CrimeNEWSಬೆಂಗಳೂರು

BMTC: ನೌಕರರಿಂದ ಮೊಬೈಲ್‌ ಆ್ಯಪ್‌ಗಳ ಮೂಲಕ ₹1.5 ಕೋಟಿ ಲಂಚ ಪಡೆದ 7 ಸಿಬ್ಬಂದಿಗಳ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಬೈಲ್‌ ಪಾವತಿ ಆ್ಯಪ್‌ಗಳ ಮೂಲಕ ಸಂಸ್ಥೆಯ ಸಿಬ್ಬಂದಿಯಿಂದ 1.5 ಕೋಟಿ ರೂ.ಗಳಷ್ಟು ಲಂಚ ಪಡೆದ ಆರೋಪದ ಮೇಲೆ ಬಿಎಂಟಿಸಿ ಜಿಗಣಿ 27ನೇ ಘಟಕದ ಏಳು ಮಂದಿ ಅಧಿಕಾರಿಗಳು, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಘಟಕದ ಮೇಲ್ವಿಚಾರಕಿ ಆರ್‌.ಮಂಜುಳಾ, ಕಿರಿಯ ಸಹಾಯಕರಾದ ಪ್ರೀತಂ, ಎಲ್.ಎಸ್‌.ಮನೋಜ್‌ ಕುಮಾರ್‌, ಎ.ಸುಮಾ, ಶಾಂತವ್ವ, ಸಹಾಯಕ ಲೆಕ್ಕಿಗ ವಿ.ಧನಂಜಯ, ಸಹಾಯಕ ಕುಶಲಕರ್ಮಿ ಜಿ.ದೇವರಾಜ್‌ ಅಮಾನತುಗೊಂಡವರು.

ಆರೋಪಿಗಳು ಸಹೋದ್ಯೋಗಿಗಳಿಂದ ಮೊಬೈಲ್‌ ಪಾವತಿ ಆ್ಯಪ್‌ಗಳ ಮೂಲಕ ಹಣ ಜಮೆ ಮಾಡಿಸಿಕೊಂಡು ಡಿಜಿಟಲ್‌ ಹಣದ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದಾಗ ಸತ್ಯಾಂಶವನ್ನು ಮರೆಮಾಚಿದ್ದ ಆರೋಪಿಗಳು ಶಿಸ್ತುಕ್ರಮದಿಂದ ತಪ್ಪಿಸಿಕೊಂಡಿದ್ದರು.

ಮತ್ತೆ ಈ ಕುರಿತು ಬಿಎಂಟಿಸಿಯ ಭದ್ರತಾ ಮತ್ತು ಜಾಗೃತ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ತನಿಖೆ ನಡೆಸಿದಾಗ ಲಂಚ ಪ್ರಕರಣ ಸಾಬೀತಾಗಿದೆ. ಈ ಏಳು ಮಂದಿಯ ಬ್ಯಾಂಕ್‌ ದಾಖಲೆಗಳನ್ನು ಪರಿಶೀಲಿಸಿದಾಗ ಆರೋಪಿಗಳು ಮೊಬೈಲ್‌ ಪಾವತಿ ಆ್ಯಪ್‌ಗಳ ಮೂಲಕ ಲಂಚ ಪಡೆದಿರುವ ಸಾಕ್ಷ್ಯಗಳು ಲಭಿಸಿದ್ದವು.

ಏಳು ಆರೋಪಿಗಳ ಬ್ಯಾಂಕ್‌ ಖಾತೆಗಳಿಗೆ ಸುಮಾರು 1.5 ಕೋಟಿ ರೂ.ಗಳು ಜಮೆಯಾಗಿದೆ. ಈ ಮೊತ್ತವನ್ನು ಅವರು ಆನ್‌ಲೈನ್‌ ಹೂಡಿಕೆಯಲ್ಲಿ ತೊಡಗಿಸಿರುವುದು ಕಂಡುಬಂದಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.

ಈ ಎಲ್ಲ ಆರೋಪಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಿ, ಶಿಸ್ತುಕ್ರಮ ಜರುಗಿಸಲು ನಿರ್ಧರಿಸಲಾಗಿದೆ. ಆರೋಪಿಗಳನ್ನು ‌‘ವಿಚಾರಣಾ ಇತ್ಯರ್ಥಪೂರ್ವ ಅಮಾನತು’ ಮಾಡಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ