CrimeNEWSನಮ್ಮಜಿಲ್ಲೆ

ದಿನಸಿ ಹೊತ್ತು ಹೊರಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿ: ಬೈಕ್‌ನಿಂದ ಬಿದ್ದ ಮಹಿಳೆ ಮೇಲೆ ಹರಿದ ಬಸ್‌

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆ ಮೃತಪಟ್ಟಿದ್ದಾರೆ.

ಧಾರವಾಡ ಮೂಲದ ವಿದ್ಯಾಶ್ರೀ (32) ಮೃತ ಮಹಿಳೆ. ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆ ಪಕ್ಕದಲ್ಲಿ ದಿನಸಿ ಹೊತ್ತು ಹೊರಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿಯಾಗಿತ್ತು. ಈ ವೇಳೆ ವೃದ್ಧನ ಚೀಲಕ್ಕೆ ಬೈಕ್‌ನಲ್ಲಿ ಕುಳಿತಿದ್ದ ವಿದ್ಯಾಶ್ರೀ ಕೈ ತಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ ಬೈಕ್‌ ಹಿಂದಿನಿಂದ ಬರುತ್ತಿದ್ದ ಬಸ್‌ ಚಕ್ರದಡಿ ಬಿದ್ದು ಮಹಿಳೆ ಸ್ಥಳದಲ್ಲೇ ಅಸುನೀಗಿದ್ದಾರೆ.

ಅದೃಷ್ಟವಶಾತ್‌ ಎಂಬಂತೆ ಬೈಕ್ ಸವಾರ ಬಚಾವ್ ಆಗಿದ್ದಾರೆ. ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಬಸ್‌ನ ಚಕ್ರ ತಲೆಯ ಮೇಲೆ ಹರಿದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಬೈಕ್ ಸವಾರ ಬದುಕುಳಿದಿದ್ದಾರೆ.

ಸಂಬಂಧಿಕರ ಮನೆಗೆ ಹೋಗಿ ಬೈಕ್‌ನಲ್ಲಿ ವಿದ್ಯಾಶ್ರೀ ವಾಪಸ್‌ ತಮ್ಮೂರಿಗೆ ಹೋಗುತ್ತಿದ್ದ ಈ ಅವಘಡ ಸಂಭವಿಸಿದೆ. ಇದು ಎರಡು ದಿನದ ಹಿಂದೆ ನಡೆದ ಘಟನೆಯಾಘಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವಘಡವಾಗಿದ್ದು ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...