NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರದ 2 ಸಾವಿರ ರೂ. ಪಡೆಯಲು ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್‌ ಕಡ್ಡಾಯ

ಸದ್ಯಕ್ಕೆ ಯಾವುದೇ ಫಲಾನುಭವಿಯ ಹೆಸರನ್ನು ನೇರವಾಗಿ ಡಿಲೀಟ್‌ ಮಾಡುತ್ತಿಲ್ಲ. ಇದು ಕೇವಲ 'ಒನ್‌ ಟೈಮ್‌ ಬಯೋಮೆಟ್ರಿಕ್‌' ಪದ್ಧತಿ. ಮಹಿಳೆಯರು ಕೇವಲ ಒಂದು ಬಾರಿ ಬಯೋಮೆಟ್ರಿಕ್‌ ನೀಡಿದರೆ ಸಾಕು, ಹಣ ಎಂದಿನಂತೆ ಖಾತೆಗೆ ಜಮೆಯಾಗುತ್ತದೆ. ನವೀಕರಣ ಮಾಡದ ಖಾತೆಗಳು ಮಾತ್ರ ಸ್ವಯಂಚಾಲಿತವಾಗಿ ರದ್ದಾಗುತ್ತವೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಭಾರಿ ಬದಲಾವಣೆಯೊಂದನ್ನು ತಂದಿದ್ದು ಈ ಯೋಜನೆ ದುರ್ಬಳಕೆ ಹಾಗೂ ಅನರ್ಹರಿಗೆ ಹಣ ಸಂದಾಯವಾಗುವುದನ್ನು ತಡೆಗಟ್ಟಲು ಇನ್ಮುಂದೆ ‘ಒನ್‌-ಟೈಮ್‌ ಬಯೋಮೆಟ್ರಿಕ್‌’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಪ್ರಸ್ತುತ ಯೋಜನೆಯ ಲಾಭ ಪಡೆಯುತ್ತಿರುವ ಎಲ್ಲ ಫಲಾನುಭವಿಗಳು ತಮ್ಮ ಖಾತೆಯನ್ನು ಬಯೋಮೆಟ್ರಿಕ್‌ ಹಾಗೂ ಮೊಬೈಲ್‌ ಸಂಖ್ಯೆಯೊಂದಿಗೆ ಮರು ನೋಂದಣಿ (ನವೀಕರಣ) ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಒಂದು ವೇಳೆ ನವೀಕರಿಸದಿದ್ದರೆ ಬ್ಯಾಂಕ್‌ ಖಾತೆಗೆ ಹಣ ಜಮೆಯಾಗುವುದಿಲ್ಲ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗೃಹಲಕ್ಷ್ಮಿ ಯೋಜನೆಯ ಲಕ್ಷಾಂತರ ಮಂದಿ ಫಲಾನುಭವಿಗಳು ನಿಧನರಾಗಿದ್ದಾರೆ. ಎರಡು ಲಕ್ಷ ಮಂದಿ ಮೃತಪಟ್ಟಿದ್ದರೂ ಫಲಾನುಭವಿಗಳಾಗಿದ್ದಾರೆ. 50 ಸಾವಿರಕ್ಕೂ ಹೆಚ್ಚು ಆದಾಯ ತೆರಿಗೆ ಪಾವತಿದಾರರು ಯೋಜನೆಯ ಲಾಭ ಪಡೆಯುತ್ತಿದ್ದರು. ಕೆಲ ಫಲಾನುಭವಿಗಳ ಖಾತೆಗೆ ಸಂದಾಯವಾದ ಗೃಹಲಕ್ಷ್ಮಿ ಹಣ ಈ ಮೊದಲು ಮಾಡಿರುವ ಸಾಲಕ್ಕೆ ಜಮೆಯಾಗುತ್ತಿದೆ. ಕೆಲವರ ಮೊಬೈಲ್‌ ಸಂಖ್ಯೆ ಕೂಡ ಬದಲಾಗಿದೆ. ಹೀಗಾಗಿ, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ಸಿಗಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಯ ಖಾತೆಗಳನ್ನು ಮತ್ತೊಮ್ಮೆ ನವೀಕರಣ ಮಾಡಲಾಗುತ್ತಿದೆ.

ನಿಧನರಾದವರೂ ಸದ್ದಿಲ್ಲದೆ ಹಣ ಪಡೆಯುತ್ತಿದ್ದರು. ಹೀಗಾಗಿ, ಗೃಹಲಕ್ಷಿ ಫಲಾನುಭವಿಗಳು ಬದುಕಿರುವ ಬಗ್ಗೆ ಜೀವಿತ ಪ್ರಮಾಣ ಪತ್ರ ಸಲ್ಲಿಸಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ತೀವ್ರವಾದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿಅದಕ್ಕೆ ಪರ್ಯಾಯವಾಗಿ ಬಯೋಮೆಟ್ರಿಕ್‌ ವ್ಯವಸ್ಥೆ ಜಾರಿ ಮಾಡಲಾಗಿದೆ.

ನವೀಕರಣ ಹೇಗೆ?: ಫಲಾನುಭವಿಗಳು ತಮ್ಮ ಹತ್ತಿರದ ಬೆಂಗಳೂರು ಒನ್‌ ಅಥವಾ ಕರ್ನಾಟಕ ಒನ್‌ ಕೇಂದ್ರಗಳಿಗೆ ಭೇಟಿ ನೀಡಿ, ಚಾಲ್ತಿಯಲ್ಲಿರುವ ಮೊಬೈಲ್‌ ಸಂಖ್ಯೆ ಹಾಗೂ ಬಯೋಮೆಟ್ರಿಕ್‌ ನೀಡುವ ಮೂಲಕ ತಮ್ಮ ಖಾತೆಯನ್ನು ಮರು-ನೋಂದಣಿ ಮಾಡಿಸಿಕೊಳ್ಳಬಹುದು.

ಇಂಥವರಿಗೆ ಗೃಹಲಕ್ಷ್ಮಿ ಕಟ್‌: ಫಲಾನುಭವಿಗಳು ಎಪಿಎಲ್‌ ಕಾರ್ಡ್‌ ಅಥವಾ ಬಿಪಿಎಲ್‌ ಕಾರ್ಡ್‌ ಹೊಂದಿರಬಹುದು. ಆದರೆ, ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇಲಾಖೆ ಈಗಾಗಲೇ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡಿದೆ. ಇವರಲ್ಲಿ ಬಹುತೇಕರು ಆದಾಯ ತೆರಿಗೆ ಪಾವತಿಸುತ್ತಿದ್ದುದರಿಂದ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಇವರಿಗೆ ಗೃಹಲಕ್ಷ್ಮಿ ಯೋಜನೆ ರದ್ದಾಗಲಿದೆ.

ನವೀಕರಣ ಮಾಡದಿದ್ದರೆ ರದ್ದು: ಸದ್ಯಕ್ಕೆ ನಾವು ಯಾವುದೇ ಫಲಾನುಭವಿಯ ಹೆಸರನ್ನು ನೇರವಾಗಿ ಡಿಲೀಟ್‌ ಮಾಡುತ್ತಿಲ್ಲ. ಇದು ಕೇವಲ ‘ಒನ್‌ ಟೈಮ್‌ ಬಯೋಮೆಟ್ರಿಕ್‌’ ಪದ್ಧತಿ. ಮಹಿಳೆಯರು ಕೇವಲ ಒಂದು ಬಾರಿ ಬಯೋಮೆಟ್ರಿಕ್‌ ನೀಡಿದರೆ ಸಾಕು, ಹಣ ಎಂದಿನಂತೆ ಖಾತೆಗೆ ಜಮೆಯಾಗುತ್ತದೆ. ನವೀಕರಣ ಮಾಡದ ಖಾತೆಗಳು ಮಾತ್ರ ಸ್ವಯಂಚಾಲಿತವಾಗಿ ರದ್ದಾಗುತ್ತವೆ ಎಂದು ಸರ್ಕಾರ ಹೇಳಿದೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ