NEWSನಮ್ಮಜಿಲ್ಲೆನಮ್ಮರಾಜ್ಯ

BMTC: 10 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಪೋದಿಂದ ಬಸ್‌ ಹೊರ ತೆಗೆಯದೆ ಎಲೆಕ್ಟ್ರಿಕ್‌ ಬಸ್‌ ಚಾಲಕರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಭಾನುವಾರ ಬಸ್‌ಗಳನ್ನು ಡಿಪೋದಿಂದ ಹೊರಕ್ಕೆ ತೆಗೆಯದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ 6 ತಿಂಗಳ ಹಿಂದೆ ನೋವೋ ಬಸ್ ಟ್ರಾನ್ಸಿಟ್ ಸಿಸ್ಟಮ್‌ ಪ್ರೈವೇಟ್ ಲಿಮಿಟೆಡ್ ಮತ್ತು SWITCH ಕಂಪೆನಿಯಿಂದ ಯಲಹಂಕದಲ್ಲಿರುವ ಪುಟ್ಟೇನಹಳ್ಳಿಯ ಬೆಂಮಸಾಸಂ ಘಟಕ -30ರಲ್ಲಿ ಕೆಲಸ ಮಾಡುತ್ತಿದ್ದೇವೆ.

ಆದರೆ ನಮಗೆ ಸರಿಯಾದ ಸೌಲಭ್ಯಗಳನ್ನು ನೀಡುವಲ್ಲಿ ಕಂಪನಿ ಮತ್ತು ಸಂಸ್ಥೆ ವಿಫಲವಾಗಿದೆ ಎಂದು ಆರೋಪಿಸಿ ಜಮಾಯಿಸಿರುವ ಚಾಲಕರು ನಮಗೆ ವೇತನ ಸಾಲುತ್ತಿಲ್ಲ, ಮೆಡಿಕಲ್‌ ಸೌಲಭ್ಯವನ್ನೂ ಒದಗಿಸಬೇಕು ಎಂಬುವುದು ಸೇರಿ ಸುಮಾರು 10 ವಿವಿಧ ಬೇಡಿಕೆಗಳನ್ನು ಡಿಪೋ ವ್ಯವಸ್ಥಾಪಕರ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ನೋವೋ ಬಸ್ ಟ್ರಾನ್ಸಿಟ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು SWITCH ಎಂಬ ಕಂಪೆನಿಯಲ್ಲಿ ಸುಮಾರು 6 ತಿಂಗಳಿನಿಂದ ಕೆಲಸ ಮಾಡುತ್ತಿದ್ದೇವೆ, ನಮ್ಮಲ್ಲಿರುವ ಕೆಲ ಸಮಸ್ಯೆಗಳನ್ನು ಹೇಳಿಕೊಂಡರು ತಾವು ಇನ್ನು ಸ್ಪಂದಿಸಿಲ್ಲ ಹೀಗಾಗಿ ನಮ್ಮ ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಪಟ್ಟು ಹಿಡಿದು ಒಂದೇ ಒಂದು ಬಸ್‌ಅನ್ನು ಘಟಕದಿಂದ ಹೊರಗೆ ತೆಗೆಯದೇ ಹೋರಾಟ ಮಾಡುತ್ತಿದ್ದಾರೆ.

ಚಾಲಕರ ಬೇಡಿಕೆಗಳು ಏನೇನು?: 1) ಸಂಬಳದ ಚೀಟಿ’ (SALARY SLIP) ಕೊಡಬೇಕು. 2) ಕೆಲಸಕ್ಕೆ ಸೇರಿರುವ ನೇಮಕಾತಿ ಆದೇಶ ಪತ್ರ (APPOINTMENT LETTER) ಕೊಡಬೇಕು.

3) ಚಾಲಕರಿಗೆ ಕ್ಯಾಂಟೀನ್ ವ್ಯವಸ್ಥೆ ಅಥವಾ ಡ್ರೈವರ್ ಬಾಟ – 4) ಮಾಸಿಕ ಪಾಸು (KSRTC BMTC) ಸೌಲಭ್ಯ ಒದಗಿಸಿಕೊಡಬೇಕು. 5) ಪ್ರತಿ ತಿಂಗಳು 5 ರಿಂದ 8 ನೇ ತಾರೀಖಿನ ಒಳಗೆ ಸಂಬಳವನ್ನು ನಮ್ಮ ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕು.

6) ಸಂಬಳವನ್ನು ಈಗಿರುವ ₹25000 ದಿಂದ ₹30000ಕ್ಕೆ ಹೆಚ್ಚಿಸಬೇಕು. 7) ಉತ್ತಮ ಗುಣಮಟ್ಟದ ಸಮವಸ್ತ್ರ ಹಾಗೂ ಶೂ ನೀಡಬೇಕು. 8) ಚಾಲಕರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳುವುದು.

9) ಚಾಲಕರಿಗೆ ಮಾಸಿಕ CL, EL ನೀಡಬೇಕು ಮತ್ತು 10) ಚಾಲಕರಿಗೆ ಅಪಘಾತ ವಿಮೆ ಸೌಲಭ್ಯವನ್ನು ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು