NEWS

BMTC ಬಸ್‌ ಡಿಕ್ಕಿ: ತರಕಾರಿ ವ್ಯಾಪಾರಿ ವೃದ್ಧ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್‌ ಡಿಕ್ಕಿ ಹೊಡೆದ ಪರಿಣಾಮ 65 ವರ್ಷದ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಮಡಿವಾಳ ಬಸ್ ನಿಲ್ದಾಣದ ಬಳಿ ಇಂದು ಬಳಗ್ಗೆ ನಡೆದಿದೆ.

ತರಕಾರಿ ವ್ಯಾಪಾರಿ ವೆಂಕಟರಾಮಪ್ಪ (65) ಮೃತರು. ಇವರು ಇಂದು ಬೆಳಗ್ಗೆ 6:30ರ ಸುಮಾರಿಗೆ ತರಕಾರಿ ತರಲು ಹೋಗಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ ಮಾರ್ಕೆಟ್ ರೋಡ್‌ಗೆ ತರಕಾರಿ ತರಲು ಹೋಗಿ ಬಳಿಕ ತರಕಾರಿ ತೆಗೆದುಕೊಂಡು ಬಂದು ವಾಪಸ್‌ ಬಂದಿದ್ದ ವೆಂಕಟರಾಮಪ್ಪ ಬಸ್ ಹತ್ತಲು ಮಡಿವಾಳ ಬಸ್ ನಿಲ್ದಾಣದಲ್ಲಿ ನಿಂತಿದ್ದರು.

ಈ ವೇಳೆ ಎಸ್‌ಎಂಬಿಟಿ ರೈಲ್ವೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್‌ ನಡುವೆ ಕಾರ್ಯಾಚರಣೆಗೊಳ್ಳುತ್ತಿದ್ದ ಬಿಎಂಟಿಸಿ ಬಸ್ ಫುಟ್‌ಪಾತ್‌ನಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದೆ. ಮೊದಲು ಟಾಟಾ ಎಸಿ ಗಾಡಿಗೆ ಡಿಕ್ಕಿಯಾಗಿ ಬಳಿಕ ವೆಂಕಟರಾಮಪ್ಪಗೆ ಬಸ್ ಗುದ್ದಿದೆ. ಪರಿಣಾಮ ಅವರು ಅಸುನೀಗಿದ್ದಾರೆ.

ಸದ್ಯ ವೆಂಕಟರಾಮಪ್ಪ ಅವರ ಮೃತದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ