CrimeNEWSನಮ್ಮಜಿಲ್ಲೆ

ಬೆಳಗಾವಿ: ಪ್ರೇಮಿಗಳೆಂದು ಅಕ್ಕ-ತಮ್ಮನ ಮೇಲೆ ಮಾರಣಾಂತಿಕ ಹಲ್ಲೆಮಾಡಿದ ಯುವಕರ ಗುಂಪು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಅಕ್ಕ-ತಮ್ಮನನ್ನು ಪ್ರೇಮಿಗಳೆಂದು ಅಂದುಕೊಂಡ 16 ಮಂದಿ ಇದ್ದ ಯುವಕರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ ನೈತಿಕ ಪೊಲೀಸ್​ಗಿರಿ ಮೆರೆದಿರುವ ಘಟನೆ ಜಿಲ್ಲೆಯ ಕೋಟೆ ಕೆರೆ ಆವರಣದಲ್ಲಿ ನಡೆದಿದೆ.

ಘಟನೆ ಸಂಬಂಧ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, 15 ಮಂದಿ ತಲೆಮಾರಿಸಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ 24 ವರ್ಷದ ಯುವತಿ ಹಾಗೂ 21 ವರ್ಷದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ ತಾಲೂಕು ನಿವಾಸಿಗಳಾದ ಸಂತ್ರಸ್ತರಿಬ್ಬರು ಯುವನಿಧಿಗೆ ಅರ್ಜಿ ಸಲ್ಲಿಸಲು ಬಂದಿದ್ದರು. ಈ ವೇಳೆ ಯುವತಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದು, ಯುವಕ ಹಣೆ ಮೇಲೆ ತಿಲಕ ಇಟ್ಟಿದ್ದ. ಇದನ್ನು ನೋಡಿದ ಮುಸ್ಲಿಂ ಸಮುದಾಯದ ಆರೋಪಿಗಳು ಇಬ್ಬರೂ ಅನ್ಯಕೋಮಿನವರು ಎಂದು ತಮಗೆ ತಾವೆ ಅಂದುಕೊಂಡು ಈ ಇವರಿಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ.

ಆ ಬಳಿಕ ಕೊಠಡಿ ಒಂದರಲ್ಲಿ ಇಬ್ಬರನ್ನೂ ಕೂಡಿ ಹಾಕಿ ಅವರ ಮೊಬೈಲ್​ಗಳನ್ನು ಕಸಿದುಕೊಂಡು, ಚಿತ್ರಹಿಂಸೆ ನೀಡಿದ್ದಾರೆ. ಈ ವೇಳೆ ಯುವತಿ ಉಪಾಯ ಮಾಡಿ ತನ್ನ ಪೋಷಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ವಾಟ್ಸ್​ಆ್ಯಪ್​ನಲ್ಲಿ ಲೊಕೇಷನ್​ ಶೇರ್​ ಮಾಡಿದ್ದಾಳೆ.

ವಿಷಯ ತಿಳಿದ ಪೋಷಕರು ಲೈವ್ ಲೋಕೇಶನ್ ಆಧರಿಸಿ ಸ್ಥಳಕ್ಕೆ ಬಂದು ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಪೋಷಕರು ಬರುತ್ತಿದ್ದಂತೆ ಪುಂಡರ ಗ್ಯಾಂಗ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿದೆ. ಈ ವೇಳೆ 16 ಮಂದಿಯಲ್ಲಿ 15 ಜನ ಪರಾರಿಯಾಗಿದ್ದು, ಒಬ್ಬ ಸಿಕ್ಕಿ ಬಿದ್ದಿದ್ದಾನೆ.

ಇತ್ತ ಗಂಭೀರವಾಗಿ ಗಾಯಗೊಂಡಿರುವ ಸಹೋದರಿ, ಸಹೋದರನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ