NEWSನಮ್ಮಜಿಲ್ಲೆನಮ್ಮರಾಜ್ಯ

bmtc: ಕರ್ತವ್ಯಕ್ಕೆ ನಿಯೋಜಿಸುವ 48ಗಂಟೆ ಮುಂಚಿತವಾಗಿ ಚಾಲನಾ ಸಿಬ್ಬಂದಿಗಳ ಸಹಿ ಪಡೆಯದಿದ್ರೆ ಕ್ರಮ – ಡಿಎಂಗಳಿಗೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಹಿಂದೆ ರೂಢಿಯಲ್ಲಿದ್ದಂತೆ ಚಾಲನಾ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವ 48 ಗಂಟೆಗಳ ಮುಂಚಿತವಾಗಿ ಡ್ಯೂಟಿರೂಟ ಪ್ರಕಾರ ಸಹಿ ಪಡೆಯುವುದು ಕಡ್ಡಾಯವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲ ಘಟಕದ ಅಧಿಕಾರಿಗಳು ಇದನ್ನು ತಪ್ಪದೇ ಪಾಲಿಸಬೇಕು ಎಂದು ಮೇಲಧಿಕಾರಿಗಳು ಸೋಮವಾರ ಆದೇಶ ಹೊರಡಿಸಿದ್ದಾರೆ.

BMTCಯ ಎಲ್ಲ ಘಟಕ ವ್ಯವಸ್ಥಾಪಕರು ಹಾಗೂ ಸಂಚಾರ ಮೇಲ್ವಿಚಾರಕರು ಇದನ್ನು ಕಡ್ಡಾಯವಾಗಿ ಪಾಲಿಸಬೇಕು, ಇಲ್ಲದಿದ್ದರೆ ನಿಮ್ಮ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲು ವರದಿ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೆಲವು ಘಟಕಗಳಲ್ಲಿ ಈ ರೂಢಿಯನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ. ಆದ್ದರಿಂದ ಎಲ್ಲ ಘಟಕಗಳಲ್ಲಿ ಕಡ್ಡಾಯವಾಗಿ ಸಹಿ ಪಡೆಯುವ ಪದ್ಧತಿಯನ್ನು ಮುಂದುವರೆಸಲು ಕಟ್ಟುನಿಟ್ಟಾಗಿ ಸೂಚಿಸಿದೆ. ತಪ್ಪಿದಲ್ಲಿ ಅಂತಹ ಘಟಕ ವ್ಯವಸ್ಥಾಪಕರು ಹಾಗೂ ಸಂಚಾರ ಮೇಲ್ವಿಚಾರಕರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮೇಲಧಿಕಾರಿಗಳು ತಿಳಿಸಿದ್ದಾರೆ.

ಘಟಕ ಮಟ್ಟದಲ್ಲಿ ಕೆಲ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿರುವುದರಿಂದ ತಮಗೆ ಬೇಕಾದವರಿಗೆ ಅವರ ಅನುಕೂಲಕ್ಕೆ ತಕ್ಕಂತೆ ಡ್ಯೂಟಿರೂಟ ಹೊಂದಿಸುತ್ತಿದ್ದಾರೆ ಎಂಬ ಆರೋಪವು ಈ ಹಿಂದೆ ನೌಕರರಿಂದ ಕೇಳಿ ಬಂದಿತ್ತು.

ಆದರೆ, ಈ ಬಗ್ಗೆ ಮೇಲಧಿಕಾರಿಗಳು ಅಷ್ಟಾಗಿ ಗಮನಿಸಿರಲಿಲ್ಲ. ಈಗ ಅದನ್ನು ಗಮನಿಸಿದ್ದು, ಜತೆಗೆ 2024ರ ಜನವರಿ 1ರಿಂದ ಮೂಲ ವೇತನ ಹೆಚ್ಚಳವಾಗಬೇಕಿರುವುದರಿಂದ ಜನರಿಗೆ ಸಾರಿಗೆ ಸೌಲಭ್ಯವನ್ನು ಸರಳೀಕರಣ ಅಂದರೆ ಸಮಯಕ್ಕೆ ಸರಿಯಾಗಿ ದೊರಕುವಂತೆ ನೋಡಿಕೊಳ್ಳುವ ದೃಷ್ಟಿಯಿಂದ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು 2020ರ ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಪಡೆಯುವುದಕ್ಕೆ ನಿಗಮದಲ್ಲಿ ಸದ್ಯಕ್ಕೆ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ. ಕಾರಣ ಶಕ್ತಿಯೋಜನೆಯಿಂದ ಬಹುತೇಕ ಎಲ್ಲ ನಮ್ಮ ಬಸ್‌ಗಳು ಮಿತಿ ಮೀರಿ ರಷ್‌ ಆಗುತ್ತಿದ್ದು ಒಳ್ಳೆ ಲಾಭದಲ್ಲೇ ಇದೆ. ಹೀಗಾಗಿ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ಆಡಳಿತ ಮಂಡಳಿ ಮನಸ್ಸು ಮಾಡಬೇಕು ಅಷ್ಟೇ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...