Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಐಟಿ ಇಲಾಖೆ ನಡೆಗೆ ತಡೆ : ಕಾಂಗ್ರೆಸ್‌ಗೆ ಸುಪ್ರೀಂಕೋರ್ಟ್‌ನಿಂದ ಬಿಗ್‌ ರಿಲೀಫ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸುಪ್ರೀಂಕೋರ್ಟ್‌ನಿಂದ ಬಿಗ್‌ ರಿಲೀಫ್ ಸಿಕ್ಕಿದೆ. ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಲೋಕಸಭಾ ಎಲೆಕ್ಷನ್ ವೇಳೆ ಬಾಕಿ ಇರುವ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸಲು ಐಟಿ ಇಲಾಖೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ.

ಸುಪ್ರೀಂಕೋರ್ಟ್‌ನ ಈ ಮಹತ್ವದ ಸೂಚನೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 3,500 ಕೋಟಿ ರೂ. ವಸೂಲಿಗೆ ಯತ್ನಿಸಲ್ಲ ಎಂದು ಐ.ಟಿ. ಅಧಿಕಾರಿಗಳು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಐಟಿ ನೋಟಿಸ್ ಸಂಬಂಧ ಮತ್ತೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತೀರ್ಮಾನಿಸಿದ್ದು, ಜೂನ್ 4 ರಂದು ಲೋಕಸಭಾ ಚುನಾವಣೆಯ ರಿಸಲ್ಟ್‌ ಹೊರ ಬೀಳಲಿದೆ. ಹೀಗಾಗಿ ಜೂನ್ 24ರಂದು ಐ.ಟಿ. ನೋಟಿಸ್ ವಿರುದ್ಧ ಕಾಂಗ್ರೆಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ಸುಪ್ರೀಂಕೋರ್ಟ್‌ ವಿಚಾರಣೆ ವೇಳೆ ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದರು. ನಮ್ಮದು ಆದಾಯ ಗಳಿಸುವ ಸಂಘಟನೆಯಲ್ಲ. ಬರೀ ರಾಜಕೀಯ ಪಕ್ಷ ಮಾತ್ರ. ಈಗಾಗಲೇ ಬ್ಯಾಂಕ್ ಖಾತೆ ಜಪ್ತಿ ಮಾಡಿ 135 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ ಎಂದಿದ್ದಾರೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ನೇತೃತ್ವದ ಪೀಠದಲ್ಲಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯಿತು.

ಐಟಿ ವಾದವೇನು?: ಸುಪ್ರೀಂಕೋರ್ಟ್‌ನಲ್ಲಿ ಐ.ಟಿ ಇಲಾಖೆಯ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದ್ದರು.

ಈ ಕಾಂಗ್ರೆಸ್ ಪಕ್ಷದಿಂದ 3,500 ಕೋಟಿ ರೂ ಆದಾಯ ತೆರಿಗೆ ಪಾವತಿಗೆ ಬೇಡಿಕೆ ಇದೆ. ಮೆರಿಟ್ ಮೇಲೆ ಬಹಳಷ್ಟನ್ನು ಹೇಳಬೇಕಾಗಿದೆ. ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಹಣ ವಸೂಲಿಗೆ ಕ್ರಮ ಕೈಗೊಳ್ಳಲ್ಲ ಎಂದರು.

ಇನ್ನು ಜೂನ್ 2ನೇ ವಾರದಲ್ಲಿ ಅರ್ಜಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಹೀಗಾಗಿ ಸುಪ್ರೀಂಕೋರ್ಟ್ ಜೂನ್ 24 ರಂದು ಅರ್ಜಿ ವಿಚಾರಣೆಗೆ ನಡೆಸಲು ದಿನಾಂಕ ನಿಗದಿಪಡಿ ವಿಚಾರಣೆಯನ್ನು ಮುಂದೂಡಿದತು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ