ನಾಗರಿಕರ ಕ್ರಿಯಾಶೀಲತೆ, ಸ್ವಯಂ ಸೇವಾ ಚಟುವಟಿಕೆ, ಪರ್ಯಾಯ ಶಿಕ್ಷಣದ ಕೇಂದ್ರವೇ ಬೆಂಗಳೂರು: ಉಮಾ ಮಹದೇವನ್ ಅಭಿಮತ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರವು ನಾಗರಿಕರ ಕ್ರಿಯಾಶೀಲತೆ, ಸ್ವಯಂ ಸೇವಾ ಚಟುವಟಿಕೆ ಹಾಗೂ ಪರ್ಯಾಯ ಶಿಕ್ಷಣದ ಕೇಂದ್ರವಾಗಿದೆ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ತಿಳಿಸಿದರು.
ಪಾಲಿಕೆಯ ಹವಾಮಾನ ಕ್ರಿಯಾ ಕೋಶದ ವತಿಯಿಂದ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಇಂದು ಏರ್ಪಡಿಸಿದ್ದ ಲೇಖನಾ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೃಜನಾತ್ಮಕ ಶಕ್ತಿಯನ್ನು ಬಳಸಿಕೊಂಡು ಹವಾಮಾನ ಬದಲಾವಣೆಗೆ ಸಂಬಂಧಿತ ವಿಶ್ಲೇಷಿತ ವಿವರಗಳನ್ನೊಳಗೊಂಡ ಕ್ರಿಯಾ ಯೋಜನೆಯನ್ನು ರಚಿಸುವುದು ಅಗತ್ಯವಿದೆ ಎಂದು ತಿಳಿಸಿದರು.
ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಡಳಿತಗಾರರದ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರು ಹವಾಮಾನ ಬದಲಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ಹವಾಮಾನ ಕ್ರಿಯಾ ಯೋಜನೆಯನ್ನು ಪ್ರಕಟಿಸಲಾಗಿದ್ದು, ಅನೇಕ ಇಲಾಖೆಗಳು ಈ ಕ್ರಮಗಳನ್ನು ಅನುಷ್ಠಾನಗೊಳಿಸಬೇಕಾಗಿದೆ ಎಂದು ಹೇಳಿದರು.
ನಾಗರೀಕರೆ ನಗರದ ಶಕ್ತಿಯಾಗಿದ್ದು, ನಾವೆಲ್ಲಾ ಒಟ್ಟಾಗಿ ಸೇರಿ ನಗರದಲ್ಲಿ ಹವಾಮಾನ ಬದಲಾವಣೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಿದೆ ಎಂದು ತಿಳಿಸಿದರು.
ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ಅಧ್ಯಕ್ಷೆಯಾದ ಪ್ರೀತಿ ಗೆಹ್ಲೋಟ್ ಮಾತನಾಡಿ, ಹವಾಮಾನ ವೈಪರಿತ್ಯ ನಿರ್ವಹಣೆ ಸಂಬಂಧಿಸಿದ ಚಟುವಟಿಕೆಗಳಿಗೆ ಸರ್ಕಾರಿ ಇಲಾಖೆಗಳು, ಹಿರಿಯ ಅಧಿಕಾರಿಗಳ ಜತೆಗೆ ಸರ್ಕಾರೇತರರಿಂದಲೂ ಸಹಕಾರ ಅಗತ್ಯವಿದೆ. ಹವಾಮಾನ ಕ್ರಿಯಾ ಕೋಶದೊಂದಿಗೆ ಜವಾಬ್ದಾರಿ ಹಾಗೂ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸಹಕಾರಯುತ ವಾತಾವರಣವನ್ನು ನಿರ್ಮಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಸರ್ಕಾರದ ಜತೆ ನಾಗರಿಕರು ಕೈ ಜೋಡಿಸಿ ಏಕಮತವಾಗಿ ಕಾರ್ಯನಿರ್ವಹಿಸಿದರೆ, ನಮ್ಮ ಪ್ರಯತ್ನಗಳು ಪರಿಣಾಮಕಾರಿ ಕೊಡುಗೆಗಳನ್ನು ನೀಡಲು ಸಾಧ್ಯವಾಗುತ್ತದೆ. ಒಂದೇ ದೃಷ್ಟಿಕೋನದ ಮೇಲೆ, ಇರುವ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಕಾರ್ಯಗತ ಮಾಡಿದಾಗ ಫಲಿತಾಂಶಗಳು ಹೆಚ್ಚು ಪರಿಣಾಮಕಾರಿ ಆಗಿರುತ್ತವೆಂದು ತಿಳಿಸಿದರು.
ಈ ಕಾರ್ಯಾಗಾರದಲ್ಲಿ 40ಕ್ಕೂ ಹೆಚ್ಚು ಸಲಹೆಗಾರರು ಭಾಗವಹಿಸಿ, ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದರು. ಈ ವೇಳೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಪ್ರಭಾಶ್ ಚಂದ್ರ ರೇ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್, ಯೋಜನೆ ವಿಭಾಗದ ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
Related

You Might Also Like
KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ
2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ...
ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್ ಮತ್ತ್ಯಾರಿಗೆ ಉಚಿತ!
ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ...
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...
KKRTC ಯಾದಗಿರಿ: ಇಬ್ಬರು ವಿಭಾಗಮಟ್ಟದ ಅಧಿಕಾರಗಳ ವಿರುದ್ಧ ಜಾತಿ ನಿಂದನೆ, ಲೈಂಗಿಕ ಕಿರುಕುಳ-2ಪ್ರತ್ಯೇಕ ಪ್ರಕಣಗಳು ದಾಖಲು
ಯಾದಗಿರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಇಬ್ಬರು ಪ್ರಮುಖ ಅಧಿಕಾರಿಗಳ ವಿರುದ್ಧ ವಿಭಾಗದ ಸಿಬ್ಬಂದಿಗಳೇ ಪ್ರತ್ಯೇಕವಾಗಿ ದೂರು ನೀಡಿದ್ದು, ವಾರದೊಳಗೆ ಅಧಿಕಾರಿಗಳ ಮೇಲೆ ಪ್ರತ್ಯೇಕ ಎರಡು...