Please assign a menu to the primary menu location under menu

CrimeNEWSನಮ್ಮಜಿಲ್ಲೆ

ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಪರ ಮತ ಪ್ರಚಾರ: ಜೆಡಿಎಸ್‌ ಕಾರ್ಯಕರ್ತನಿಗೆ ಇರಿತ

ವಿಜಯಪಥ ಸಮಗ್ರ ಸುದ್ದಿ

ಕುಣಿಗಲ್‌: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರವಾಗಿ ಮತ ಪ್ರಚಾರ ಮಾಡಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಕಾಂಗ್ರೆಸ್​ ಬೆಂಬಲಿಗ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೇಪಾಳ್ಯದಲ್ಲಿ ಈ ಘಟನೆ ಡೆದಿದ್ದು, ಡಾ. ಮಂಜುನಾಥ್ ಪರವಾಗಿ ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ಜೆಡಿಎಸ್ ಬೆಂಬಲಿತ​ ಸದಸ್ಯ ಮಂಜುನಾಥ್ ಪ್ರಚಾರ ಮಾಡಿದ್ದಾರೆ.

ಅದಕ್ಕೆ ಕಾಂಗ್ರೆಸ್​ ಬೆಂಬಲಿತ ವ್ಯಕ್ತಿ ಬೋರೇಗೌಡ ಹಾಗೂ ಬೆಂಬಲಿಗರು ಸೇರಿ ಮಾತನಾಡಬೇಕು ಎಂದು ಮಂಜುನಾಥ್​ ಅವರನ್ನು ಕರೆಯಿಸಿಕೊಂಡು, ಅಂಚೇಪಾಳ್ಯದ ಬಳಿ ಮಂಜುನಾಥ್ ಬರುತ್ತಿದ್ದಂತೆ ಬೋರೇಗೌಡ ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ.

ಚಾಕು ಇರಿಯುತ್ತಿದ್ದಂತೆ ತಕ್ಷಣ ಜೀವ ಉಳಿಸಿಕೊಳ್ಳಲು ಕೆಳಕ್ಕೆ ಬಗ್ಗಿದ್ದರಿಂದ ಚಾಕು ತಲೆಗೆ ಚುಚ್ಚಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಮಂಜುನಾಥ್‌ನನ್ನು ಕುಣಿಗಲ್​ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ಕುಣಿಗಲ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ