NEWSಬೆಂಗಳೂರು

ವಾಯುವಿಹಾರಿಗಳಿಗೆ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಉದ್ಯಾನವನಗಳಲ್ಲಿ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಪರಿಸರದ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಸಾಂಸ್ಕೃತಿಕ ಮತ್ತು ಇನ್ನಿತರ ಕಲಾ ಚಟುವಟಿಕೆಗಳನ್ನೊಳಗೊಂಡ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಉದ್ಯಾನವನಗಳು ಬೆಂಗಳೂರಿನ ನಾಗರಿಕರಿಗೆ ಉತ್ತಮವಾದ ಆಮ್ಲಜನಕ ಮತ್ತು ಮನೋಲ್ಲಾಸವನ್ನು ಒದಗಿಸುವ ಮೂಲವಾಗಿದೆ. “ಉದ್ಯಾನ ನಗರಿ”ಯಲ್ಲಿ ಪಾಲಿಕೆಯು 1,287 ಉದ್ಯಾನವನಗಳನ್ನು ಅಭಿವೃದ್ಧಿಗೊಳಿಸಿ ನಿರ್ವಹಣೆ ಮಾಡಲಾಗುತ್ತಿದೆ.

ಉದ್ಯಾನವನಗಳಿಗೆ ವೀಕ್ಷಿಸಲು ಬರುವಂತಹ ಸಾರ್ವಜನಿಕರಿಗೆ ಮತ್ತು ವಾಯುವಿಹಾರಿಗಳಿಗೆ ಅನುಕೂಲವಾಗಲೆಂದು ಉದ್ಯಾನವನಗಳಲ್ಲಿ “ಬೆಂಗಳೂರು ಹಬ್ಬ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನಮ್ಮ ಪಾರಂಪರಿಕ ಸಂಸ್ಕೃತಿ, ಕಲೆಗಳು ಮತ್ತು ಇನ್ನಿತರ ಕಲಾ ಚಟುವಟಿಕೆಗಳಾದ ಡೊಳ್ಳುಕುಣಿತ, ಜಾನಪದ ಗಾಯನ, ಸುಗಮ ಸಂಗೀತ ಮತ್ತು ಜಾನಪದ ಕಲಾತಂಡಗಳನ್ನು ಒಳಗೊಂಡಂತೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 27 ವಿಧಾನಸಭಾ ಕ್ಷೇತ್ರಗಳಲ್ಲಿ 1 ವಿಧಾನ ಸಭಾ ಕ್ಷೇತ್ರಕ್ಕೆ ಒಂದರಂತೆ 27 ಉದ್ಯಾನವನಗಳಲ್ಲಿ ಮೇ-2025 ರಿಂದ ಮಾರ್ಚ್-2026 ರವರೆಗೆ ವರ್ಷವಿಡೀ ಸಾಂಸ್ಕೃತಿಕ ಮತ್ತು ಮಕ್ಕಳಿಗೆ ಉತ್ತೇಜಿಸುವ ಕಲೆಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ನಾಳೆ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ: ನಗರದ ಉದ್ಯಾನವನಗಳಲ್ಲಿ ಹಮ್ಮಿಕೊಂಡಿರುವ “ಬೆಂಗಳೂರು ಹಬ್ಬ” ಕಾರ್ಯಕ್ರಮವನ್ನು ಬಸವನಗುಡಿ ವ್ಯಾಪ್ತಿಯ ಬ್ಯೂಗಲ್ ರಾಕ್ ಉದ್ಯಾನವನದಲ್ಲಿ ನಾಳೆ 17-05-2025 ರ ಸಂಜೆ 05.00 ಗಂಟೆಗೆ ಮಾನ್ಯ ಸ್ಥಳೀಯ ಶಾಸಕರಿಂದ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ.

ಈ ವೇಳೆ ಪಾಲಿಕೆಯ ಆಡಳಿತಗಾರರು, ಮುಖ್ಯ ಆಯುಕ್ತರು, ವಿಶೇಷ ಆಯುಕ್ತರುಗಳು, ವಲಯ ಆಯುಕ್ತರುಗಳು ಸೇರಿದಂತೆ ಇನ್ನಿತರೆ ಗಣ್ಯರುಗಳು/ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಾಗೃತಿ ಜಾಥಾ ಕಾರ್ಯಕ್ರಮ: ಕಾರ್ಯಕ್ರಮಕ್ಕೂ ಮುಂಚಿತವಾಗಿ ರಾಮಕೃಷ್ಣ ಮಠ ವೃತ್ತದಿಂದ ಬ್ಯೂಗಲ್ ರಾಕ್ ಉದ್ಯಾನವನದವರೆಗೆ “ಬೆಂಗಳೂರು ಹಬ್ಬ” ಕುರಿತಾಗಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಕೂಡಾ ಹಮ್ಮಿಕೊಳ್ಳಲಾಗಿದ್ದು, ನಾಗರಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಯಶಸ್ವಿಗೊಳಿಸಬೇಕಾಗಿ ಕೋರಿದೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...