Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಆಧಾರ್‌ ಕಾರ್ಡ್‌ ಯಾವುದೇ ಭಾಷೆಯಲ್ಲಿರಲಿ ಅದು ಕರ್ನಾಟಕ ರಾಜ್ಯದ್ದಾಗಿದ್ದರೆ ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ನೀಡಬೇಕು ಎಂದು ಸಂಸ್ಥೆ ಆದೇಶ ಹೊರಡಿಸಿದೆ.

ನಿರ್ವಾಹಕರಿಗೆ ಈ ಬಗ್ಗೆ ಕೆಲ ಗೊಂದಲಗಳಿದ್ದವು ಅದನ್ನು ನಿವಾರಿಸುವ ಸಲುವಾಗಿ ಬಿಎಂಟಿಸಿ ನಿಗಮವು ಸ್ಪಷ್ಟ ಸೂಚನೆ ನೀಡಿದ್ದು, ಆಧಾರ್‌ ಕಾರ್ಡ್‌ ಯಾವುದೇ ಭಾಷೆಯಲ್ಲಿರಲಿ ಅದು ಕರ್ನಾಟಕದ ವಿಳಾಸ ಹೊಂದಿದ್ದರೆ ಅದನ್ನು ಪರಿಗಣಿಸಬೇಕು ಎಂದು ತಿಳಿಸಿದೆ.

ಈ ಹಿಂದೆ ಆಧಾರ್ ‌ಕಾರ್ಡ್​​ನಲ್ಲಿ ಇಂಗ್ಲಿಷ್ ಜತೆಗೆ ಕನ್ನಡ ಬಿಟ್ಟು ಬೇರೆ ಭಾಷೆ ಪ್ರಿಂಟ್ ಆಗಿದ್ದರೆ, ಅಂತಹ ಮಹಿಳೆಯರಿಗೆ ಬಿಎಂಟಿಸಿ ಕಂಡಕ್ಟರ್​ಗಳು ಶಕ್ತಿ ಯೋಜನೆಯ ಟಿಕೆಟ್ ನೀಡಲು ಗೊಂದಲಕ್ಕೆ ಒಳಗಾಗುತ್ತಿದ್ದರು. ಇದರಿಂದ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಹಲವುಬಾರಿ ಜಗಳವಾಗುತ್ತಿತ್ತು.

ಅದನ್ನು ತಪ್ಪಿಸಲು ಬಿಎಂಟಿಸಿ ಮುಂದಾಗಿದ್ದು, ಇನ್ಮುಂದೆ ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೆ ಸಾಕು, ಶಕ್ತಿ ಯೋಜನೆ ಟಿಕೆಟ್ ನೀಡಬಹುದು ಎಂದು ಸೂಚನೆ ನೀಡಿದೆ.

ಇನ್ನು ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸಿ ರಾಜ್ಯದ ವಿಳಾಸ ಹೊಂದಿದ್ದರೆ ಬಿಎಂಟಿಸಿ ಬಸ್​ನಲ್ಲಿ ಅವರಿಗೆ ಉಚಿತವಾಗಿ ಸಂಚಾರ ಮಾಡಲು ಅವಕಾಶವಿದೆ. ಆಧಾರ್ ಕಾರ್ಡ್‌ ಕನ್ನಡದಲ್ಲಿ ವಿಳಾಸ ಇಲ್ಲಾಂದರೂ ಪರವಾಗಿಲ್ಲ (ತಮಿಳು. ತೆಲುಗು ಹೀಗೆ ಯಾವುದೇ ಭಾಷೆಯಲ್ಲಿರಲಿ) ಕರ್ನಾಟಕದ ವಿಳಾಸವಿದ್ದರೆ ಸಾಕು ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ಆಧಾರ್ ಕಾರ್ಡ್​​ನಲ್ಲಿ ಕನ್ನಡದಲ್ಲಿ ವಿಳಾಸವಿರಬೇಕೆಂದು ಬಿಎಂಟಿಸಿಯ ಕೆಲ ಕಂಡಕ್ಟರ್​ಗಳು ಹೇಳುತ್ತಿದ್ದರು ಅಲ್ಲದೆ ಈ ಬಗ್ಗೆ ಸಂಸ್ಥೆಕೂಡ ಸ್ಪಷ್ಟ ಸೂಚನೆ ನೀಡದ ಹಿನ್ನೆಯಲ್ಲಿ ಗೊಂದಲವಾಗುತ್ತಿತ್ತು.

ಹೀಗಾಗಿ ದೇಶದ ನಾಗರೀಕರು ಆಧಾರ್ ಕಾರ್ಡನ್ನು ದೇಶದಾದ್ಯಂತ ಯಾವುದೇ ರಾಜ್ಯದಲ್ಲಿ ಪಡೆಯಲು ಅವಕಾಶವಿದ್ದು, ಯಾವ ರಾಜ್ಯದಲ್ಲಿ ಆಧಾರ್ ಕಾರ್ಡ್ ಅನ್ನು ಪಡೆಯುತ್ತಾರೋ ಆ ರಾಜ್ಯದ ಅಧಿಕೃತ ಭಾಷೆ ಮತ್ತು ಅಂಗ್ಲ ಭಾಷೆಯಲ್ಲಿ (ದ್ವಿಭಾಷೆ) ಆಧಾರ್ ಕಾರ್ಡ್ ಮುದ್ರಣವಾಗುತ್ತದೆ.

ಹೀಗಾಗಿ ಕನ್ನಡ ಹೊರತುಪಡಿಸಿ ಅನ್ಯಭಾಷೆಯಲ್ಲಿ ಮುದ್ರಿತ (ದ್ವಿಭಾಷೆ) ಆಧಾರ್ ಕಾರ್ಡ್ ಗಳಲ್ಲಿನ ಆಂಗ್ಲ ಭಾಷೆಯಲ್ಲಿರುವ ವಿಳಾಸವನ್ನು ಪರಿಶೀಲಿಸಿ ವಿಳಾಸವು ಕರ್ನಾಟಕ ರಾಜ್ಯದಾಗಿದ್ದಲ್ಲಿ, ಆ ಆಧಾರ್ ಕಾರ್ಡ್ ಅನ್ನು ಮಾನ್ಯ ಮಾಡಿ ಶಕ್ತಿಯೋಜನೆ ಅಡಿಯಲ್ಲಿ ಉಚಿತ ಟಿಕೆಟ್ ನೀಡಬೇಕು ಎಂದು ಸೂಚಿಸಿದೆ.

ಒಟ್ಟಿನಲ್ಲಿ ಬಿಎಂಟಿಸಿ ಬಸ್​ನಲ್ಲಿ ಉಚಿತವಾಗಿ ಟಿಕೆಟ್ ತೆಗೆದುಕೊಂಡು ಪ್ರಯಾಣ ಮಾಡಬೇಕೆಂದರೆ, ಆಧಾರ್ ಕಾರ್ಡ್ ಕನ್ನಡದಲ್ಲೇ ಇರಬೇಕೆಂಬ ಗೊಂದಲವಿಲ್ಲ. ಬಿಎಂಟಿಸಿಯ ಹೊಸ ಆದೇಶ ಈ ಎಲ್ಲ ಗೊಂದಲಗಳಿಗೆ ಬ್ರೇಕ್ ಹಾಕಿದ್ದು ಬಿಎಂಟಿಸಿ ಆದೇಶದಿಂದ ಮಹಿಳಾ ಪ್ರಯಾಣಿಕರು ಕೂಡ ಸಂತಸಗೊಂಡಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...