NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಬೇಕಾ ಬಿಟ್ಟಿಯಾಗಿ ಮಹಿಳಾ ಪ್ರಯಾಣಿಕರ ಉಚಿತ ಟಿಕೆಟ್‌ ಹರಿದರೆ ನಿರ್ವಾಹಕ – ಇಲ್ಲ ಸ್ಟಜ್‌ನಲ್ಲಿ ಟಿಕೆಟ್‌ ಮೌಲ್ಯದ ಲೆಕ್ಕಕ್ಕಾಗಿ ಹರಿದರಾ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 17ನೇ ಘಟಕದ ನಿರ್ವಾಹಕರೊಬ್ಬರು ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್‌ ಅನ್ನು ಬೇಕಾ ಬಿಟ್ಟಿಯಾಗಿ ಹರಿದಿದ್ದಾರೆ ಎಂಬ ವಿಡಿಯೋವೊಂದು ಸಮಾಜಿಕ ಜಾಲತಾಣದಲ್ಲಿ ತುಂಬ ವೈರಲ್‌ಆಗಿದೆ.

ಮೆಜೆಸ್ಟಿಕ್​ನಿಂದ – ತಾವರಕೆರೆಗೆ ಹೋಗುವ ಬಿಬಿಎಂಟಿಸಿ ಬಸ್​​ನ ನಿರ್ವಾಹಕ ಇದೇ ಅ.15 ರಂದು ಅಂದರೆ ನಿನ್ನೆ ಸುಖಾಸುಮ್ಮನೇ ಫ್ರೀ ಟಿಕೆಟ್ ಹರಿದು ಬಿಸಾಕುತ್ತಿದ್ದರು ಎಂದು ಆರೋಪಿ ಪ್ರಯಾಣಿಕ ಮಹಿಳೆಯೊಬ್ಬರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಿರ್ವಾಹಕ ಯಾವುದೆ ಉತ್ತರ ನೀಡಿಲ್ಲ.

ಆದರೆ, ಕ್ಷಮಿಸಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ನಿರ್ವಾಹಕರು ಏಕೆ ಈ ರೀತಿ ಟಿಕೆಟ್‌ ಹರಿದು ಬಿಸಾಕಿದ್ದಾರೆ ಎಂಬುವುದು ಇನ್ನು ಸ್ಪಷ್ಟವಾಗಿಲ್ಲ. ಇನ್ನು ಈ ಬಗ್ಗೆ ಹೆಚ್ಚಿನ ಇನ್ಸೆಂಟಿವ್‌ ಆಸೆಗೆ ಬಿದ್ದು ನಿರ್ವಾಹಕರು ಹೀಗೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗುತ್ತಿದೆ.

ರಾಜ್ಯ ಸರ್ಕಾರವು ಶಕ್ತಿ ಯೋಜನೆ ಜಾರಿ ಮಾಡಿದ್ದು, ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಆದರೆ ಇದರ ನಡುವೆ ಕಂಡಕ್ಟರ್​​ಗಳು ಮಹಿಳಾ ಪ್ರಯಾಣಿಕರಿಗೆ ನೀಡಿದ ಟಿಕೆಟ್​ ಸಂಖ್ಯೆಗಳನ್ನು ನಿಗಮಗಳಿಗೆ ತಪ್ಪಾಗಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನು ಈ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಈಗಾಗಲೇ ಶೇ.60ರಷ್ಟು ಪ್ರಯಾಣ ದರ ಮಾತ್ರ ನೀಡಲಾಗುವುದು ಇನ್ನು ಶೇ.40ರಷ್ಟು ಬೋಗಸ್‌ ತೋರಿಸಲಾಗುತ್ತಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು ಎಂಬ ಬಗ್ಗೆ ವಿಜಯಪಥ ಇತ್ತೀಚೆಗಷ್ಟೇ ವರದಿ ಮಾಡಿತ್ತು.

ಈ ವರದಿಯ ಬೆನ್ನಲ್ಲೇ ಈ ರೀತಿಯ ಸುದ್ದಿ ವಿಡಿಯೋ ಸಹಿತ ಹರಿದಾಡುತ್ತಿರುವುದು ನಿಗಮಕ್ಕೆ ಮತ್ತು ಎಲ್ಲ ಸಿಬ್ಬಂದಿಗಳಿಗೆ ಇರಿಸುಮುರಿಸು ಉಂಟು ಮಾಡುತ್ತಿದೆ. ಈ ಬಗ್ಗೆ ನಿರ್ವಾಹಕರು ಕೂಡ ಎಚ್ಚೆತ್ತುಕೊಳ್ಳುವ ಅವಶ್ಯವಿದೆ. ಇಲ್ಲದಿದ್ದರೆ ಪ್ರಯಾಣಿಕರು ಮಾಡುವ ಆರೋಪಗಳು ಸಾಬೀತಾಗುತ್ತವೆ ಎಂಬುದರಲ್ಲಿ ಎರಡು ಮಾತಿಲ್ಲ.

ಇನ್ನು ನಿರ್ವಾಹಕರು ಇನ್ಸೆಂಟಿವ್‌ ಆಸೆಗೆ ಬಿದ್ದು ಈ ರೀತಿ ಬೇಕಾಬಿಟ್ಟಿಯಾಗಿ ಟಿಕೆಟ್‌ ಹರಿದಿದ್ದರೆ ಅವರಿಗೆ ತಕ್ಷ ಶಿಕ್ಷೆಯಾಗಬೇಕು. ಇಲ್ಲ ಸ್ಟೆಜ್‌ ಕೊನೆಯಲ್ಲಿ ಎಷ್ಟು ಟಿಕೆಟ್‌ ವಿತರಣೆ ಮಾಡಲಾಗಿದೆ. ಅದರ ಟಿಕೆಟ್‌ ಮೌಲ್ಯ ಎಷ್ಟು ಎಂಬ ಬಗ್ಗೆ ಸ್ಟೆಜ್‌ನಲ್ಲಿ ಲೆಕ್ಕಹಾಕುವುದಕ್ಕೆ ಈ ರೀತಿ ಚೆಕ್‌ ಮಾಡುವ ಸಲುವಾಗಿ ಆ ಟಿಕೆಟ್‌ ಹರಿದಿರುವುದಾ ಎಂಬ ಬಗ್ಗೆಯೂ ಸ್ಪಷ್ಟನೆ ನೀಡಬೇಕಿದೆ ಈ ನಿರ್ವಾಹಕರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!