NEWSನಮ್ಮಜಿಲ್ಲೆ

BMTC: ಶೀಘ್ರದಲ್ಲೇ ರಾಜ್ಯದ ರಾಜಧಾನಿ ರಸ್ತೆಗಿಳಿಯಲಿವೆ ಮತ್ತೆ 921 ಎಲೆಕ್ಟ್ರಿಕ್ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರನ್ನು ಹೊಗೆ ರಹಿತಮಾಡಲು ಬಿಎಂಟಿಸಿ ಮತ್ತಷ್ಟು ಎಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗಿಳಿಸಲು ಮುಂದಾಗಿದೆ.

ಈಗಾಲೇ 400ಕೂ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳು ಸಿಲಿಕಾನ್ ಸಿಟಿಯ ರಸ್ತೆಯಲ್ಲಿ ಓಡಾಡುತ್ತಿವೆ. ಇವುಗಳ ಜತೆಗೆ ಅತೀ ಶೀಘ್ರದಲ್ಲೇ ಇನ್ನಷ್ಟು ಎಲೆಕ್ಟ್ರಿಕ್ ಬಸ್‌ಗಳನ್ನು ಬಿಎಂಟಿಸಿ ಪರಿಚಯಿಸಲಿದೆ.

ಆ ಎಲೆಕ್ಟ್ರಿಕ್ ಬಸ್‌ಗಳ ಉದ್ದ 12 ಮೀಟರ್ ಇರಲಿದ್ದು, ಸದ್ಯದಲ್ಲೇ 921 ಬಸ್‌ಗಳನ್ನು ಒದಗಿಸುವ ಗುತ್ತಿಗೆಯೂ ಟಾಟಾ ಮೋಟರ್ಸ್ ಕಂಪನಿಗೆ ದೊರೆತಿದೆ. ಅತಿ ಕಡಿಮೆ ಬಿಡ್‌ ದಾಖಲಿಸಿದ್ದಕ್ಕೆ ಟಾಟಾ ಮೋಟರ್ಸ್ ಈ ಗುತ್ತಿಗೆ ಸಿಕ್ಕಿದೆ. ಹೀಗಾಗಿ ವಿವಿಧ ಹಂತಗಳಲ್ಲಿ ಬಸ್‌ಗಳ ಪೂರೈಕೆ ಮಾಡಲಿದೆ.

ಇನ್ನು ಚಾಲಕ ಮತ್ತು ನಿರ್ವಹಣೆ ಜವಾಬ್ದಾರಿಯನ್ನು ಟಾಟಾ ಮೋಟರ್ಸ್ ಕಂಪನಿಯೇ ನೋಡಿಕೊಳ್ಳಲಿದೆ. ಆದರೆ ನಿರ್ವಾಹಕರು ಮಾತ್ರ ಬಿಎಂಟಿಸಿ ಸಿಬ್ಬಂದಿ. ಈ ಬಸ್‌ಗಳ ವಿನ್ಯಾಸವನ್ನು ದೇಶೀಯವಾಗಿ ಅಭಿವೃದ್ಧಿಪಡಿಸಿ ನಿರ್ಮಿಸಲಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಟಾಟಾ ಮೋಟಾರ್ಸ್ ಉಪಾಧ್ಯಕ್ಷ (ಬಸ್ ತಯಾರಿಕೆ) ರೋಹಿತ್ ಶ್ರೀವಾತ್ಸವ್, ಇ-ಬಸ್ ಪೂರೈಸಲು ಗುತ್ತಿಗೆ ಸಿಕ್ಕಿರುವುದು ಸಂತಸದ ವಿಷಯ ಎಂದು ಖುಷಿ ಹಂಚಿಕೊಂಡಿದ್ದಾರೆ.

ಇನ್ನು ನಮ್ಮ ಕಂಪನಿಗೆ ದೆಹಲಿ ಸಾರಿಗೆ ನಿಗಮದಿಂದ 1,500 ಬಸ್‌ಗಳು, ಪಶ್ಚಿಮ ಬಂಗಾಳದಿಂದ 1,180 ಬಸ್‌ಗಳ ಪೂರೈಕೆಗೆ ಗುತ್ತಿಗೆ ದೊರತಿದೆ. 30 ದಿನಗಳ ಅಂತರದಲ್ಲಿ ಒಟ್ಟಾರೆ 3,600 ಇ-ಬಸ್‌ಗಳನ್ನು ಪೂರೈಸಲು ಕಾರ್ಯಾದೇಶ ಸಿಕ್ಕಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ, ಜಾಗತಿಕ ಟೆಂಡರ್‌ನಲ್ಲಿ ಭಾಗವಹಿಸಿದ್ದ ಟಾಟಾ ಮೋಟಾರ್ಸ್ ಕಂಪನಿಗೆ ಈ ಗುತ್ತಿಗೆ ದೊರೆತಿದ್ದು, 921 ಎಲೆಕ್ಟ್ರಿಕ್ ಬಸ್‌ಗಳನ್ನು ವಿವಿಧ ಹಂತಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿ ಪೂರೈಸಲಿದೆ ಎಂದು ವಿವರಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ