Please assign a menu to the primary menu location under menu

CrimeNEWSಬೆಂಗಳೂರು

BMTC: ನೌಕರರಿಂದ ಮೊಬೈಲ್‌ ಆ್ಯಪ್‌ಗಳ ಮೂಲಕ ₹1.5 ಕೋಟಿ ಲಂಚ ಪಡೆದ 7 ಸಿಬ್ಬಂದಿಗಳ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಬೈಲ್‌ ಪಾವತಿ ಆ್ಯಪ್‌ಗಳ ಮೂಲಕ ಸಂಸ್ಥೆಯ ಸಿಬ್ಬಂದಿಯಿಂದ 1.5 ಕೋಟಿ ರೂ.ಗಳಷ್ಟು ಲಂಚ ಪಡೆದ ಆರೋಪದ ಮೇಲೆ ಬಿಎಂಟಿಸಿ ಜಿಗಣಿ 27ನೇ ಘಟಕದ ಏಳು ಮಂದಿ ಅಧಿಕಾರಿಗಳು, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಘಟಕದ ಮೇಲ್ವಿಚಾರಕಿ ಆರ್‌.ಮಂಜುಳಾ, ಕಿರಿಯ ಸಹಾಯಕರಾದ ಪ್ರೀತಂ, ಎಲ್.ಎಸ್‌.ಮನೋಜ್‌ ಕುಮಾರ್‌, ಎ.ಸುಮಾ, ಶಾಂತವ್ವ, ಸಹಾಯಕ ಲೆಕ್ಕಿಗ ವಿ.ಧನಂಜಯ, ಸಹಾಯಕ ಕುಶಲಕರ್ಮಿ ಜಿ.ದೇವರಾಜ್‌ ಅಮಾನತುಗೊಂಡವರು.

ಆರೋಪಿಗಳು ಸಹೋದ್ಯೋಗಿಗಳಿಂದ ಮೊಬೈಲ್‌ ಪಾವತಿ ಆ್ಯಪ್‌ಗಳ ಮೂಲಕ ಹಣ ಜಮೆ ಮಾಡಿಸಿಕೊಂಡು ಡಿಜಿಟಲ್‌ ಹಣದ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದಾಗ ಸತ್ಯಾಂಶವನ್ನು ಮರೆಮಾಚಿದ್ದ ಆರೋಪಿಗಳು ಶಿಸ್ತುಕ್ರಮದಿಂದ ತಪ್ಪಿಸಿಕೊಂಡಿದ್ದರು.

ಮತ್ತೆ ಈ ಕುರಿತು ಬಿಎಂಟಿಸಿಯ ಭದ್ರತಾ ಮತ್ತು ಜಾಗೃತ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ತನಿಖೆ ನಡೆಸಿದಾಗ ಲಂಚ ಪ್ರಕರಣ ಸಾಬೀತಾಗಿದೆ. ಈ ಏಳು ಮಂದಿಯ ಬ್ಯಾಂಕ್‌ ದಾಖಲೆಗಳನ್ನು ಪರಿಶೀಲಿಸಿದಾಗ ಆರೋಪಿಗಳು ಮೊಬೈಲ್‌ ಪಾವತಿ ಆ್ಯಪ್‌ಗಳ ಮೂಲಕ ಲಂಚ ಪಡೆದಿರುವ ಸಾಕ್ಷ್ಯಗಳು ಲಭಿಸಿದ್ದವು.

ಏಳು ಆರೋಪಿಗಳ ಬ್ಯಾಂಕ್‌ ಖಾತೆಗಳಿಗೆ ಸುಮಾರು 1.5 ಕೋಟಿ ರೂ.ಗಳು ಜಮೆಯಾಗಿದೆ. ಈ ಮೊತ್ತವನ್ನು ಅವರು ಆನ್‌ಲೈನ್‌ ಹೂಡಿಕೆಯಲ್ಲಿ ತೊಡಗಿಸಿರುವುದು ಕಂಡುಬಂದಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.

ಈ ಎಲ್ಲ ಆರೋಪಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಿ, ಶಿಸ್ತುಕ್ರಮ ಜರುಗಿಸಲು ನಿರ್ಧರಿಸಲಾಗಿದೆ. ಆರೋಪಿಗಳನ್ನು ‌‘ವಿಚಾರಣಾ ಇತ್ಯರ್ಥಪೂರ್ವ ಅಮಾನತು’ ಮಾಡಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ