NEWSನಮ್ಮಜಿಲ್ಲೆನಮ್ಮರಾಜ್ಯಬೆಂಗಳೂರು

BMTC: ಪ್ರಯಾಣಿಕರು ಬಿಟ್ಟುಹೋಗಿದ್ದ ವಸ್ತು ಮರಳಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಸ್‌ನಲ್ಲಿ ಪ್ರಯಾಣಿಸುವಾಗ ಮೆರೆತು ಬಿಟ್ಟುಹೋಗಿದ್ದ ವಸ್ತುವನ್ನು ಮರಳಿ ವಾರಸುದಾರರಿಗೆ ತಲುಪಿಸುವ ಮೂಲಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ ಮತ್ತೊಮ್ಮೆ ಪ್ರಾಮಾಣಿಕತೆ ಮೆರೆದಿದ್ದಾರೆ.

ಬಿಎಂಟಿಸಿ ಉತ್ತರಹಳ್ಳಿ ಘಟಕ- 33ನೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್‌ನಲ್ಲೇ ಸುಮಾರು 7 ಸಾವಿರ ರೂಪಾಯಿ ಮೌಲ್ಯದ ಮಿಕ್ಸರ್ ಗ್ರೈಂಡರ್‌ಅನ್ನು ಇಳಿಯುವಾಗ ಪ್ರಯಾಣಿಕ ಮಹಿಳೆಯೊಬ್ಬರು ಮರೆತು ಬಿಟ್ಟುಹೋಗಿದ್ದರು.

ಬಳಿಕ ಬಸ್‌ನಲ್ಲಿ ಮಿಕ್ಸರ್ ಗ್ರೈಂಡರ್ ಇರುವುದನ್ನು ಗಮನಿಸಿದ ಚಾಲನಾ ಸಿಬ್ಬಂದಿ ಅದನ್ನು ತಂದು ಘಟಕದಲ್ಲಿ ಇಟ್ಟಿದ್ದರು. ನಂತರ ದೂರವಾಣಿ ಮೂಲಕ ಪ್ರಯಾಣಿಕರನ್ನು ಸಂಪರ್ಕಿಸಿ ಅವರ ವಸ್ತುವನ್ನು ಘಟಕದ ಭದ್ರತಾ ಸಿಬ್ಬಂದಿ ಮುಖಾಂತರ ಹಿಂದುರಿಸಿದರು.

ಈ ಮೂಲಕ ಪ್ರಾಮಾಣಿಕತೆಯಲ್ಲಿ ಮತ್ತೊಮ್ಮೆ ಸಾರಿಗೆ ಸಂಸ್ಥೆ ಚಾಲಕ ಮತ್ತು ನಿರ್ವಾಹಕರು ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣ ಮಾಡಬೇಕಾದರೆ ಬಿಟ್ಟು ಹೋದ ವಸ್ತುವನ್ನು ಮರಳಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ಇನ್ನು ಉತ್ತರಹಳ್ಳಿ ಘಟಕ 33ರ ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆಗೆ ಸಂಸ್ಥೆಯ ನೌಕರರು ಮತ್ತು ಸಾರ್ವಜನಿಕರು ಅಭಿನಂದನೆ ತಿಳಿಸಿದ್ದಾರೆ. ಅಲ್ಲದೆ ಇಂಥ ಪ್ರಾಮಾಣಿಕ ಸಿಬ್ಬಂದಿಗೆ ನ್ಯಾಯಯುತವಾಗಿ ವೇತನ ಮಂಜೂರು ಮಾಡುವುದಕ್ಕೆ ಸರ್ಕಾರ ಮತ್ತು ಆಡಳಿತ ಮಂಡಳಿ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು