NEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

ಮಳೆಗೆ ಸೋರುತ್ತಿರುವ ಬಿಎಂಟಿಸಿ ಬನಶಂಕರಿ ಟಿಟಿಎಂಸಿ!!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬನಶಂಕರಿ ಟಿಟಿಎಂಸಿ ಬಸ್ ನಿಲ್ದಾಣ  ಮಳೆಗೆ ಸೋರುತ್ತಿದೆ.

ಈ ವೇಳೆ ಸಾರ್ವಜನಿಕರು ಕುಳಿತುಕೊಳ್ಳುವುದಿರಲಿ ನಿಲ್ಲುವುದಕ್ಕೂ ಆಗುತ್ತಿಲ್ಲ. ಸಾರಿಗೆ ಸಚಿವರು ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ಕಾಳಜಿಯೇ ಇಲ್ಲವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ರಾಜಧಾನಿಗೆ ದೇಶ ವಿದೇಶದಿಂದ ಲಕ್ಷಾಂತರ ಮಂದಿ ಬಂದು ನೆಲೆಸಿದ್ದಾರೆ. ಆದರೆ, ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಳೆ ಬಂದರೆ ಕುಳಿತುಕೊಳ್ಳುವುದಕ್ಕೂ ಆಗದ ಪರಿಸ್ಥಿತಿ ಎದುರಾಗಿದೆ.

ಈ ಬಗ್ಗೆ ವಿದೇಶದಿಂದ ಪ್ರವಾಸಕ್ಕೆ ಬಂದು ಹೋಗುವ ವಿದೇಶಿಗರ ಮನಸ್ಸಿನಲ್ಲಿ ಯಾವ ರೀತಿಯ ಭಾವನೆ ಮೂಡುತ್ತದೆ ಎಂಬ ಅರಿವು ಕೂಡ ಇಲ್ಲದವರಂತೆ ಅಧಿಕಾರಿಗಳು ಮತ್ತು ಸರ್ಕಾರ ನಡೆದುಕೊಳ್ಳುತ್ತಿರುವುದುವು ಭಾರಿ ಖೇದಕರ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಮಳೆಗಾಲ ಆರಂಭವಾಗಿದ್ದು ಇನ್ನುಮೇಲಾದರು ಈ ರೀತಿ ನಿಲ್ದಾಣಗಳು ಸೋರದಂತೆ ಅದರಲ್ಲೂ ಟಿಟಿಎಂಸಿಗಳಲ್ಲಿ ಇಂಥ ಆವಂತರಗಳು ಆಗದಂತೆ ನೋಡಿಕೊಳ್ಳಬೇಕಿದೆ ಎಂದು ನಾಗರಿಕರು ಸಲಹೆ ನೀಡಿದ್ದಾರೆ.

ಇತ್ತೀಚೆಗೆ ಮಳೆಗೆ ಬಿಎಂಟಿಸಿ ಜಯನಗರ 4ನೇ ಘಟಕದ ಬಸ್‌ ಸೋರುತ್ತಿದ್ದರ ಬಗ್ಗೆ ಪ್ರಯಾಣಿಕರೊಬ್ಬರು ಫೋಟೋ ತೆಗೆದು ವಿಜಯಪಥ ಕಚೇರಿಗೆ ಕಳುಹಿಸಿದ್ದರು. ಈ ಬಗ್ಗೆ ವರದಿ ಬಂದ ಬಳಿಕ ಬಸ್‌ ಸೋರದಂತೆ ಮಾಡಿದ್ದಾರೆ.

ಇನ್ನು ಈ ರೀತಿ ಸೋರುತ್ತಿರುವ ಬಸ್‌ಗಳನ್ನು ಆಯಾಯ ಡಿಪೋ ವ್ಯವಸ್ಥಾಪಕರು ಸಂಬಂಧ ಪಟ್ಟವರಿಗೆ ನೋಡಿಕೊಳ್ಳುವಂತೆ ಸೂಚನೆ ನೀಡಿ ಮಾರ್ಗಕ್ಕೆ ಇಳಿಯುವ ಮುನ್ನವೇ ಸರಿಪಡಿಸಬೇಕು ಎಂದು ಜನತೆ ಆಗ್ರಹಿಸಿದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್