NEWSನಮ್ಮಜಿಲ್ಲೆ

ಬಳ್ಳಾರಿ: ಒತ್ತುವರಿ ಕಾರ್ಯಾಚರಣೆಲಿ ನೆಲೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ – ಎಎಪಿ ಜಿಲ್ಲಾಧ್ಯಕ್ಷ ಮಂಜುನಾಥ್

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ನಗರದ 24ನೇ ವಾರ್ಡ್‌ನ ಗಿರಿನಗರದಲ್ಲಿ ಕಾಲುವೆ ಒತ್ತುವರಿಯಾಗಿದೆ ಎಂದು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದು, ಅಲ್ಲಿನ ನಿವಾಸಿಗಳು ಬೀದಿಗೆ ಬೀಳುವ ಆತಂಕದಲ್ಲಿದ್ದು, ಅವರಿಗೆ ಮನೆಗಳನ್ನು ತೆರವು ಮಾಡಲು ಐದು ದಿನ ಅವಕಾಶ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಬಳ್ಳಾರಿ ಜಿಲ್ಲಾಧ್ಯಕ್ಷ ಮಂಜುನಾಥ್ ಅಧಿಕಾರಿಗಳಿಗೆ ಮನವಿ ಮಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತೆರವು ಕಾರ್ಯಾಚರಣೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಮಂಜುನಾಥ್ ಸ್ಥಳೀಯರ ಕಷ್ಟಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಅಧಿಕಾರಿಗಳು ಒಂದು ವಾರದ ಮುಂಚೆಯೇ ನೋಟಿಸ್ ನೀಡಿದ್ದಾರೆ. ಆದರೆ, ಇಲ್ಲಿನ ಮುಗ್ದಜನಗಳಿಗೆ ಕಾನೂನಿನ ಅರಿವು ಇಲ್ಲ.

ಈಗ ಅಧಿಕಾರಿಗಳು ತೆರವುಗೊಳಿಸಲು ಬಂದಿದ್ದು, ಜನ ಬೀದಿಗೆ ಬೀಳುವ ಭಯದಲ್ಲಿದ್ದಾರೆ, ಅವರು ಜಾಗವನ್ನು ತೆರವು ಮಾಡುತ್ತಾರೆ. ಆದರೆ, ಇನ್ನು ಐದು ದಿನ ಸಮಯ ಕೊಡಿ ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಜನರು ಜಾಗವನ್ನು ಖಾಲಿ ಮಾಡಲ್ಲ ಎಂದು ಹೇಳುತ್ತಿಲ್ಲ. ಆದರೆ, ಅವರಿಗೆ ಯಾವ ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡುತ್ತಿದ್ದಾರೆ. ಶಾಸಕರು ಜಾಗ ಮಾಡಿಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ, ಅವರು ಸದ್ಯ ಊರಲ್ಲಿಲ್ಲ.

ಹೀಗಾಗಿ ಇವರಿಗೆ ಸಮಸ್ಯೆಯಾಗಿದೆ. ಸರ್ಕಾರ ಮತ್ತು ಜನಪ್ರತಿನಿಧಿಗಳು, ಜಿಲ್ಲಾಡಳಿತ ಕೂಡಲೇ ಮನೆ ಕಳೆದುಕೊಳ್ಳುತ್ತಿರುವ ಬಡಜನರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ