CRIMENEWSನಮ್ಮಜಿಲ್ಲೆ

ಬೆಳಗಾವಿ: ಸೈಬರ್‌ ಕ್ರೈಂ ವಂಚಕರ ಕಾಟ ತಾಳಲಾರದೇ ವೃದ್ಧ ದಂಪತಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸೈಬರ್‌ ಕ್ರೈಂ ವಂಚಕರ ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.

ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆಗೆ ಶರಣಾದ ದಂಪತಿ. ಆತ್ಮಹತ್ಯೆಗೆ ಮುನ್ನ ವಯಸ್ಸಾದ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ ಲಭ್ಯವಾಗಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಸೂಸೈಡ್‌ ಮಾಡಿಕೊಂಡಿದ್ದಾರೆ.

ವಿಷಯ ತಿಳಿದ ಬಳಿಕ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್‌ ಪ್ರತಿಕ್ರಿಯಿಸಿ, ಸೈಬರ್ ವಂಚಕರು ಬೆದರಿಕೆ ಕರೆ ಮಾಡಿ ಡಯಾಗೊ ಅವರಿಂದ 50 ಲಕ್ಷ ರೂ.ಗೂ ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಆದರೂ ಅಷ್ಟಕ್ಕೇ ಸುಮ್ಮನಾಗದೇ ಮತ್ತೆ ಮತ್ತೆ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದು ತಮ್ಮ ಜೀವನವನ್ನೇ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.

ಇನ್ನು ತಮ್ಮ ಡೆತ್ ನೋಟ್‌ನಲ್ಲಿ, ದಂಪತಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿರುವುದಾಗಿ ಉಲ್ಲೇಖಿಸಿದ್ದಾರೆ. ಅದನ್ನು ತಮ್ಮ ಆಸ್ತಿಗಳನ್ನು ಮಾರಿ ಮರುಪಾವತಿಸಬೇಕೆಂದು ಹೇಳಿದ್ದಾರೆ ಎಂದು ಎಸ್‌ಪಿ ತಿಳಿಸಿದರು.

ಡೆತ್‌ನೋಟ್‌ನಲ್ಲಿ ಏನಿದೆ?: ಕೆಲ ದಿನಗಳ ಹಿಂದೆ ದೆಹಲಿ ಕ್ರೈಂ ಬ್ರ‍್ಯಾಂಚ್‌ನಿಂದ ನಮಗೆ ವಿಡಿಯೋ ಕರೆ ಬಂದಿತ್ತು. ಆ ಕರೆಯಲ್ಲಿ ನೀವು ಅಪರಾಧ ಒಂದರಲ್ಲಿ ಭಾಗಿಯಾಗಿದ್ದೀರಿ ಎಂದು ಬೆದರಿಕೆ ಹಾಕಲಾಗಿತ್ತು. ಬಳಿಕ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಭಯಗೊಂಡು ನಾವು ಅವರು ಹೇಳಿದ ಖಾತೆಗೆ ಹಣ ಹಾಕಿದ್ದೆವು.

ಹಣ ಪಾವತಿ ಮಾಡಿದ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಹಣ ನೀಡಬೇಕು ಒಂದು ವೇಳೆ ಹಣ ನೀಡದಿದ್ದರೆ ಅರೆಸ್ಟ್‌ ಮಾಡುತ್ತೇವೆ ಎಂದು ಬೆದರಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದಿದ್ದಾರೆ. ಡೆತ್ ನೋಟ್‌ನಲ್ಲಿ ದಂಪತಿ ತಮ್ಮ ದೇಹವನ್ನು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಗೆ ದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಮೃತ ಡಿಯಾಗೋ ಮಹಾರಾಷ್ಟ್ರ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮತ್ತು ಇತರ ಪರೀಕ್ಷೆಗಳಿಗೆ ತರಬೇತಿ ನೀಡಿದ್ದರು. ದಂಪತಿಯ ಶವವನ್ನು ಹಸ್ತಾಂತರಿಸಿದ್ದರೂ ತಾಂತ್ರಿಕ ಕಾರಣಗಳಿಂದ ಬಿಐಎಂಎಸ್ ಶವಗಳನ್ನು ಸ್ವೀಕರಿಸಲಿಲ್ಲ. ನಂತರ ದಂಪತಿಯ ಮೃತ ಶರೀರವನ್ನು ಬೀಡಿ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಬೆಳಕಿಗೆ ಬಂದಿದ್ದು ಹೇಗೆ?: ವೃದ್ಧ ದಂಪತಿ ಮನೆಗೆ ಇಂದು ನೆರೆ ಮನೆಯ ಮಹಿಳೆ ಎಂದಿನಂತೆ ಬಂದಿದ್ದಾರೆ. ಎಷ್ಟು ಕರೆದರೂ ಬಾಗಿಲು ತೆಗೆಯದ ಕಾರಣ ಕಿಟಕಿಯಿಂದ ವೃದ್ಧ ದಂಪತಿಯ ಮೃತದೇಹ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ‌ನಂದಗಡ‌ ಠಾಣೆ ಪೊಲೀಸರು ಪರಿಶೀಲನೆ ಮಾಡಿ ಮೃತಪಟ್ಟಿರುವುದು ಗೊತ್ತಾದ ಬಳಿಕ ಮೃತ ದೇಹಗಳನ್ನು ಮರಣೋತ್ತರ ‌ಪರೀಕ್ಷೆಗೆ ಬಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಿದರು.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ