CrimeNEWSನಮ್ಮರಾಜ್ಯ

ಬೈಕ್‌ ಲಾರಿ ಡಿಕ್ಕಿ ಪರಾರಿ: ಇಬ್ಬರು ಸ್ಥಳದಲ್ಲೇ ಸಾವು, ಮಹಿಳೆ ಸ್ಥಿತಿ ಗಂಭೀರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹೊಸನಗರ: ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಲಾರಿ ಹರಿದಿದ್ದು ಘಟನೆ ಬಳಿಕ ಲಾರಿ ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಮಾಸ್ತಿಕಟ್ಟೆಯಿಂದ ಒಂದು ಕಿ.ಮೀ. ದೂರದ ಹುಲಿಕಲ್ ಮುಖ್ಯ ರಸ್ತೆಯಲ್ಲಿ ತಡರಾತ್ರಿ ನಡೆದಿದೆ.

ಹುಲಿಕಲ್ ಬಳಿ ಈ ಹಿಟ್ ಅಂಡ್ ರನ್‌ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಘಟನೆಯ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಗಂಟೆ ವಾಹನ ಸಂಚಾರ ಸ್ಥಗಿತವಾಗಿತ್ತು.

ಮಾಸ್ತಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ (47) ಹಾಗೂ ಅವರ ಅಣ್ಣನ ಮಗ ಶ್ರಿಸಿರ ನಾಲ್ಕನೇ ತರಗತಿ ಹುಡುಗ ಮೃತರು. ರವಿಯವರ ಪತ್ನಿಯ ಕಾಲಿನ ಮೇಲೆ ಲಾರಿ ಹರಿದಿದ್ದು ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ.

ಹುಲಿಕಲ್ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುತ್ತಿದ್ದಾಗ ಸುಮಾರು ರಾತ್ರಿ 9:35 ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನೆ ನಡೆದ ಕ್ಷಣವೇ ಸ್ಥಳೀಯರು ಪೊಲೀಸರು ಮತ್ತು ಆಂಬುಲೆನ್ಸ್ ಕರೆ ಮಾಡಿದ್ದಾರೆ. ಆದರೆ ಸ್ಪಂದನೆ ಸಿಕ್ಕಿಲ್ಲ. 11 ಗಂಟೆಯದ್ರೂ ಪೊಲೀಸರು ಬಂದಿರಲಿಲ್ಲ. ವಿಷಯ ತಿಳಿದ ಕೂಡಲೇ ಬಂದಿದ್ದರೆ ಆ ಝಿವಗಳು ಉಳಿಯುತ್ತಿದ್ದವೋ ಏನು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಕರೆ ನಾಡಿದರೂ ಸ್ಥಳಕ್ಕೆ ಬಾರದ ಪೊಲೀಸ್‌ ಮತ್ತು ಆಂಬುಲೆನ್ಸ್‌ ವಿರುದ್ಧ ಘಟನಾ ಸ್ಥಳದಲ್ಲಿ ಜಮಾಯಿಸಿದ್ದ ನೂರಾರು ಮಂದಿ ಸ್ಥಳೀಯರು ಆಡಳಿತಕ್ಕೆ ಹಿಡಿ ಶಾಪ ಹಾಕಿದ್ದು, ಇದು ನಮ್ಮ ರಾಜ್ಯದಲ್ಲಿ ಇರುವ ಸುವ್ಯವಸ್ಥಿತ ಆಡಳಿತ ವ್ಯವಸ್ಥೆ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ