BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ ನೀಡಿ 7ದಿನದೊಳಗೆ ಲಿಖಿತ ಹೇಳಿಕೆ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.
ಬಿಎಂಟಿಸಿ ಡಿಪೋ-2ರ ಚಾಲನಾ ಸಿಬ್ಬಂದಿಗಳಾದ ಕಂಡಕ್ಟರ್ ವೀರಯ್ಯ ಗುಮತಿಮಠ ಮತ್ತು ಚಾಲಕ ಬಸವರಾಜು ಎಂಬುವರಿಗೆ ಘಟಕ ವ್ಯವಸ್ಥಾಪಕ ಮೆಮೋ ಕೊಟ್ಟಿದ್ದಾರೆ.
ಪ್ರಕರಣವೇನು? ಜೂನ್ 11ರಂದು ಎರಡನೆ ಪಾಳಿಯ ಮಾರ್ಗ ಸಂ-150/04 ರಲ್ಲಿ ನಿರ್ವಾಹಕರಾಗಿ ಮತ್ತು ಚಾಲಕರಾಗಿ ಕರ್ತವ್ಯ ನಿರ್ವಹಿಸಿರುವ ನೀವು ಈ ಮಾರ್ಗದಲ್ಲಿ ಅಪರಾಧ ಮಾಡಿರುತ್ತೀರಿ.
ಅದರಲ್ಲಿ ಮೊದಲನೆಯದಾಗಿ ನಮೂನೆ-04ರ ಪ್ರಕಾರ ಮಾರ್ಗದ ಒಟ್ಟಾರೆ ಕಿಲೋ ಮೀಟರ್-79 ಕಿಮೀ ಆಗಿದ್ದು, ನೀವು ಕೇವಲ 34 ಕಿಮೀ ಮಾತ್ರ ಕಾರ್ಯಾಚರಣೆ ಮಾಡಿ ಸುಮಾರು 45 ಕಿಮೀ ರದ್ದು ಮಾಡಿದ್ದೀರಿ. ಇದರಿಂದ ಘಟಕದ ಸಾರಿಗೆ ಆದಾಯ ನಷ್ಟವಾಗಲು ಕಾರಣರಾಗಿದ್ದೀರಿ.
2) ವಿನಾ ಕಾರಣ ಪ್ರತಿ ಸುತ್ತುವಳೆಯಲ್ಲೂ 15-20 ನಿಮಿಷ ಕಾಲ ಹರಣ ಮಾಡಿರುತ್ತಿರಿ.
3) ನಮೂನೆ-4 ರ ಪ್ರಕಾರ 01:45ಕ್ಕೆ ಕೆ.ಆರ್ ಮಾರುಕಟ್ಟೆಯಿಂದ ಮಾರ್ಗಚರಣೆ ಮಾಡಬೇಕಾಗಿತ್ತು. ಆದರೆ ನೀವು 2:03 ನಿಮಿಷಕ್ಕೆ ಮಾರ್ಗಾಚರಣೆ ಮಾಡಿದ್ದು, ಸುಮಾರು 18 ನಿಮಿಷ ತಡವಾಗಿ ಆಚರಣೆ ಮಾಡಿರುತ್ತೀರಿ. ಇದರಿಂದ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಲಭ್ಯವಿಲ್ಲದೆ ತೊಂದರೆ ಉಂಟಾಗಲು ಕಾರಣರಾಗಿದ್ದೀರಿ.
4) ಈ ಮಾರ್ಗದ ನಿಗದಿತ ಆದಾಯವು 6000 ರೂ.ಗಳಾಗಿದ್ದು, ತಾವು ಕೇವಲ 2572 ರೂ. ಗಳನ್ನು ಸಂದಾಯ ಮಾಡಿರುತ್ತೀರಿ. ಇದರಿಂದ ಸುಮಾರು 3500 ರೂ.ಗಳಷ್ಟು ಸಂಸ್ಥೆಗೆ ಆರ್ಥಿಕ ನಷ್ಟವುಂಟಾಗಲು ಕಾರಣರಾಗಿದ್ದೀರಿ.
5) ನಮೂನೆ-4 ರ ಪ್ರಕಾರ ಮಾರ್ಗದ ಕಾರ್ಯಾಚರಣೆ ಮುಗಿಸಿಕೊಂಡು 21:10 ಗಂಟೆಗೆ ಘಟಕಕ್ಕೆ ಆಗಮಿಸಬೇಕಾಗಿತ್ತು. ಆದರೆ ನೀವು ಕಾರ್ಯಾಚರಣೆ ಮುಗಿಸಿಕೊಂಡು ರಾತ್ರಿ 08-33 ಗಂಟೆಗೆ ಘಟಕಕ್ಕೆ ಹಾಜರಾಗಿರುತ್ತೀರಿ. ಅಂದರೆ ಸುಮಾರು 37 ನಿಮಿಷ ಬೇಗ ಆಗಮಿಸಿರುತ್ತೀರಿ. ಇದರಿಂದ ಕಿಲೋ ಮೀಟರ್ ರದ್ದಾಗಿ ಸಾರಿಗೆ ಆದಾಯ ನಷ್ಟವಾಗಲು ಕಾರಣರಾಗಿದ್ದೀರಿ.
ಇನ್ನು ಹೆಚ್ಚಿನ ಜನ ಸಂದಣಿ ಅವಧಿಯಲ್ಲಿ ವಾಹನಗಳು ಲಭ್ಯವಿಲ್ಲದೆ ಪ್ರಯಾಣಿಕರು ತೊಂದರೆ ಅನುಭವಿಸಲು ಕಾರಣರಾಗಿದ್ದೀರಿ. ಇದು ನಿಮ್ಮ ಬೇಜವಾಬ್ದಾರಿತನದ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸಂಭವಿಸಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಲು ಹಾಗೂ ಸಂಸ್ಥೆಗೆ ಆರ್ಥಿಕ ನಷ್ಟವಾಗಲು ಕಾರಣರಾಗಿದ್ದೀರಿ.
ನಿಮ್ಮ ಮೇಲಿರುವ ಈ ಆರೋಪಗಳು ಕೇಂದ್ರ ಕಚೇರಿಯ AVLS ರಿಪೋರ್ಟ್ ವರದಿ ಮೇಲೆ ಆಧಾರವಾಗಿದೆ. ಹೀಗಾಗಿ ನೀವು, ಈ ಆರೋಪಗಳಿಗೆ ಸಂಬಂಧಿಸಿದಂತೆ, ನಿರ್ದೋಷಿ ಎಂಬುವುದರ ಬಗ್ಗೆ ಲಿಖಿತ ಹೇಳಿಕೆಯನ್ನು ಆರೋಪ ಪತ್ರ ತಲುಪಿದ 7 ದಿನಗಳೊಳಗಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ಸಮಜಾಯಿಸಿ ಸಲ್ಲಿಸುವುದು ಏನೂ ಇಲ್ಲವೆಂದು ತೀರ್ಮಾನಿಸಲಾಗುವುದು ಮತ್ತು ನಿಮ್ಮ ಮೇಲೆ ಹೊರಿಸಲಾದ ಈ ಎಲ್ಲ ಆರೋಪಗಳು ರುಜುವಾತಾಗಿದೆ ಎಂದು ನಿರ್ಧರಿಸಿ ನಿಮ್ಮ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಘಟಕ ವ್ಯದಸ್ಥಾಪಕರು ಮೆಮೋ ನೀಡಿದ್ದಾರೆ.
ಅದು ಕೂಡ ಸಂಸ್ಥೆಯು ಅಳವಡಿಸಿಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ನಡಕೆ ಮತ್ತು ಶಿಸ್ತು ನಿಯಮಾವಳಿ 1971 ಹಾಗೂ ಅದರ ತಿದ್ದುಪಡಿ ಅನುಸೂಚಿಯ ನಿಯಮ 22 ರ ಅನುಸಾರವಾಗಿ ನಿಯಮ 19/2 ರ ಅನುಸಾರ ಶಿಸ್ತುಪಾಲನಾಧಿಕಾರಿಯಾಗಿ ನಾನು ನಿಮ್ಮ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಉದ್ದೇಶಿಸಿ ಈ ಅಪರಾಧಗಳನ್ನು ಮಾಡಿರುವಿರೆಂದು ಭಾವಿಸಿ ಮೆಮೋ ಕೊಡುತ್ತಿರುವುದಾಗಿ ತಿಳಿಸಿದ್ದಾರೆ.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...