ಬಿಡದಿ ಟೌನ್ ಶಿಪ್: ರೈತರ ವಿರೋಧದ ನಡುವೆಯೂ ಎಕರೆಗೆ 2.14 ಕೋಟಿ ರೂ. ದರ ನಿಗದಿ- ಭೂಸ್ವಾಧೀನಕ್ಕೆ ಮುಂದಾದ ಸರ್ಕಾರ
ಕಳೆದ ಒಂದೂವರೆ ವರ್ಷದಿಂದ ಯೋಜನೆ ವಿರೋಧಿಸಿ ರೈತರು ನಿರಂತರ ಹೋರಾಟ ಮಾಡುತ್ತಿದ್ದಾರೆ. ಹೀಗಿದ್ದರೂ ಕೂಡ ಬಿಡದಿ ಟೌನ್ ಶಿಪ್ ಯೋಜನೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ತಮ್ಮ ಪಟ್ಟು ಬಿಡದೇ ಟೌನ್ ಶಿಪ್ ನಿರ್ಮಾಣದ ಪ್ರಕ್ರಿಯೆ ಮುಂದುವರಿಸಿದ್ದಾರೆ.

- ಯೋಜನಾ ವ್ಯಾಪ್ತಿಗೆ ಒಳಪಡುತ್ತಿರುವ 9 ಕಂದಾಯ ಗ್ರಾಮಗಳ ಪೈಕಿ ಆರಂಭಿಕವಾಗಿ ಪ್ರಸ್ತುತ 3 ಗ್ರಾಮಗಳ 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ
ರಾಮನಗರ: ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಬಿಡದಿ ಟೌನ್ ಶಿಪ್ಗೆ ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಪ್ರತಿ ಎಕರೆಗೆ 2.14 ಕೋಟಿ ರೂ. ಬೆಲೆ ನಿಗದಿ ಮಾಡಲಾಗಿದೆ.
ಈ ಯೋಜನಾ ವ್ಯಾಪ್ತಿಗೆ ಒಳಪಡುತ್ತಿರುವ 9 ಕಂದಾಯ ಗ್ರಾಮಗಳ ಪೈಕಿ ಆರಂಭಿಕವಾಗಿ ಪ್ರಸ್ತುತ 3 ಗ್ರಾಮಗಳ 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ ಮಾಡಲಾಗಿದೆ.
ಅವುಗಳಲ್ಲಿ ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮದ ಸುಮಾರು 754 ರೈತರ ಜಮೀನುಗಳ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ರೈತರು ಸೂಕ್ತ ದಾಖಲೆ ಸಲ್ಲಿಸಿ ಪರಿಹಾರ ಪಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ.
ಇದರಲ್ಲಿ ಪ್ರತಿ ಎಕರೆಗೆ ಕನಿಷ್ಠ 2.14 ಕೋಟಿ ರೂ. ದರ ನಿಗದಿ ಮಾಡಿದೆ. ಆದರೆ, ಈ ನಡುವೆಯೂ ರೈತರು ನೀವು ಗುಂಟೆಗೇ ಕೋಟಿ ರೂ.ಕೊಟ್ಟರು ನಾವು ಜಮೀನು ಕೊಡುವುದಿಲ್ಲ ಎಂದು ಹೋರಾಟ ಮಾಡುತ್ತಿದ್ದಾರೆ.
ಅದು ಕಳೆದ ಒಂದೂವರೆ ವರ್ಷದಿಂದ ಯೋಜನೆ ವಿರೋಧಿಸಿ ರೈತರು ನಿರಂತರ ಹೋರಾಟ ಮಾಡುತ್ತಿದ್ದಾರೆ. ಹೀಗಿದ್ದರೂ ಕೂಡ ಬಿಡದಿ ಟೌನ್ ಶಿಪ್ ಯೋಜನೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ತಮ್ಮ ಪಟ್ಟು ಬಿಡದೇ ಟೌನ್ ಶಿಪ್ ನಿರ್ಮಾಣದ ಪ್ರಕ್ರಿಯೆ ಮುಂದುವರಿಸಿದ್ದಾರೆ.
ಇತ್ತ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರಿಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸಾಥ್ ನೀಡಿದ್ದು, ರೈತರ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದ್ದು, ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Related









