NEWSನಮ್ಮಜಿಲ್ಲೆನಮ್ಮರಾಜ್ಯ

BMTC – ವಜಾಗೊಂಡ ನೌಕರರ ಮಧ್ಯಂತರ ಪರಿಹಾರ ಪ್ರಕರಣ: ಫೆ.1ಕ್ಕೆ ಅಂತಿಮ ಆದೇಶ ಕಾಯ್ದಿರಿಸಿದ ಹೈ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಕಳೆದ 2021ರ ಏಪ್ರಿಲ್‌ನಲ್ಲಿ ಮಾಡಿದ ಮುಷ್ಕರದ ವೇಳೆ ಬಿಎಂಟಿಸಿಯಲ್ಲಿ ವಜಾ ಆದ ನೌಕರರ ವಿಚಾರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಪೀಠ ವಾದ ಪ್ರತಿವಾದವನ್ನು ಆಲಿಸಿದ ಬಳಿಕ ಅಂತಿಮ ಆದೇಶವನ್ನು ಫೆಬ್ರವರಿ 1ಕ್ಕೆ ಕಾಯ್ದಿರಿಸಿದೆ.

ಇನ್ನು ಕಲಾಪ ಆರಂಭವಾಗುತ್ತಿದ್ದಂತೆ ಎರಡು ಕಡೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಫೆ.1ರ ಬುಧವಾರಕ್ಕೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದಾರೆ. ಆದ್ದರಿಂದ ನೌಕರರು ಯಾವುದೇ ಗೊಂದಲಕ್ಕೂ ಒಳಗಾಗದೇ ತಾಳ್ಮೆಯಿಂದ ಸಹಕರಿಸಬೇಕು ಎಂದು ವಜಾಗೊಂಡ ನೌಕರರು ಮನವಿ ಮಾಡಿದ್ದಾರೆ.

ಮತ್ತೆ ಮುಂದಿನ ದಿನಗಳಲ್ಲಿ ಬಿಎಂಟಿಸಿ ಆಡಳಿತ ಮಂಡಳಿ ಕಡೆಯಿಂದ ಹೊಸ ಜಂಟಿ ಮೆಮೋಗಳು ಬಿಡುಗಡೆ ಮಾಡುವ ಸಂಭವವಿದ್ದು ನೌಕರರಲ್ಲಿ ಗೊಂದಲ ಮೂಡಿಸುವ ಹುನ್ನಾರ ನಡೆಯಲಿದೆ. ಹೀಗಾಗಿ ನೌಕರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.

ಇನ್ನು ಮುಂದುವರಿದು ನಮ್ಮ ಪರವಾಗಿ ಹೈಕೋರ್ಟ್‌ನ ಹಿರಿಯ ವಕೀಲರಾದ ಸುಬ್ಬರಾವ್ ಅವರು ವಾದಮಂಡಿಸಿದ್ದು, ನೌಕರರು ಯಾವುದೇ ತಪ್ಪು ಮಾಡಿಲ್ಲ ಆದ್ದರಿಂದ ಕಾರ್ಮಿಕ ನ್ಯಾಯಾಲಯ ನೀಡಿರುವ ಮಧ್ಯಂತರ ಪರಿಹಾರವನ್ನು ಕೊಡಲೇಬೇಕೆಂದು ಪ್ರಬಲವಾಗಿ ವಾದ ಮಂಡಿಸಿದರು. ಈ ಸಂಬಂಧ ಪ್ರತಿವಾದ ಮಂಡಿಸಿದ ಬಿಎಂಟಿಸಿ ಪರ ವಕೀಲರು ಮತ್ತೊಂದು ತಿಂಗಳು ಕಾಲವಕಾಶ ಕೇಳಿದರು. ಆದರೆ ಅದನ್ನು ನ್ಯಾಯಪೀಠ ತಳ್ಳಿಹಾಕಿತು.

ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಅಂತಿಮ ಆದೇಶಕ್ಕೆ ದಿನಾಂಕ ನಿಗದಿ ಮಾಡಿದ್ದು, ವಜಾಗೊಂಡ ನೌಕರರು ಆತಂಕಕ್ಕೆ ಒಳಗಾಗದೆ ನ್ಯಾಯಾಲಯದ ತೀರ್ಪಿನತ್ತ ಗಮನ ಹರಿಸೋಣ ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು