NEWSನಮ್ಮರಾಜ್ಯ

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೈ ಬಿಡಲು ಆಗ್ರಹಿಸಿ ಸಿಎಂಗೆ ಸುದೀರ್ಘ ಪತ್ರ ಬರೆದ ಸಿದ್ದು

ಕರ್ನಾಟಕ ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಹೊಡಿಸಿರುವ ಸುಗ್ರೀವಾಜ್ಞೆ ರದ್ದುಪಡಿಸಲು ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಕೈಬಿಡಬೇಕು ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಡಿಸಿರುವ ಸುಗ್ರೀವಾಜ್ಞೆಯನ್ನು ರದ್ದುಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಪತ್ರ ಬರೆದು ಆಗ್ರಹಿಸಿದ್ದಾರೆ.

ಅಧಿಕಾರಿಗಳು ದುಡ್ಡು ಹೊಡೆಯುತ್ತಾರೆ ಎಂದು ಹೇಳಿ ಕಾಯಿದೆಯನ್ನು ರದ್ದು ಪಡಿಸುವುದರಲ್ಲಿ ಅರ್ಥವಿಲ್ಲ. ಅಂತಹ ಅಧಿಕಾರಿಗಳ ವಿರುದ್ಧ ಕಣ್ಣಿಟ್ಟು ಕ್ರಮ ಕೈಗೊಳ್ಳಬೇಕು. ಇದೀಗ ಕೈಗೊಂಡಿರುವ ಕ್ರಮದಿಂದ ಬಹುರಾಷ್ಟ್ರೀಯ ಕಂಪನಿಗಳಷ್ಟೇ ಪ್ರಯೋಜನ ಪಡೆಯಲಿವೆ  ಎಂದು ಹೇಳಿದ್ದಾರೆ.

ಸಿಎಂ ಬಿಎಸ್ ವೈ ಅವರಿಗೆ ಸುದೀರ್ಘ ಪತ್ರ ಬರೆದಿರುವ ಅವರು ಕರ್ನಾಟಕ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲು ಹೊರಡಿಸಿರುವ ಸುಗ್ರೀವಾಜ್ಞೆಯನ್ನು ರದ್ದುಪಡಿಸಬೇಕು. ಕೇರಳ ರಾಜ್ಯದಲ್ಲಿ ಕುಟುಂಬವೊಂದು ಗರಿಷ್ಠ 20ಎಕರೆ ಜಮೀನು ಹೊಂದಬಹುದು ತಮಿಳುನಾಡಿನಲ್ಲಿ 30 ಎಕರೆ ಆಂಧ್ರಪ್ರದೇಶದಲ್ಲಿ 54 ಎಕರೆ ಮತ್ತು ಬಿಹಾರದಲ್ಲಿ 45 ಎಕರೆ ಭೂಮಿ ಹೊಂದಬಹುದಾಗಿದೆ. ಆದರೆ ಕರ್ನಾಟಕದಲ್ಲಿ216ಎಕರೆ ಭೂಮಿಯನ್ನು ಹೊಂದಲು ಅವಕಾಶ ಕಲ್ಪಿಸಲಾಗುತ್ತಿದೆ.  ಇನ್ನು ಎಲ್ಲಾ ರಾಜ್ಯಗಳಲ್ಲಿ ತೋಟದ ಭೂಮಿಯನ್ನು 10 ಎಕರೆ ಹೊಂದ ಬಹುದಾದರೆ ನಮ್ಮಲ್ಲಿ 56 ಎಕರೆ ಮತ್ತು ನೀರಾವರಿ ಭೂಮಿಯನ್ನು 80 ಎಕರೆಯವರೆಗೆ ಹೊಂದಲು ಅವಕಾಶ ಮಾಡಿಕೊಡಲು  ಹೊರಟಿರುವುದರಿಂದ ನೀರಾವರಿ ಭೂಮಿಯು ಬಂಡವಾಳಶಾಹಿಗಳ ಪಾಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಾಗುತ್ತದೆ ಎಂದು ರಾಜ್ಯ ಸರಕಾರ ವಾದಿಸುತ್ತಿದೆ. ವಾಸ್ತವ ಏನೆಂದರೆ ದೇಶಗಳ ಮುಂದಿನ ಭವಿಷ್ಯ ರೂಪುಗೊಳ್ಳುವುದೇ ಜ್ಞಾನ ಆಧಾರಿತ ಆರ್ಥಿಕತೆಯಿಂದ ಲೇ  ಹೊರತು ಭೂಮಿಯನ್ನು ಆಧರಿಸಿ ಅಲ್ಲ ಎಂಬುದನ್ನು ತಿಳಿಯಬೇಕು ಎಂದು ಸಲಹೆ ನೀಡಿದ್ದಾರೆ.

ಪತ್ರವನ್ನು ಟ್ವೀಟ್ ಮಾಡಿರುವ ಅವರು ಕೇಂದ್ರ ಹಾಗೂ ರಾಜ್ಯಗಳಲ್ಲಿ ಒಂದೇ ಪಕ್ಷದ ಸರಕಾರಗಳಿದ್ದರೂ ಸ್ವರ್ಗ ಸೃಷ್ಟಿಯಾಗುತ್ತದೆ ಎಂದು ನಂಬಿಸಿ ರೈತರು, ಬಡವರು, ಹಿಂದುಳಿದವರು, ದಮನಿತರು ಹಾಗೂ ಶೋಷಣೆಗೊಳಗಾದವರ ಮೈಯಲ್ಲಿ ಜಾಗವೇ ಇಲ್ಲದಷ್ಟು ಪ್ರಮಾಣದಲ್ಲಿ ಇರಿಯುತ್ತಿದ್ದರೆ, ಇದು ರೈತರ ಹೆಸರು ಹೇಳಿ ಅಧಿಕಾರಕ್ಕೆ ಬಂದ ನಿಮ್ಮಂಥವರಿಗೆ ಶೋಭೆ ತರುವ ವಿಚಾರವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಹೆಸರಿನಲ್ಲಿ ಕಾಯ್ದೆಯ ಆತ್ಮವನ್ನೇ ಕೊಲ್ಲಲು ಹೊರಟಿರುವ ತೀರ್ಮಾನವನ್ನು ತಕ್ಷಣವೇ ಕೈಬಿಡಬೇಕು ಜತೆಗೆ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲು ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಈ ಕ್ಷಣದಿಂದಲೇ ರದ್ದುಪಡಿಸಬೇಕು ಈ ಎರಡೂ ಕಾಯಿದೆಗಳನ್ನು ಕೇಂದ್ರವು ಕೈಬಿಡುವಂತೆ ರಾಜ್ಯ ಸರಕಾರ ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ