ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳ ಮೇಲೆ ಜಾಹೀರಾತುಗಳ ಪ್ರಕಟಿಸಿ ತನ್ನ ಆದಾಯ ಹೆಚ್ಚಿಸಿಕೊಳ್ಳುತ್ತಿದೆ. ಆದರೆ, ಇದರಿಂದ ಪ್ರಯಾಣಿಕರು ವಿಶೇಷವಾಗಿ ವೃದ್ಧರು ತಮ್ಮ ಬಸ್ಗಳನ್ನು ತ್ವರಿತವಾಗಿ ಗುರುತಿಸಲಾಗದ ಪರಿಸ್ಥಿತಿ ಉಂಟಾಗಿದೆ.
ಈ ಮೊದಲು, ಬಸ್ಗಳನ್ನು ಗುರುತಿಸುವುದು ನಮಗೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ಇತ್ತೀಚೆಗೆ ಭಾರಿ ಕಷ್ಟವಾಗುತ್ತಿದೆ. ಏಕೆಂದರೆ ಇಡೀ ಬಸ್ ಹೊರಮೈ ಬರಿ ಜಾಹೀರಾತುಗಳಿಂದ ತುಂಬಿದ್ದು ಇದು ಬಿಎಂಟಿಸಿ ಬಸ್ಸೋ ಅಥವಾ ಬೇರೆಯದೋ ಎಂದು ಗೊತ್ತಾಗುವುದಕ್ಕೆ ಸಮಯ ತೆಗೆದುಕೊಳ್ಳುತ್ತಿದೆ ಎಂದು ಸಂಸ್ಥೆಯ ಬಸ್ನಲ್ಲಿ ಪ್ರಯಾಣಿಸುವ ಕತ್ತರಿಗುಪ್ಪೆಯ ನಿವಾಸಿ ಅಂಬೂಜಾಕ್ಷಿ ತಿಳಿಸಿದ್ದಾರೆ.
ನಾವು ಈ ಹಿಂದೆ ಬಸ್ ಎಲ್ಲಿಗೆ ಪ್ರಯಾಣಿಸುತ್ತಿದೆ ಮತ್ತು ಯಾವಾಗ ಇಳಿಯಲು ಸಿದ್ಧರಾಗಿರಬೇಕು ಎಂದು ಸುಲಭವಾಗಿ ತಿಳಿಯಬಹುದಿತ್ತು. ಆದರೆ, ಇತ್ತೀಚೆಗೆ ಬಸ್ ಪಕ್ಕದ ಫಲಕಗಳಲ್ಲಿಯೂ ಜಾಹೀರಾತುಗಳನ್ನು ಹಾಕುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ. ಇದರಿಂದ ನಾವು ಎಷ್ಟೋ ಬಾರಿ ಬಂದ ಬಸ್ಅನ್ನು ಮಿಸ್ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಅದರಲ್ಲೂ ಸಾರಿಗೆ ಬಸ್ಅನ್ನು ನಿಯಮಿತವಾಗಿ ಬಳಸುವ ಅನೇಕ ಹಿರಿಯ ನಾಗರಿಕರು, ತಮ್ಮ ಸ್ಥಳಗಳಿಗೆ ಹೋಗುವ ಬಸ್ಗಳನ್ನು ಗುರುತಿಸಲು ಕಷ್ಟ ಪಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಶಕ್ತಿ ಯೋಜನೆಯಿಂದಾಗಿ ಬಿಎಂಟಿಸಿ ಆದಾಯ ಕಡಿಮೆಯಾಗಿದೆ. ಹೀಗಾಗಿ ಜಾಹೀರಾತು ಆದಾಯ ಮೂಲಗಳಲ್ಲಿ ಒಂದಾಗಿದ್ದು, ಬಸ್ಗಳ ಹಿಂದಿನ ಫಲಕದಲ್ಲಿ ಜಾಹೀರಾತುಗಳನ್ನು ಅನುಮತಿಸಲಾಗುತ್ತಿದೆ. ಬಸ್ಸಿನ ಸುತ್ತಲೂ ಸಂಪೂರ್ಣ ಜಾಹೀರಾತು ಹಾಕುವುದು ಹೆಚ್ಚಿನ ಆದಾಯ ನೀಡುತ್ತಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನು ನಗರದಾದ್ಯಂತ ಈ ಬಸ್ಗಳ ಸಂಚಾರವಿದೆ. ಪ್ರತಿಯೊಂದು ಬಸ್ಗಳ ಮೇಲೆ ಸಂಪೂರ್ಣ ಜಾಹೀರಾತುಗಳನ್ನು ಹಾಕಲಾಗಿದೆ. ಈದರಿಂದ ಆದಾಯ ಉತ್ಪಾದನೆ ಅಗತ್ಯವಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳುತ್ತೇವೆ. ಆದರೆ, ಅಂತಾರಾಷ್ಟ್ರೀಯ ಖ್ಯಾತಿಯ ನಗರವಾದ ಬೆಂಗಳೂರಿನಲ್ಲಿ ಸಾರಿಗೆ ಬಸ್ಸಿನ ಸುತ್ತಲೂ ಜಾಹೀರಾತು ಹಾಕುವುದು ಸೌಂದರ್ಯವನ್ನು ಹಾಳು ಮಾಡುತ್ತದೆ. ಈ ಮಾರ್ಗದಲ್ಲಿ ಅಲ್ಲದೆ, ಬೇರೆ ಜಾಹೀರಾತುಗಳ ಮೂಲಕವೂ ಬಿಎಂಟಿಸಿ ಆದಾಯ ಗಳಿಸಬಹುದು ಎಂದು ಶಿಕ್ಷಣ ಇಲಾಖೆಯ ಉದ್ಯೋಗಿ ಮಂಜುನಾಥ್ ಎಂಬುವವರು ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ.
ಬಸ್ಗಳ ಪಕ್ಕದ ಫಲಕಗಳಲ್ಲಿನ ಜಾಹೀರಾತುಗಳು ‘ಪಾರದರ್ಶಕ’ವಾಗಿದ್ದರೆ, ಉಳಿದವು ವಾಲ್ ಪೇಪರ್ ರೀತಿಯಲ್ಲಿ ಮಾಡಲ್ಪಟ್ಟಿವೆ. ಈ ಜಾಹೀರಾತುಗಳು ಯಾವುದೇ ರೀತಿಯಲ್ಲಿ ಬಸ್ ಸೂಚನಾ ಫಲಕಗಳು, ಮುಂಭಾಗ ಮತ್ತು ಹಿಂಭಾಗದ ದೀಪಗಳು, ಡಿಪೋ ಸಂಖ್ಯೆಗಳು, ವಾಹನ ನೋಂದಣಿ ಸಂಖ್ಯೆ ಮತ್ತು ಇತರವುಗಳನ್ನು ನಿರ್ಬಂಧಿಸಬಾರದು ಎಂಬುದು ಷರತ್ತುಗಳಾಗಿವೆ ಎಂದು ಮತ್ತೊಬ್ಬ ಅಧಿಕಾರಿ ಮಾಹಿತಿ ನೀಡಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...