NEWSನಮ್ಮಜಿಲ್ಲೆನಮ್ಮರಾಜ್ಯ

BMTC ನಿಗಮದ ಬಸ್‌ ಉಳಿಸಿದ ಚಾಲಕ ಗೌರೀಶ್‌ಗೆ ₹10 ಸಾವಿರ ಬಹುಮಾನ ನೀಡಿ ಸನ್ಮಾನಿಸಿದ ಎಂಡಿ ಸತ್ಯವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಘಟಕ-26ರ ಚಾಲಕನ ಧೈರ್ಯವನ್ನು ಮೆಚ್ಚಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನಗದು ಬಹುಮಾನ ಮತ್ತು ಪ್ರಶಂಸನ ಪತ್ರ ನೀಡಿ ಗೌರವಿಸಿದ್ದಾರೆ.

ನಿನ್ನೆ ಡಿ.4ರ ಸೋಮವಾರ ಬೆಳಗ್ಗೆ 9ಗಂಟೆ ಸುಮಾರಿನಲ್ಲಿ ಘಟಕದ ವಾಹನಕ್ಕೆ ಹಿಂದಿನಿಂದ ಬಂದ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ. ಬಸ್ಸಿನ ಕೆಳಭಾಗದಲ್ಲಿ ಸಿಕ್ಕಿಕೊಂಡು ಘರ್ಷಣೆಯಿಂದ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದ ಕಾರಿನಿಂದ ಬಸ್ಸನ್ನು ಬೇರ್ಪಡಿಸಲು ಚಾಲಕ ಗೌರೀಶ್ ಪ್ರಾಣದ ಹಂಗುತೊರೆದು ಬಸ್‌ ಚಾಲನೆ ಮಾಡಿ ಬಸ್ಸನ್ನು ರಕ್ಷಿಸಿದ್ದರು.

ಗೌರೀಶ್‌ ಅವರು ಧೈರ್ಯದಿಂದ ಎದೆಗುಂದದೆ ಸಮಯ ಪ್ರಜ್ಞೆ ಮೆರೆದು ನಿಗಮದ ಆಸ್ತಿಯನ್ನು ರಕ್ಷಿಸಿ ಲಕ್ಷಾಂತರ ರೂ.ಗಳನ್ನು ಉಳಿಸುವ ಜತೆಗೆ ಭಾರಿ ಅನಾಹುತವನ್ನು ತಪ್ಪಿಸಿದ್ದರು. ಹೀಗಾಗಿ ಅವರ ಧೈರ್ಯವನ್ನು ಮೆಚ್ಚಿ ಇಂದು ನಿಗಮದ ಕೇಂದ್ರ ಕಚೇರಿಯಲ್ಲಿ ಅವರಿಗೆ 10 ಸಾವಿರ ರೂಪಾಯಿ ನಗದು ಬಹುಮಾನದ ಜತೆಗೆ ಪ್ರಶಂಸನ ಪತ್ರನೀಡಿ ಸನ್ಮಾನಿಸಿದರು.

ಚಾಲಕ ಗೌರೀಶ್ ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಇನ್ನು ನಿಗಮದ ಎಂಡಿ ಜಿ.ಸತ್ಯವತಿ ಅವರು ಕೂಡ ಚಾಲಕನ ಉತ್ತಮ ಸೇವೆಯನ್ನು ಶ್ಲಾಘಿಸಿದ್ದು ಇದು ಇತರರಿಗೂ ಮಾದರಿಯಾಗಬೇಕು ಎಂದು ಉದ್ದೇಶದಿಂದ ಗೌರೀಶ್‌ ಅವರ ಧೈರ್ಯ ಮೆಚ್ಚಿ ನಗದು ಬಹುಮಾನದ ಜತೆಗೆ ಪ್ರಶಂಸನ ಪತ್ರ ನೀಡಿ ಅಭಿನಂದಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು