NEWSನಮ್ಮಜಿಲ್ಲೆಬೆಂಗಳೂರು

BMTC ವಜ್ರ ಬಸ್‌ಗಳಲ್ಲಿ ಅಂಧರ ಪಾಸ್‌ಗಳು ಮಾನ್ಯ: ಸಿಟಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಜ್ರ  ಬಸ್‌ಗಳಲ್ಲಿ ಇನ್ನು ಮುಂದೆ ದೃಷ್ಟಿದೋಷವುಳ್ಳವರು (ಅಂಧ) ಅಂಧರ ಪಾಸಿನೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಇದೇ ಏ.24ರಂದು ಆದೇಶ ಹೊರಡಿಸಿದ್ದು, ಈ ಆದೇಶ ಪೂರ್ಣ ಅಂಧರಾಗಿದ್ದು(Total blindness) ಅಂಧರ ಉಚಿತ ಪಾಸು ಪಡೆದಿರುವ ಪಾಸುದಾರರರಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ ಸಂಸ್ಥೆಯ ಸಾಮಾನ್ಯ ಮತ್ತು ವಜ್ರ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದುವರಿದು, ಸಂಸ್ಥೆಯ ಸೇವೆಗಳಲ್ಲಿ ವಿಕಲಚೇತನರಿಗೆ ಆಸನಗಳನ್ನು ಮೀಸಲಿರಿಸಿದೆ ಎಂದೂ ತಿಳಿಸಿದ್ದಾರೆ.

ಸಾಮಾನ್ಯ ಸೇವೆಗಳಲ್ಲಿ ವಾಹನದ ಮುಂಬಾಗಿಲಿನ ಕಿಟಕಿಯ ಎಡಭಾಗದ ಒಂದು ಅಸನವನ್ನು ಹಾಗೂ ಹಿಂಭಾಗದ/ ಮಧ್ಯದ ಬಾಗಿಲಿನ ಹಿಂಬಾಗಿಲಿನ ಕಿಟಕಿಯ ಪಕ್ಕದ ಒಂದು ಆಸನವನ್ನು ಮೀಸಲಿರಿಸಲಾಗಿದೆ.

ಅದರಂತೆ ವಜ್ರ ವಾಹನಗಳಲ್ಲಿ ಮಧ್ಯದ ಬಾಗಿಲಿನ ಎದುರಿಗಿರುವ (ಮಡಿಚುವಂತಹ) ಎರಡು ಅಸನಗಳನ್ನು (ಸುಲಭವಾಗಿ ಹತ್ತಿ ಇಳಿಯಲು ಅನುಕೂಲವಾಗುವಂತೆ) ವಿಕಲಚೇತನರಿಗೆ ಮೀಸಲಿರಿಸಲಾಗಿದ್ದು ಈ ಸಂಬಂಧ ನಿಗಮದ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಮ್ಮ ಎಲ್ಲ ಚಾಲನಾ ಸಿಬ್ಬಂದಿಗಳಿಗೂ ಸೂಕ್ತ ತಿಳಿವಳಿಕೆ ನೀಡುವುದರ ಜತೆಗೆ ಸೂಚನಾ ಫಲಕದಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಅಲ್ಲದೆ ಎಲ್ಲ ವಲಯದ ವಿಭಾಗೀಯ ಸಂಚಾರ ಅಧಿಕಾರಿಗಳು, ಎಲ್ಲ ಹಿರಿಯ/ ಘಟಕ ವ್ಯವಸ್ಥಾಪಕರು ಕೂಡ ಚಾಲನಾ ಸಿಬ್ಬಂದಿಗಳಿಗೆ ಈ ವಿಷಯದ ಬಗ್ಗೆ ಮಾಹಿತಿ ಒದಗಿಸುವುದು ಹಾಗೂ ಸಾರ್ವಜನಿಕ ಪ್ರಯಾಣಿಕರೊಂದಿಗೆ ವಿಶೇಷವಾಗಿ ಅಂಧರು, ವಿಕಲಚೇತನರು ಮತ್ತು ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುತವಾಗಿ ವರ್ತಿಸಲು ತಿಳಿವಳಿಕೆ ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ