NEWSನಮ್ಮಜಿಲ್ಲೆರಾಜಕೀಯ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪರಿಷತ್‌ ಚುನಾವಣೆ -2024 ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಳ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ.

ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ