NEWSನಮ್ಮಜಿಲ್ಲೆಬೆಂಗಳೂರು

BMTC ವಜ್ರ ಬಸ್‌ಗಳಲ್ಲಿ ಅಂಧರ ಪಾಸ್‌ಗಳು ಮಾನ್ಯ: ಸಿಟಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಜ್ರ  ಬಸ್‌ಗಳಲ್ಲಿ ಇನ್ನು ಮುಂದೆ ದೃಷ್ಟಿದೋಷವುಳ್ಳವರು (ಅಂಧ) ಅಂಧರ ಪಾಸಿನೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಇದೇ ಏ.24ರಂದು ಆದೇಶ ಹೊರಡಿಸಿದ್ದು, ಈ ಆದೇಶ ಪೂರ್ಣ ಅಂಧರಾಗಿದ್ದು(Total blindness) ಅಂಧರ ಉಚಿತ ಪಾಸು ಪಡೆದಿರುವ ಪಾಸುದಾರರರಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ ಸಂಸ್ಥೆಯ ಸಾಮಾನ್ಯ ಮತ್ತು ವಜ್ರ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದುವರಿದು, ಸಂಸ್ಥೆಯ ಸೇವೆಗಳಲ್ಲಿ ವಿಕಲಚೇತನರಿಗೆ ಆಸನಗಳನ್ನು ಮೀಸಲಿರಿಸಿದೆ ಎಂದೂ ತಿಳಿಸಿದ್ದಾರೆ.

ಸಾಮಾನ್ಯ ಸೇವೆಗಳಲ್ಲಿ ವಾಹನದ ಮುಂಬಾಗಿಲಿನ ಕಿಟಕಿಯ ಎಡಭಾಗದ ಒಂದು ಅಸನವನ್ನು ಹಾಗೂ ಹಿಂಭಾಗದ/ ಮಧ್ಯದ ಬಾಗಿಲಿನ ಹಿಂಬಾಗಿಲಿನ ಕಿಟಕಿಯ ಪಕ್ಕದ ಒಂದು ಆಸನವನ್ನು ಮೀಸಲಿರಿಸಲಾಗಿದೆ.

ಅದರಂತೆ ವಜ್ರ ವಾಹನಗಳಲ್ಲಿ ಮಧ್ಯದ ಬಾಗಿಲಿನ ಎದುರಿಗಿರುವ (ಮಡಿಚುವಂತಹ) ಎರಡು ಅಸನಗಳನ್ನು (ಸುಲಭವಾಗಿ ಹತ್ತಿ ಇಳಿಯಲು ಅನುಕೂಲವಾಗುವಂತೆ) ವಿಕಲಚೇತನರಿಗೆ ಮೀಸಲಿರಿಸಲಾಗಿದ್ದು ಈ ಸಂಬಂಧ ನಿಗಮದ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಮ್ಮ ಎಲ್ಲ ಚಾಲನಾ ಸಿಬ್ಬಂದಿಗಳಿಗೂ ಸೂಕ್ತ ತಿಳಿವಳಿಕೆ ನೀಡುವುದರ ಜತೆಗೆ ಸೂಚನಾ ಫಲಕದಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಅಲ್ಲದೆ ಎಲ್ಲ ವಲಯದ ವಿಭಾಗೀಯ ಸಂಚಾರ ಅಧಿಕಾರಿಗಳು, ಎಲ್ಲ ಹಿರಿಯ/ ಘಟಕ ವ್ಯವಸ್ಥಾಪಕರು ಕೂಡ ಚಾಲನಾ ಸಿಬ್ಬಂದಿಗಳಿಗೆ ಈ ವಿಷಯದ ಬಗ್ಗೆ ಮಾಹಿತಿ ಒದಗಿಸುವುದು ಹಾಗೂ ಸಾರ್ವಜನಿಕ ಪ್ರಯಾಣಿಕರೊಂದಿಗೆ ವಿಶೇಷವಾಗಿ ಅಂಧರು, ವಿಕಲಚೇತನರು ಮತ್ತು ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುತವಾಗಿ ವರ್ತಿಸಲು ತಿಳಿವಳಿಕೆ ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ