NEWSನಮ್ಮಜಿಲ್ಲೆಬೆಂಗಳೂರು

BMTC ಟಿಕೆಟ್‌ ರಹಿತ ಪ್ರಯಾಣ: 5.19ಲಕ್ಷ ದಂಡ ತೆತ್ತಿದ ಪ್ರಯಾಣಿಕರು – ನಿರ್ವಾಹಕರ ವಿರುದ್ಧವೂ 1005 ಪ್ರಕರಣ ದಾಖಲಿಸಿದ ಸಂಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ   5.19 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅನಧಿಕೃತವಾಗಿ ಪ್ರಯಾಣ ಮಾಡುವುದು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಜೂನ್‌-2023 ರ ಮಾಹೆಯಲ್ಲಿ  ಒಟ್ಟು 13,196 ಟ್ರಿಪ್ ಗಳನ್ನು ತಪಾಸಿಸಿ, 2,627 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ, ಅವರಿಂದ ಒಟ್ಟು 5,19,060 ರೂ.ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ದ 1005 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 328 ಪುರುಷ ಪ್ರಯಾಣಿಕರಿಂದ ಒಟ್ಟು  32,800 ರೂ. ದಂಡ ವಿಧಿಸಲಾಗಿದೆ.

ಒಟ್ಟಾರೆ ಜೂನ್‌ ತಿಂಗಳಿನಲ್ಲಿ 2,627 ಪ್ರಯಾಣಿಕರಿಂದ ಒಟ್ಟು 5,19,060 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು,  ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸಬೇಖು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದು. ಜತೆಗೆ  ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮಹಿಳಾ ಪ್ರಯಾಣಿಕರಿಗೆಂದೇ  ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಸಂಸ್ಥೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು