NEWSನಮ್ಮಜಿಲ್ಲೆಬೆಂಗಳೂರು

BMTC ದಕ್ಷಿಣಕ್ಕೆ ಆಶಾಲತ, KSRTC ಪುತ್ತೂರಿಗೆ ಅಮಲಿಂಗಯ್ಯ ಪಿ. ಹೊಸಪೂಜಾರಿ ಡಿಸಿಗಳಾಗಿ ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ದಕ್ಷಿಣ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಕೆ.ಆಶಾಲತ ಅವರನ್ನು ನಿಯೋಜಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಈವರೆಗೂ ಬಿಎಂಟಿಸಿಯಲ್ಲಿ ವಿಭಾಗೀಯ ಯಾಂತ್ರಿಕ ಅಭಿಯಂತರರಾಗಿದ್ದ ಕೆ.ಆಶಾಲತ ಸೇರಿದಂತೆ 6 ಮಂದಿ ಅಧಿಕಾರಿಗಳಿಗೆ ಬುಧವಾರ ಜೂನ್‌ 26ರಂದು ಮುಂಬಡ್ತಿ ನೀಡಿ ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.

ಮುಂಬಡ್ತಿಯೊಂದಿಗೆ ಉನ್ನತ ಹುದ್ದೆ ಅಲಂಕರಿಸಿದ ಅಧಿಕಾರಿಗಳು: ವಿಭಾಗೀಯ ಯಾಂತ್ರಿಕ ಅಭಿಯಂತರ (ದರ್ಜೆ-1 ಕಿರಿಯ)ರನ್ನು ಉಪ ಮುಖ್ಯ ಯಾಂತ್ರಿಕ ಅಭಿಯಂತರ(ದರ್ಜೆ-1 ಹಿರಿಯ) ಹುದ್ದೆಗೆ ಮುಂಬಡ್ತಿ ನೀಡಿ ಕಾರ್ಯ ನಿರ್ವಹಣೆ (ಅಫಿಷಿಯೇಟಿಂಗ್) ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶಿಸಿದ್ದಾರೆ.

ಬಿಎಂಟಿಸಿ ಸಂಸ್ಥೆಯ ಯಾಂತ್ರಿಕ ವಿಭಾಗದ ವಿಭಾಗೀಯ ಅಭಿಯಂತರರಾದ ಕೆ.ಚಂದು ಅವರನ್ನು ನಿಯಮ 17/1 ರಡಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ಕೇಂದ್ರ ಕಚೇರಿಗೆ ಉಪ ಮುಖ್ಯ ಸಂಚಾರ ವ್ಯವಸ್ಥಾಪಕರಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಇನ್ನು ಬಿಎಂಟಿಸಿಯ ವಿಭಾಗೀಯ ಯಾಂತ್ರಿಕ ಅಭಿಯಂತರರಾಗಿದ್ದ ಅಮಲಿಂಗಯ್ಯ ಪಿ. ಹೊಸಪೂಜಾರಿ ಅವರನ್ನು ಕೆಎಸ್‌ಆರ್‌ಟಿಸಿ ಮತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.

ಬಿಎಂಟಿಸಿಯ ವಿಭಾಗೀಯ ಯಾಂತ್ರಿಕ ಅಭಿಯಂತರರಾದ ರಾಜೀವಲೋಚನ ಅವರನ್ನು ನಿಯಮ 17/1 ರಡಿ ನಿಗಮದ ಉಪ ಮುಖ್ಯ ಕಾರ್ಮಿಕ & ಕಲ್ಯಾಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅದರಂತೆ ಬಿಎಂಟಿಸಿಯ ವಿಭಾಗೀಯ ಯಾಂತ್ರಿಕ ಅಭಿಯಂತರರಾದ ಕೆ.ಎಸ್. ಚೈತ್ರ ಅವರನ್ನು ನಿಗಮದ ಉಪ ಮುಖ್ಯ ಅಭಿಯಂತರರಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ಚಾಮರಾಜನಗರ ವಿಭಾಗ ಯಾಂತ್ರಿಕ ವಿಭಾಗೀಯ ಅಭಿಯಂತರರಾದ ಎಸ್.ಸೂರ್ಯಕಾಂತ ಅವರನ್ನು ನಿಯಮ 17/1 ರಡಿ ಬಿಎಂಟಿಸಿಯ ಉಪ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರ ಬಡ್ತಿ ನೀಡಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

ಈ 6 ಅಧಿಕಾರಿಗಳನ್ನು ಬಡ್ತಿ ಹುದ್ದೆಯಲ್ಲಿ ಹಾಜರಾಗಲು ಅನುವಾಗುವಂತೆ 26-6-2024 ರ ಅಪರಾಹ್ನದಿಂದ ಜಾರಿಗೆ ಬರುವಂತೆ ಅವರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳಗಳಿಂದ ಬಿಡುಗಡೆಗೊಳಿಸಲಾಗಿದೆ. ಒಂದು ವೇಳೆ ಬಡ್ತಿಯನ್ನು ನಿರಾಕರಿಸುವುದಾಗಿ ಮನವಿ ಸಲ್ಲಿಸಿದ್ದಲ್ಲಿ ಸಂಸ್ಥೆಯ ಸುತ್ತೋಲೆ ಸಂಖ್ಯೆ. 1344ರ 15-7-2006 ರನ್ವಯ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಸೂಚಿಸುವ ಮೂಲಕ ಆದೇಶ ಹೊರಡಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ