NEWSನಮ್ಮಜಿಲ್ಲೆನಮ್ಮರಾಜ್ಯ

ಫೆ.1ರಂದು ಸಾರಿಗೆ ನೌಕರರ ಬೆಂಗಳೂರು ಚಲೋ ಬೃಹತ್‌ ಪ್ರತಿಭಟನೆ : ಅದಿಮೂರ್ತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.1ರಂದು ಬೆಂಗಳೂರು ಚಲೋ ಬೃಹತ್‌ ಪ್ರತಿಭಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು KSRTC ಸ್ಟಾಪ್ & ವರ್ಕರ್ಸ್ ಯೂನಿಯನ್ ಬಳ್ಳಾರಿ ವಿಭಾದ ಅದ್ಯಕ್ಷ ಎಚ್.ಎ. ಅದಿಮೂರ್ತಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಟಾಪ್ ಆಂಡ್ ವರ್ಕರ್ಸ್‌ ಫೆಡರೇಷನ್‌ ನೇತೃತ್ವದಲ್ಲಿ ಆಯೋಜನೆ ಮಾಡುತ್ತಿರುವ ಈ ಕಾರ್ಯಕ್ರಮದಲ್ಲಿ ನೌಕರರ ವಿವಿಧ ಬೇಡಿಕೆಗಳ ಈಡೇರಿಸಿಕೊಳ್ಳುವ ಸಲುವಾಗಿ ಸರ್ಕಾರದ ಮೇಲೆ ಒತ್ತಡ ಹೇರಲು‌ ನಿವೃತ್ತ ನೌಕರರು ಸೇರಿದಂತೆ ಸಮಸ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು ಚಲೋ ಬೃಹತ್‌ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು (ನಿವೃತ್ತ ನೌಕರರು ಸೇರಿ)ಭಾಗವಹಿಸಿ ಹೋರಾಟವನ್ನು ಯಶಸ್ಸು ಗೊಳಿಸಬೇಕು ಎಂದು ಕೋರಿದ್ದಾರೆ.

ಇನ್ನು ಪ್ರಮುಖ ಬೇಡಿಕೆಗಳು ಯಾವುವು ಎಂದರೆ ಮೊದಲನೆಯದಾಗಿ 1/1/ 2020ರಿಂದ ನಿವೃತ್ತ ನೌಕರರಿಗೂ ಸೇರಿದಂತೆ ಹಾಲಿ ವೃತ್ತಿ ನಿತರ ಎಲ್ಲ ನೌಕರರಿಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಬೇಕು.

ಎರಡನೆಯದಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಪಘಾತವಾದಾಗ ಹಿಟ್& ರನ್ ಪ್ರಕರಣದಲ್ಲಿ ಚಾಲಕರಿಗೆ ವಿಧಿಸುವ ಶಿಕ್ಷೆಯನ್ನು ರದ್ದು ಪಡಿಸಬೇಕು.

ಮೂರನೆಯದಾಗಿ 1/1/2024 ರಿಂದ ಹೊಸ ಕೈಗಾರಿಕೆ ಒಪ್ಪಂದ ಮಾಡುವ ಮೂಲಕ ಅಗ್ರಿಮೆಂಟ್‌ ಮಾಡಲು ಎಲ್ಲ ಸಂಘಟನೆಗಳ ಮುಖಂಡ ಸಭೆ ಕರೆದು ಚರ್ಚಿಸಬೇಕು. ಇನ್ನು ನಾಲ್ಕನೆಯದಾಗಿ ನಿವೃತ್ತ ನೌಕರರಿಗೆ ಕೊಡಬೇಕಿರುವ ಗ್ರಾಚ್ಯುಟಿ ಹಾಗೂ ಇತರೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು.

ಇವುಗಳ ಜತೆಗೆ ಸದ್ಯ ಪ್ರಚಲಿತದಲ್ಲಿರುವ ಶಕ್ತಿ ಯೋಜನೆಯಡಿ ಸರ್ಕಾರದಿಂದ ಸಂಸ್ಥೆಗೆ ಬರಬೇಕಾದ ಸಂಪೂರ್ಣ ಹಣ ಪಾವತಿಸಬೇಕು. 6.ಶಕ್ತಿ ಯೋಜನೆಯಿಂದ ನಿರ್ವಾಹಕರಿಗೆ ಆಗುತ್ತಿರುವ ಕಿರುಕುಳ ಹಿಂಸೆ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...