CRIMENEWSಬೆಂಗಳೂರು

BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್ಕಿ-ಜಖಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದರಿಂದ ಮುಂದಕ್ಕೆ ಚಲಿಸಿ ಬಿಎಂಟಿಸಿ ಸಂಚಾರ ನಿಯಂತ್ರಕರ ಕಚೇರಿಗೆ ಡಿಕ್ಕಿ ಹೊಡೆದು ಬಳಿಕ ಅಲ್ಲೇ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ದ್ವಿಚಕ್ರ ವಾಹನಗಳಿಗೂ ಗುದ್ದಿದೆ ಪರಿಣಾಮ ಬೈಕ್‌ಗಳು ಜಖಂಗೊಂಡಿದ್ದು ಗೋಡೆ ಬಿದ್ದುಹೋಗಿದೆ.

ಇದು ಇಂದು ಅಂದರೆ ಶುಕ್ರವಾರ ಬೆಳಗ್ಗೆ ಪೀಣ್ಯ ಕೈಗಾರಿಕಾ ಪ್ರದೇಶದ 3ನೇ ಹಂತದ, 3ನೇ ಮುಖ್ಯ ರಸ್ತೆಯಲ್ಲಿರುವ ಬಿಎಂಟಿಸಿ ಘಟಕ 22ರಲ್ಲಿ ಈ ಅಪಘಾತ ಸಂಭವಿಸಿದೆ.

ಖಾಸಗಿ ಒಡಂಬಡಿಕೆಯ ಪ್ರಾವೀಸ್ ಕಂಪನಿಯ ಎಲೆಕ್ಟ್ರಿಕ್‌ ಬಸ್‌ ಚಾಲಕ ಹ್ಯಾಂಡ್‌ ಬ್ರೇಕ್ ಹಾಕದೇ ಬಸ್ ನಿಲ್ಲಿಸಿ ಕೆಳಗೆ ಇಳಿದಿದ್ದರು. ಗೇಟ್‌ನಲ್ಲಿ ಸಹಿ ಹಾಕಿ ವಾಪಸ್ ಬಂದು ಬಸ್ ತೆಗೆಯಬೇಕಿತ್ತು ಅಷ್ಟರೊಳಗೆ ಬಸ್ ಮುಂದಕ್ಕೆ ಚಲಿಸಿ ಈ ಅವಘಡ ನಡೆದಿದೆ.

ಇದರಿಂದ ಸಂಚಾರ ನಿಯಂತ್ರಕರ ಕಚೇರಿ ಹಾಗೂ ಕಚೇರಿ ಬಳಿ ನಿಲ್ಲಿಸಿದ್ದ ಬಿಎಂಟಿಸಿ ಸಿಬ್ಬಂದಿಗಳ ದ್ವಿಚಕ್ರ ವಾಹನಗಳಿಗೆ ಡಿಕ್ಕಿಹೊಡೆದು ಮುಂದಕ್ಕೆ ನುಗ್ಗಿ ಕಚೇರಿಗೂ ಡಿಕ್ಕಿ ಹೊಡೆದಿದೆ.

ಬಸ್‌ ಡಿಕ್ಕಿ ಹೊಡೆದಿರುವ ರಭಸಕ್ಕೆ ಕಚೇರಿಯ ಗೋಡೆ ಬಿರುಕು ಬಿಟ್ಟಿದ್ದು. ಕಿಟಕಿಗಳು ಒಡೆದು ಹೋಗಿದೆ. ದ್ವಿಚಕ್ರವಾಹನಗಳು ಜಖಂಗೊಂಡಿವೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...