NEWSನಮ್ಮಜಿಲ್ಲೆನಮ್ಮರಾಜ್ಯ

BMTC: ವಜಾಗೊಂಡು ಮತ್ತೆ ಮರಳುತ್ತಿರುವ ನೌಕರರಿಗೆ ವಸತಿ, ಊಟದ ಸಮಸ್ಯೆಯಾಗಿದ್ದರೆ ಕೂಟದ ಪದಾಧಿಕಾರಿಗಳ ಸಂಪರ್ಕಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿಯಲ್ಲಿ ಮುಷ್ಕರದ ವೇಳೆ ವಜಾಗೊಂಡು ಮತ್ತೆ ಜಂಟಿ ಮೆಮೋ ಮೂಲಕ ಕರ್ತವ್ಯಕ್ಕೆ ಮರಳುತ್ತಿರುವ ಸಾರಿಗೆ ನೌಕರರಿಗೆ ಉಳಿದುಕೊಳ್ಳುವುದಕ್ಕೆ ಮತ್ತು ಊಟಕ್ಕೆ ತೊಂದರೆ ಆಗುತ್ತಿರುವ ಬಗ್ಗೆ ತಿಳಿದುಬಂದಿದೆ. ಈ ರೀತಿ ಸಮಸ್ಯೆಯಾಗುತ್ತಿದ್ದರೆ ಕೂಡಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳನ್ನು ಫೋನ್‌ ಮೂಲಕ ಸಂಪರ್ಕಿಸುವಂತೆ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಮನವಿ ಮಾಡಿದ್ದಾರೆ.

ಊಟ ಮತ್ತು ವಸತಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದರೆ ತಾವು ನಮ್ಮನ್ನು ಈ ಫೋನ್‌ ನಂಬರ್‌ಗಳ ಮೂಲಕ ಸಂಪರ್ಕಿಸಿ (ಕೂಟದ ಅಧ್ಯಕ್ಷ ಚಂದ್ರಶೇಖರ್‌- 9686188007, ಮಹಿಳಾ ಅಧ್ಯಕ್ಷರಾದ ಚಂಪಕಾವತಿ- 8310825953, ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ – 9035894266).

ಏಪ್ರಿಲ್‌ 2021ರ ವೇಳೆ ನಡೆದ ಮುಷ್ಕರದ ಸಂದರ್ಭದಲ್ಲಿ ನೂರಾರು ನೌಕರರನ್ನು ಸಂಸ್ಥೆ ಕೆಲಸದಿಂದ ಏಕಾಏಕಿ ವಜಾಮಾಡಿತ್ತು. ಹೀಗಾಗಿ ವಜಾಗೊಂಡಿರುವ ನೌಕರರಲ್ಲಿ ಹಲವರು ಬೆಂಗಳೂರು ತೊರೆದು ತಮ್ಮ ಸ್ವಂತ ಊರುಗಳಿಗೆ ಹೋಗಿದ್ದಾರೆ. ಈಗ ಮತ್ತೆ ಕೆಲಸಕ್ಕೆ ಮರಳಲು ಸಂಸ್ಥೆ ಕರೆ ನೀಡಿರುವುದರಿಂದ ಉತ್ತರ ಕರ್ನಾಟಕ ಭಾಗದ ನೌಕರರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬರುತ್ತಿದ್ದಾರೆ.

ಸದ್ಯ ಅವರಿಗೆ ಉಳಿದು ಕೊಳ್ಳುವುದಕ್ಕೆ ಮತ್ತು ಊಟಕ್ಕೆ ಸ್ವಲ್ಪ ತೊಂದರೆ ಆಗುತ್ತಿದ್ದು ಅವರು ತಮ್ಮ ಸಹೋದ್ಯೋಗಿಗಳಲ್ಲಿ ಸಮಸ್ಯೆ ಹೇಳಿಕೊಳ್ಳಲು ಮುಜುಗರ ಪಡುತ್ತಿದ್ದಾರೆ. ಹೀಗಾಗಿ ಅಂಥ ಸಮಸ್ಯೆಗೆ ಸಿಲುಕಿರುವವರು ಕೂಡಲೇ ಕೂಟದ ಪದಾಧಿಕಾರಿಗಳನ್ನು ಸಂಪರ್ಕಿಸಿ ತಾತ್ಕಾಲಿಕವಾಗಿ ನಿಮಗೆ ಎಲ್ಲ ಸೌಲಭ್ಯಗಳನ್ನು ಮಾಡಿಕೊಡುತ್ತೇವೆ ಎಂದು ಚಂದ್ರಶೇಖರ್‌ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು