NEWSನಮ್ಮಜಿಲ್ಲೆನಮ್ಮರಾಜ್ಯ

BMTC: ವೇತನಕ್ಕೆ ಆಗ್ರಹಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಡಿಪೋಗಳ ಮುಂದೆ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಗುರುವಾರ ಬಸ್‌ಗಳನ್ನು ಡಿಪೋದಿಂದ ಹೊರಕ್ಕೆ ತೆಗೆಯದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಆದರೆ ನಮಗೆ ಸರಿಯಾಗಿ ತಿಂಗಳಿಗೆ ವೇತನ ಆಗುತ್ತಿಲ್ಲ. ಜತೆಗೆ ಮೂಲಭೂತ ಸೌಲಭ್ಯಗಳನ್ನು ನೀಡುವಲ್ಲಿ ಕಂಪನಿ ಮತ್ತು ಸಂಸ್ಥೆ ವಿಫಲವಾಗಿದೆ ಎಂದು ಆರೋಪಿಸಿ ಜಮಾಯಿಸಿರುವ ಚಾಲಕರು ನಮಗೆ ಕೊಡುತ್ತಿರುವ ವೇತನ ಸಾಲುತ್ತಿಲ್ಲ, ಹೀಗಿದ್ದರೂ ತಿಂಗಳಿಗೆ ಸರಿಯಾಗಿ ಸಂಬಳ ಪಾವತಿಸದೆ ಅಸಡ್ಡೆ ತೋರುತ್ತಿದ್ದಾರೆ ಎಂದು ಪ್ರತಿಭನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಸರಿಯದ ಸಮಯಕ್ಕೆ ವೇತನ ಪಾವತಿಯಾಗಬೇಕು ಇದರ ಜತೆಗೆ ಮೆಡಿಕಲ್‌ ಸೌಲಭ್ಯವನ್ನೂ ಒದಗಿಸಬೇಕು ಎಂಬುವುದು ಸೇರಿ  ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದೇವೆ, ನಮ್ಮಲ್ಲಿರುವ ಕೆಲ ಸಮಸ್ಯೆಗಳನ್ನು ಹೇಳಿಕೊಂಡರು ಯಾರು ಸ್ಪಂದಿಸುತ್ತಿಲ್ಲ. ಹೀಗಾಗಿ ನಮ್ಮ ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಪಟ್ಟು ಹಿಡಿದು ಬಸ್‌ಅನ್ನು ಘಟಕಗಳಿಂದ ಹೊರ ತೆಗೆಯದೇ ಹೋರಾಟ ಮಾಡುತ್ತಿದ್ದಾರೆ.

ಯಶವಂತಪುರ ಹಾಗೂ ಕೆ.ಆರ್.ಪುರಂ ಡಿಪೋಗಳಲ್ಲಿ 70ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳು ಕಾರ್ಯಾಚರಣೆಯಾಗುತ್ತಿವೆ. ಇವುಗಳಿಂದ ಸಮಾಧಾನಕರ ಎನ್ನವಷ್ಟರ ಮಟ್ಟಿಗೆ ಆದಾಯವು ಬರುತ್ತಿದೆ. ಇದರ ನಡುವೆಯೇ ಸ್ಪೋಟಕ ಮಾಹಿತಿ ಎನ್ನುವಂತೆ ಚಾಲಕರಿಗೆ ವೇತನವನ್ನೇ ನೀಡಲಾಗಿಲ್ಲ ಎಂದು ದಿಢೀರ್‌ ಪ್ರತಿಭಟನೆಗೆ ಇಳಿದ್ದಿದ್ದಾರೆ. ಹೀಗಾಗಿ ಎಲ್ಲ ಬಸ್‌ಗಳ ಚಾಲಕರು ಇಂದು ತಮ್ಮ ಕಾರ್ಯಾಚರಣೆ ಸ್ಥಗಿತಗೊಳಿಸಿ ಡಿಪೋಗಳ ಮುಂದೆ ಧರಣಿ ನಡೆಸುತ್ತಿದ್ದಾರೆ.

ಎಲೆಕ್ಟ್ರಿಕ್ ಬಸ್‌ಗಳ ಕಂಪೆನಿಗೆ ಬಿಎಂಟಿಸಿ ಹಣವನ್ನು ಪಾವತಿಸಿಲ್ಲವೋ ಅಥವಾ ಬಿಎಂಟಿಸಿಗೆ ಬರುತ್ತಿರುವ ಎಲೆಕ್ಟ್ರಿಕ್ ಬಸ್‌ಗಳ ಆದಾಯ ಕಡಿಮೆಯಾಗಿದೆಯೋ ಗೊತ್ತಿಲ್ಲ, ಬಸ್‌ಗಳ ಚಾಲಕರು ತಮಗೆ ಸಂಬಳವಾಗಿಲ್ಲ ಎನ್ನುವ ಅಂಶವನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಬಿಎಂಟಿಸಿ ಆಡಳಿತಕ್ಕೆ ತೀವ್ರ ಮುಜುಗರ ಉಂಟಾಗುತ್ತಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ