BMTC 13ನೇ ಘಟಕದ ಕೌನ್ಸಿಲಿಂಗ್ ಕರ್ಮಕಾಂಡ: ಎಣ್ಣೆ ಪಾರ್ಟಿಗೆ ಸಪೋರ್ಟ್ ಮಾಡುವವರಿಗೆ ಡ್ಯೂಟಿ ರೋಟಾ ಥೂ ಇದೆಂಥ ಪದ್ಧತಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ 13ನೇ ಘಟಕದ ಅಧಿಕಾರಿಗಳು ಸೇವಾ ಹಿರಿತನವನ್ನು ಪರಿಗಣಿಸದೆ ಎಣ್ಣೆ, ಕಬಾಬು ತಂದು ಕೊಡುವ ಜೂನಿಯರ್ಗಳಿಗೆ ಮಣೆ ಹಾಕುತ್ತಿದ್ದು, ಡಿಪೋನಲ್ಲಿ ನಿಷ್ಠಾವಂತ ಪ್ರಾಮಾಣಿಕ ನೌಕರರು ಕೆಲಸ ಮಾಡಲಾಗದಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಏ.19ರ ಶನಿವಾರ ವಿವಿಧ ಕಾರಣಗಳಿಂದ ತೆರವಾಗಿದ್ದ ಮಾರ್ಗಗಳಿಗೆ ಡ್ಯೂಟಿ ರೋಟಾ ಕೌನ್ಸಿಲಿಂಗ್ ಮಾಡಿದ್ದು, ಈ ಬಗ್ಗೆ ಘಟಕದಲ್ಲಿ ಇರುವ ಸುಮಾರು 850 ನೌಕರರಲ್ಲಿ ಕೇವಲ 10 ಮಂದಿ ನೌಕರರಿಗೂ ವಿಷಯವೇ ತಿಳಿಸಿಲ್ಲ. ಇನ್ನು ಇತರೆ ಯಾವುದೇ ಮಾಹಿತಿಯನ್ನು ವಾಟ್ಸ್ಆಪ್ ಗ್ರೂಪ್ಗಳ ಮೂಲಕ ಕೊಡುವ ಎಟಿಎಸ್ ರಾಮರೆಡ್ಡಿ ಹಾಗೂ ಟಿಐ ಅಶೋಕ್ ಎಂಬುವರು ಕೌನ್ಸಿಲಿಂಗ್ ಮಾಡುತ್ತಿರುವ ಬಗ್ಗೆ ಮಾಹಿತಿಯನ್ನೇ ಕೊಟ್ಟಿಲ್ಲ.
ಇನ್ನು ನಿನ್ನೆ ಅಂದರೆ ಶನಿವಾರ ಬೆಳಗ್ಗೆ 6.45ರಿಂದ 7.30ರ ವರೆಗೆ ಕೌನ್ಸಿಲಿಂಗ್ ಮಾಡಿದ್ದೇವೆ ಎಂದು ಹೇಳುತ್ತಿರುವ ಈ ಅಧಿಕಾರಿಗಳು ತಮಗೆ ಇಷ್ಟ ಬಂದವರಿಗೆ ಲಂಚ ಕೊಡುವವರಿಗೆ ಫೋನ್ ಮೂಲಕವೇ ಕೌನ್ಸಿಲಿಂಗ್ ಮಾಡಿ ರೂಟ್ ಕೊಟ್ಟಿದ್ದಾರೆ ಎಂಬ ಆರೋಪವನ್ನು ಸೇವಾ ಹಿರಿತನ ಹೊಂದಿರುವ ನೂರಾರು ನೌಕರರು ಮಾಡಿದ್ದಾರೆ.
ಇನ್ನು ಈ ರಾಮರೆಡ್ಡಿ, ಅಶೋಕ್ ಅವರು ತಮ್ಮ ಜತೆಗೆ ಎಣ್ಣೆ ಪಾರ್ಟಿ ಮಾಡಲು ಬರುವ ನೌಕರರಿಗೆ ಹಾಗೂ ಕಬಾಬು ತಂದು ಕೊಡುವ ನೌಕರರಿಗೆ ಅವರು ಕೇಳಿದ ರೂಟ್ ಮತ್ತು ಯಾವಾಗ ಬೇಕೆಂದರೆ ಅವಾಗ ರಜೆ ಕೊಡುತ್ತಾರೆ. ನಾವು ಕಷ್ಟಪಟ್ಟು ಡ್ಯೂಟಿ ಮಾಡಿ ವಾರದ ಮತ್ತು ಇತರೆ ರಜೆ ಪಡೆಯಬೇಕು ಎಂದರೂ ಹಿಂಸೆಕೊಡುತ್ತಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೆ ಟಿಸಿ ಎಸ್.ಜೆ.ಮೇಟಿ ಎಂಬಾತ ಚಾಲನಾ ಸಿಬ್ಬಂದಿಗಳಿಗೆ ಇರುವ ರೊಟೇಷನ್ ರೂಟ್ಅನ್ನೇ ತನಗೆ ಬೇಕಾದವರಿಗೆ ಕೊಡುತ್ತಾನೆ. ನಮ್ಮ ರೊಟೇಷನ್ ರೂಟ್ಅನ್ನು ಬೇರೆಯವರಿಗೆ ಏಕೆ ಕೊಟ್ಟಿದ್ದೀರಿ ಎಂದು ಕೇಳಿದರೆ ನೀನು ತಡವಾಗಿ ಬಂದಿದ್ದೀಯೆ ಅದಕ್ಕೆ ನಾನು ಕೊಟ್ಟುಕಳಿಸಿದ್ದೇನೆ ನಾಳೆ ಬಾ ಅದೇ ರೂಟ್ ಮಾಡು ಎಂದು ನೌಕರರಿಗೆ ದಮ್ಕಿ ಹಾಕುತ್ತಾನೆ ಎಂಬ ಆರೋಪ ಕೇಳಿ ಬಂದಿದೆ.
ಇತ್ತ 13ನೇ ಘಟಕದಲ್ಲಿ ಘಟಕ ವ್ಯವಸ್ಥಾಪಕರು ತಿಂಗಳಲ್ಲಿ ಕನಿಷ್ಠ ಒಂದುವಾರವಾದರೂ ರಜೆ ಮೇಲೆ ಇರುತ್ತಾರೆ. ನಾವು ನಮಗೆ ಆಗುತ್ತಿರುವ ತೊಂದರೆ ಹೇಳಿಕೊಳ್ಳಲು ಹೋದರೂ ಅವರು ಸಿಗುವುದಿಲ್ಲ ಎಂಬ ಆರೋಪ ಘಟಕ ವ್ಯವಸ್ಥಾಪಕರ ಮೇಲಿದೆ. ಹೀಗೆ ಬಿಎಂಟಿಸಿ 13ನೇ ವೋಲ್ವೋ ಘಟಕದಲ್ಲಿ ಇರುವ ಎಟಿಎಸ್, ಟಿಐ ಹಾಗೂ ಟಿಸಿ ಇವರು ಕೊಡುತ್ತಿರುವ ಕಿರುಕುಳದಿಂದ ನೌಕರರು ಭಾರಿ ಮನನೊಂದುಕೊಂಡೇ ಡ್ಯೂಟಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೀಗಾಗಿ ಈ ಮೂವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಂಡು ಅಮಾನತು ಮಾಡಬೇಕು. ಇಲ್ಲ ಬೇರೆ ಕಡೆ ವರ್ಗಾವಣೆ ಮಾಡಿದರೆ ನೌಕರರಿಗೆ ಸಂಬಂಧಿಸದ ಸ್ಥಳಗಳಿಗೆ ವರ್ಗಾವಣೆ ಮಾಡಿ. ಏಕೆಂದರೆ ಇವರಿಂದ ನೌಕರರು ನೆಮ್ಮದಿಕಳೆದುಕೊಂಡು ಒತ್ತಡದಲ್ಲೇ ಡ್ಯೂಟಿ ಮಾಡಬೇಕಾಗುತ್ತದೆ. ಹೀಗೆ ಮಾಡಿದರೆ ಅಪಘಾತಗಳು ಆಗುವ ಸಂದರ್ಭಗಳೇ ಹೆಚ್ಚು ಎಂದು ನೌಕರರು ಡಿಸಿ ಅವರಲ್ಲಿ ಮನವಿ ಮಾಡಿದ್ದಾರೆ.
ಅಲ್ಲದೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಅವರ ಬಳಿ ಈ ಸಂಬಂಧ ಸಮಸ್ಯೆಯನ್ನು ಹೇಳಿಕೊಳ್ಳಲು ಹೋದರೆ ಅಂಥ ನೌಕರರನ್ನು ಅವರ ಬಳಿ ಬಿಡುತ್ತಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿದೆ. ಹೀಗಾಗಿ ಎಂಡಿ ಅವರು ಈ ಘಟಕದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
Related

You Might Also Like
ಪ್ರಧಾನಿ ಮೋದಿ ಪ್ರಚಾರದಿಂದಷ್ಟೇ ಬದುಕಿರುವುದು: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದಿಂದ ಬದುಕಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ...
ಖಾತೆ ಬದಲಾಯಿಸುವಂತೆ ಕೇಳಿಲ್ಲ- ಗಣನೆಗೆ ತೆಗೆದುಕೊಳ್ಳುವುದು ಬೇಡ: ಪರವೇಶ್ವರ್
ಬೆಂಗಳೂರು: ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಜತೆಗೆ ಈಗ ಖಾತೆ ಬದಲಾಯಿಸುವಂತೆಯೂ ಕೇಳಿಲ್ಲ. ಸುಳ್ಳುಸುದ್ದಿ ಗಣನೆಗೆ ತೆಗೆದುಕೊಳ್ಳುವುದು ಬೇಡ ಎಂದು...
ತುಮಕೂರಿಗೆ ಅರ್ಬನ್, ಮೆಟ್ರೋ ರೈಲು ಎರಡು ಬರಲಿ: ಗೃಹ ಸಚಿವ ಜಿ.ಪರಮೇಶ್ವರ
ಬೆಂಗಳೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ತುಮಕೂರು ಜಿಲ್ಲಾ...
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...