NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಆಧಾರ್‌ ಕಾರ್ಡ್‌ ಯಾವುದೇ ಭಾಷೆಯಲ್ಲಿರಲಿ ಅದು ಕರ್ನಾಟಕ ರಾಜ್ಯದ್ದಾಗಿದ್ದರೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ನೀಡಬೇಕು ಎಂದು ಸಂಸ್ಥೆ ಆದೇಶ ಹೊರಡಿಸಿದೆ.

ನಿರ್ವಾಹಕರಿಗೆ ಈ ಬಗ್ಗೆ ಕೆಲ ಗೊಂದಲಗಳಿದ್ದವು ಅದನ್ನು ನಿವಾರಿಸುವ ಸಲುವಾಗಿ ಬಿಎಂಟಿಸಿ ನಿಗಮವು ಸ್ಪಷ್ಟ ಸೂಚನೆ ನೀಡಿದ್ದು, ಆಧಾರ್‌ ಕಾರ್ಡ್‌ ಯಾವುದೇ ಭಾಷೆಯಲ್ಲಿರಲಿ ಅದು ಕರ್ನಾಟಕದ ವಿಳಾಸ ಹೊಂದಿದ್ದರೆ ಅದನ್ನು ಪರಿಗಣಿಸಬೇಕು ಎಂದು ತಿಳಿಸಿದೆ.

ಈ ಹಿಂದೆ ಆಧಾರ್ ‌ಕಾರ್ಡ್​​ನಲ್ಲಿ ಇಂಗ್ಲಿಷ್ ಜತೆಗೆ ಕನ್ನಡ ಬಿಟ್ಟು ಬೇರೆ ಭಾಷೆ ಪ್ರಿಂಟ್ ಆಗಿದ್ದರೆ, ಅಂತಹ ಮಹಿಳೆಯರಿಗೆ ಬಿಎಂಟಿಸಿ ಕಂಡಕ್ಟರ್​ಗಳು ಶಕ್ತಿ ಯೋಜನೆಯ ಟಿಕೆಟ್ ನೀಡಲು ಗೊಂದಲಕ್ಕೆ ಒಳಗಾಗುತ್ತಿದ್ದರು. ಇದರಿಂದ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಹಲವುಬಾರಿ ಜಗಳವಾಗುತ್ತಿತ್ತು.

ಅದನ್ನು ತಪ್ಪಿಸಲು ಬಿಎಂಟಿಸಿ ಮುಂದಾಗಿದ್ದು, ಇನ್ಮುಂದೆ ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೆ ಸಾಕು, ಶಕ್ತಿ ಯೋಜನೆ ಟಿಕೆಟ್ ನೀಡಬಹುದು ಎಂದು ಸೂಚನೆ ನೀಡಿದೆ.

ಇನ್ನು ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸಿ ರಾಜ್ಯದ ವಿಳಾಸ ಹೊಂದಿದ್ದರೆ ಬಿಎಂಟಿಸಿ ಬಸ್​ನಲ್ಲಿ ಅವರಿಗೆ ಉಚಿತವಾಗಿ ಸಂಚಾರ ಮಾಡಲು ಅವಕಾಶವಿದೆ. ಆಧಾರ್ ಕಾರ್ಡ್‌ ಕನ್ನಡದಲ್ಲಿ ವಿಳಾಸ ಇಲ್ಲಾಂದರೂ ಪರವಾಗಿಲ್ಲ (ತಮಿಳು. ತೆಲುಗು ಹೀಗೆ ಯಾವುದೇ ಭಾಷೆಯಲ್ಲಿರಲಿ) ಕರ್ನಾಟಕದ ವಿಳಾಸವಿದ್ದರೆ ಸಾಕು ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ಆಧಾರ್ ಕಾರ್ಡ್​​ನಲ್ಲಿ ಕನ್ನಡದಲ್ಲಿ ವಿಳಾಸವಿರಬೇಕೆಂದು ಬಿಎಂಟಿಸಿಯ ಕೆಲ ಕಂಡಕ್ಟರ್​ಗಳು ಹೇಳುತ್ತಿದ್ದರು ಅಲ್ಲದೆ ಈ ಬಗ್ಗೆ ಸಂಸ್ಥೆಕೂಡ ಸ್ಪಷ್ಟ ಸೂಚನೆ ನೀಡದ ಹಿನ್ನೆಯಲ್ಲಿ ಗೊಂದಲವಾಗುತ್ತಿತ್ತು.

ಹೀಗಾಗಿ ದೇಶದ ನಾಗರೀಕರು ಆಧಾರ್ ಕಾರ್ಡನ್ನು ದೇಶದಾದ್ಯಂತ ಯಾವುದೇ ರಾಜ್ಯದಲ್ಲಿ ಪಡೆಯಲು ಅವಕಾಶವಿದ್ದು, ಯಾವ ರಾಜ್ಯದಲ್ಲಿ ಆಧಾರ್ ಕಾರ್ಡ್ ಅನ್ನು ಪಡೆಯುತ್ತಾರೋ ಆ ರಾಜ್ಯದ ಅಧಿಕೃತ ಭಾಷೆ ಮತ್ತು ಅಂಗ್ಲ ಭಾಷೆಯಲ್ಲಿ (ದ್ವಿಭಾಷೆ) ಆಧಾರ್ ಕಾರ್ಡ್ ಮುದ್ರಣವಾಗುತ್ತದೆ.

ಹೀಗಾಗಿ ಕನ್ನಡ ಹೊರತುಪಡಿಸಿ ಅನ್ಯಭಾಷೆಯಲ್ಲಿ ಮುದ್ರಿತ (ದ್ವಿಭಾಷೆ) ಆಧಾರ್ ಕಾರ್ಡ್ ಗಳಲ್ಲಿನ ಆಂಗ್ಲ ಭಾಷೆಯಲ್ಲಿರುವ ವಿಳಾಸವನ್ನು ಪರಿಶೀಲಿಸಿ ವಿಳಾಸವು ಕರ್ನಾಟಕ ರಾಜ್ಯದಾಗಿದ್ದಲ್ಲಿ, ಆ ಆಧಾರ್ ಕಾರ್ಡ್ ಅನ್ನು ಮಾನ್ಯ ಮಾಡಿ ಶಕ್ತಿಯೋಜನೆ ಅಡಿಯಲ್ಲಿ ಉಚಿತ ಟಿಕೆಟ್ ನೀಡಬೇಕು ಎಂದು ಸೂಚಿಸಿದೆ.

ಒಟ್ಟಿನಲ್ಲಿ ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಟಿಕೆಟ್ ತೆಗೆದುಕೊಂಡು ಪ್ರಯಾಣ ಮಾಡಬೇಕೆಂದರೆ, ಆಧಾರ್ ಕಾರ್ಡ್ ಕನ್ನಡದಲ್ಲೇ ಇರಬೇಕೆಂಬ ಗೊಂದಲವಿಲ್ಲ. ಬಿಎಂಟಿಸಿಯ ಹೊಸ ಆದೇಶ ಈ ಎಲ್ಲ ಗೊಂದಲಗಳಿಗೆ ಬ್ರೇಕ್ ಹಾಕಿದ್ದು ಬಿಎಂಟಿಸಿ ಆದೇಶದಿಂದ ಮಹಿಳಾ ಪ್ರಯಾಣಿಕರು ಕೂಡ ಸಂತಸಗೊಂಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ