NEWS

BMTC ಬಸ್‌ ಡಿಕ್ಕಿ: ತರಕಾರಿ ವ್ಯಾಪಾರಿ ವೃದ್ಧ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್‌ ಡಿಕ್ಕಿ ಹೊಡೆದ ಪರಿಣಾಮ 65 ವರ್ಷದ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಮಡಿವಾಳ ಬಸ್ ನಿಲ್ದಾಣದ ಬಳಿ ಇಂದು ಬಳಗ್ಗೆ ನಡೆದಿದೆ.

ತರಕಾರಿ ವ್ಯಾಪಾರಿ ವೆಂಕಟರಾಮಪ್ಪ (65) ಮೃತರು. ಇವರು ಇಂದು ಬೆಳಗ್ಗೆ 6:30ರ ಸುಮಾರಿಗೆ ತರಕಾರಿ ತರಲು ಹೋಗಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ ಮಾರ್ಕೆಟ್ ರೋಡ್‌ಗೆ ತರಕಾರಿ ತರಲು ಹೋಗಿ ಬಳಿಕ ತರಕಾರಿ ತೆಗೆದುಕೊಂಡು ಬಂದು ವಾಪಸ್‌ ಬಂದಿದ್ದ ವೆಂಕಟರಾಮಪ್ಪ ಬಸ್ ಹತ್ತಲು ಮಡಿವಾಳ ಬಸ್ ನಿಲ್ದಾಣದಲ್ಲಿ ನಿಂತಿದ್ದರು.

ಈ ವೇಳೆ ಎಸ್‌ಎಂಬಿಟಿ ರೈಲ್ವೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್‌ ನಡುವೆ ಕಾರ್ಯಾಚರಣೆಗೊಳ್ಳುತ್ತಿದ್ದ ಬಿಎಂಟಿಸಿ ಬಸ್ ಫುಟ್‌ಪಾತ್‌ನಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದೆ. ಮೊದಲು ಟಾಟಾ ಎಸಿ ಗಾಡಿಗೆ ಡಿಕ್ಕಿಯಾಗಿ ಬಳಿಕ ವೆಂಕಟರಾಮಪ್ಪಗೆ ಬಸ್ ಗುದ್ದಿದೆ. ಪರಿಣಾಮ ಅವರು ಅಸುನೀಗಿದ್ದಾರೆ.

ಸದ್ಯ ವೆಂಕಟರಾಮಪ್ಪ ಅವರ ಮೃತದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ