CrimeNEWSನಮ್ಮಜಿಲ್ಲೆ

BMTC: ಇಂದು ಬೆಳ್ಳಂಬೆಳಗ್ಗೆ ಎಂಜಿ ರಸ್ತೆ ಮಧ್ಯದಲ್ಲೇ ಸುಟ್ಟು ಭಸ್ಮವಾದ ಬಸ್‌ – ಅದೃಷ್ಟವಶಾತ್‌ ಪ್ರಯಾಣಿಕರು ಪಾರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ (BMTC) ಬಸ್‌ನ ಇಂಜಿನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ ಬಸ್‌ ಸುಟ್ಟು ಕರಕಲಾದ ಘಟನೆ ಇಂದು ಬೆಳಗ್ಗೆ ಎಂಜಿ ರಸ್ತೆಯಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರೋಸ್ ಗಾರ್ಡನ್‌ನಿಂದ ಶಿವಾಜಿನಗರದ ಕಡೆಗೆ ಬರುತ್ತಿದ್ದ ವೇಳೆ ರಾಜಧಾನಿಯ ಜನ ನಿಬಿಡ ಹಾಗೂ ವಾಹನ ನಿಬಿಡ ಸ್ಥಳವಾದ MG Road ಮಧ್ಯದಲ್ಲೇ ಬಿಎಂಟಿಸಿ ಬಸ್‌ ಬೆಂಕಿಯ ಕೆನ್ನಾಲಗೆಗೆ ಸುಟ್ಟು ಭಸ್ಮವಾಗಿದೆ. ಇತ್ತ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತುಕೊಂಡ ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಯಾಣಿಕರನ್ನು ವೇಗವಾಗಿ ಕೆಳಗೆ ಇಳಿಸಿದ್ದರಿಂದ ಭಾರಿ ಪ್ರಮಾಣದ ಪ್ರಾಣ ಹಾನಿ ತಪ್ಪಿದೆ.

ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ  ಸುಮಾರು 30 ಮಂದಿ ಪ್ರಯಾಣಿಕರಿದ್ದರು. ಚಾಲಕರ ಸಮಯ ಪ್ರಜ್ಞೆಯಿಂದ ಆಗುತ್ತಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

ಬಸ್‌ನಲ್ಲಿ ಬೆಂಕಿಕಾಣಿಸಿಕೊಂಡ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರಿಂದ ಕೂಡಲೇ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರೆ ಆದರೆ ಬಹುತೇಕ ಬಸ್‌ ಅಷ್ಟರಲ್ಲೇ ಭಸ್ಮವಾಗಿದೆ.

ಇತ್ತ ಈ ಘಟನೆಯಿಂದಾಗಿ,  ಸದಾ ದಟ್ಟ ವಾಹನನಿಬಿಡ ಸ್ಥಳವಾದ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಯಿತು. ಅಲ್ಲದೆ ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು. ಈ ವೇಳೆ ಮೆಟ್ರೋ ನಿಲ್ದಾಣದಲ್ಲಿದ್ದ ಸಾರ್ವಜನಿಕರು ಕ್ಷಣಕಾಲ ಗಾಬರಿಗೊಂಡು ಆತಂಕಕ್ಕೆ ಒಳಗಾದರು.

ಅಧಿಕಾರಿಗಳ ಕೆಟ್ಟ ನಡೆಯಿಂದ ಇಂಥ ಘಟನೆ: ಇತ್ತೀಚೆಗೆ ಬಿಎಂಟಿಸಿಯಲ್ಲಿ ಸವೆದುಹೋದ ಬಿಡಿ ಭಾಗಗಳನ್ನು ಅಳವಡಿಸದೆ ಇರುವುದರ ಪರಿಣಾಮ ಇಂಥ ಅನಾಹುತಗಳು ಸಂಭವಿಸುತ್ತಿವೆ. ಪ್ರತಿಯೊಂದಕ್ಕೂ ಚಾಲಕರನ್ನೇ ಹೊಣೆ ಮಾಡುತ್ತಿರುವುದರಿಂದ ಚಾಲಕರು ಕೂಡ ಬಸ್‌ನಲ್ಲಿ ಕಂಡು ಬರುವ ದೋಷದ ಬಗ್ಗೆ ಯಾವುದೆ ಮಾಹಿತಿ ನೀಡದೆ ತಮ್ಮ ಕರ್ತವ್ಯ ಮುಗಿದ ಕೂಡಲೇ ಬಸ್‌ಗಳನ್ನು ಘಟಕಕ್ಕೆ ತಂದು ಬಿಟ್ಟು ಹೋಗುತ್ತಿದ್ದಾರೆ.

ಮೊನ್ನೆಯಷ್ಟೆ ಒಬ್ಬ ಚಾಲಕರು ಬಸ್‌ನಲ್ಲಿ ದೋಷವಿದೆ ಎಂದು ಲಾಗ್‌ ಶಿಟ್‌ನಲ್ಲಿ ನಮೂದಿಸಿ ಗಮನಕ್ಕೆ ತಂದಿದ್ದರಿಂದ ಆ ಚಾಲಕರ ವಿರುದ್ಧವೇ ಕ್ರಮ ಕೈಗೊಂಡು ಅಮಾನತು ಮಾಡಲಾಗಿದೆ. ಇದರಿಂದ ಭಯಗೊಂಡಿರುವ ಸಂಸ್ಥೆಯ ಇತರ ಚಾಲಕರು ನಾವೇಕೆ ಬಸ್‌ನಲ್ಲಿ ಇರುವ ಸಮಸ್ಯೆ ಹೇಳಿ ಅಮಾನತಾಗಬೇಕು ಎಂದು ಏನನ್ನು ಹೇಳದ ಪರಿಸ್ಥಿಗೆ ಬಂದಿದ್ದಾರೆ.

ಇಂಥ ಘಟನೆಗಳು ನಡೆಯಲು ಘಟಕ ಮಟ್ಟದ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳೇ ಕಾರಣರು ಎಂದು   ಯಾವುದೇ ಸಂಶಯವಿಲ್ಲದೆ ಹೇಳಬಹುದು ಎಂದು ಚಾಲಕರು ನೋವಿನಲ್ಲೇ ಹೇಳುತ್ತಿದ್ದಾರೆ. ಇನ್ನಾದರು ಬಸ್‌ನಲ್ಲಿ ಕಂಡು ಬರುವ ಸಮಸ್ಯೆಯನ್ನು ಲಾಗ್‌ಶಿಟ್‌ನಲ್ಲಿ ನಮೂದಿಸುವ ಚಾಲಕರ ವಿರುದ್ಧ ಈ ರೀತಿಯ ಕ್ರಮ ತೆಗೆದುಕೊಳ್ಳುವುದನ್ನು ಬಿಟ್ಟರೆ ಬಹುತೇಕ ಎಲ್ಲ ಸರಿಯೋಗಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಅನುಕೂಲವಾಗುತ್ತದೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ