CrimeNEWSದೇಶ-ವಿದೇಶರಾಜಕೀಯ

ಡಿಸಿಎಂ, ಸಚಿವರ ಮುಂದೆಯೇ ಪೊಲೀಸ್‌ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಮಹಾರಾಷ್ಟ್ರದ ಬಿಜೆಪಿ ಶಾಸಕ ಸುನಿಲ್ ಕಾಂಬ್ಳೆ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಾರ್ಯಕ್ರಮದ ವೇದಿಕೆಯಿಂದ ಶಾಸಕ ಸುನಿಲ್ ಕಾಂಬ್ಳೆಯವರು ಮೆಟ್ಟಿಲು ಮೇಲಿನಿಂದ ಇಳಿಯುತ್ತಿರುವಾಗ ಫುಲ್ ರಶ್ ಆಗಿತ್ತು. ಮೆಟ್ಟಿಲುಗಳ ಮೇಲೆ ಪೊಲೀಸ್ ಅಧಿಕಾರಿ ರಕ್ಷಣೆಗೆಂದು ನಿಂತಿರುತ್ತಾರೆ. ಅಧಿಕಾರಿ ನಿಂತಿದ್ದ ಮೆಟ್ಟಿಲಿನಿಂದ ಒಂದು ಹೆಜ್ಜೆ ಮುಂದೆ ಹೋಗಿ ಮತ್ತೆ ಹಿಂದಕ್ಕೆ ಬಂದು ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಬಂಡ್‌ಗಾರ್ಡನ್ ಪೊಲೀಸ್ ಠಾಣೆಯ ಅಧಿಕಾರಿ ಮೇಲೆಯೇ ಕೈ ಮಾಡಿರುವುದು ಎಂದು ತಿಳಿದು ಬಂದಿದೆ. ಆದರೆ ಈ ಘಟನೆಯ ಬಗ್ಗೆ ಪುಣೆ ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಯಾವ ಕಾರಣಕ್ಕೆ ಹೊಡೆದರು ಎನ್ನುವ ನಿಖರ ಮಾಹಿತಿಯೂ ತಿಳಿದು ಬಂದಿಲ್ಲ.

ಆದರೆ, ಜನರಲ್ ಆಸ್ಪತ್ರೆಯ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಹಾಗೂ ವೇದಿಕೆಯಲ್ಲಿ ಕಾಂಬ್ಳೆ ಹೆಸರನ್ನು ಪ್ರಸ್ತಾಪ ಮಾಡಿಲ್ಲ. ಈ ಕೋಪದಿಂದಲೇ ಅಧಿಕಾರಿ ಮೇಲೆ ಕೈಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಇದೇ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರೀಫ್, ಸಂಸದ ಸುನಿಲ್ ತಟ್ಕರೆ ಕೂಟ ಇದ್ದರು.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ