹೇಗೆ?: ವೃದ್ಧ ದಂಪತಿ ಮನೆಗೆ ಇಂದು ನೆರೆ ಮನೆಯ ಮಹಿಳೆ ಎಂದಿನಂತೆ ಬಂದಿದ್ದಾರೆ. ಎಷ್ಟು ಕರೆದರೂ ಬಾಗಿಲು ತೆಗೆಯದ ಕಾರಣ ಕಿಟಕಿಯಿಂದ ವೃದ್ಧ ದಂಪತಿಯ ಮೃತದೇಹ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ನಂದಗಡ ಠಾಣೆ ಪೊಲೀಸರು ಪರಿಶೀಲನೆ ಮಾಡಿ ಮೃತಪಟ್ಟಿರುವುದು ಗೊತ್ತಾದ ಬಳಿಕ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದರು.
Related

You Might Also Like
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...
ಅಧಿಕೃತ ಪರವಾನಿಗೆ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ
ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರ ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು...
ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಉಪಮುಖ್ಯಮಂತ್ರಿ ಡಿಕೆಶಿ ಸಲಹೆ
ಬೆಂಗಳೂರು: ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು...
KSRTC: ನಡು ರಸ್ತೆಯಲ್ಲೇ ಸುಟ್ಟು ಬೂದಿಯಾದ ಬಸ್ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಬನ್ನೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೈಸೂರು ವಿಭಾಗದ ಬಸ್ ಇಂಜಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನ ಮುಂದಿನ ಭಾಗ ಸುಟ್ಟು ಬೂದಿಯಾಗಿರುವ ಘಟನೆ ಇಂದು...