CRIMENEWSಬೆಂಗಳೂರು

BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್ಕಿ-ಜಖಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದರಿಂದ ಮುಂದಕ್ಕೆ ಚಲಿಸಿ ಬಿಎಂಟಿಸಿ ಸಂಚಾರ ನಿಯಂತ್ರಕರ ಕಚೇರಿಗೆ ಡಿಕ್ಕಿ ಹೊಡೆದು ಬಳಿಕ ಅಲ್ಲೇ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ದ್ವಿಚಕ್ರ ವಾಹನಗಳಿಗೂ ಗುದ್ದಿದೆ ಪರಿಣಾಮ ಬೈಕ್‌ಗಳು ಜಖಂಗೊಂಡಿದ್ದು ಗೋಡೆ ಬಿದ್ದುಹೋಗಿದೆ.

ಇದು ಇಂದು ಅಂದರೆ ಶುಕ್ರವಾರ ಬೆಳಗ್ಗೆ ಪೀಣ್ಯ ಕೈಗಾರಿಕಾ ಪ್ರದೇಶದ 3ನೇ ಹಂತದ, 3ನೇ ಮುಖ್ಯ ರಸ್ತೆಯಲ್ಲಿರುವ ಬಿಎಂಟಿಸಿ ಘಟಕ 22ರಲ್ಲಿ ಈ ಅಪಘಾತ ಸಂಭವಿಸಿದೆ.

ಖಾಸಗಿ ಒಡಂಬಡಿಕೆಯ ಪ್ರಾವೀಸ್ ಕಂಪನಿಯ ಎಲೆಕ್ಟ್ರಿಕ್‌ ಬಸ್‌ ಚಾಲಕ ಹ್ಯಾಂಡ್‌ ಬ್ರೇಕ್ ಹಾಕದೇ ಬಸ್ ನಿಲ್ಲಿಸಿ ಕೆಳಗೆ ಇಳಿದಿದ್ದರು. ಗೇಟ್‌ನಲ್ಲಿ ಸಹಿ ಹಾಕಿ ವಾಪಸ್ ಬಂದು ಬಸ್ ತೆಗೆಯಬೇಕಿತ್ತು ಅಷ್ಟರೊಳಗೆ ಬಸ್ ಮುಂದಕ್ಕೆ ಚಲಿಸಿ ಈ ಅವಘಡ ನಡೆದಿದೆ.

ಇದರಿಂದ ಸಂಚಾರ ನಿಯಂತ್ರಕರ ಕಚೇರಿ ಹಾಗೂ ಕಚೇರಿ ಬಳಿ ನಿಲ್ಲಿಸಿದ್ದ ಬಿಎಂಟಿಸಿ ಸಿಬ್ಬಂದಿಗಳ ದ್ವಿಚಕ್ರ ವಾಹನಗಳಿಗೆ ಡಿಕ್ಕಿಹೊಡೆದು ಮುಂದಕ್ಕೆ ನುಗ್ಗಿ ಕಚೇರಿಗೂ ಡಿಕ್ಕಿ ಹೊಡೆದಿದೆ.

ಬಸ್‌ ಡಿಕ್ಕಿ ಹೊಡೆದಿರುವ ರಭಸಕ್ಕೆ ಕಚೇರಿಯ ಗೋಡೆ ಬಿರುಕು ಬಿಟ್ಟಿದ್ದು. ಕಿಟಕಿಗಳು ಒಡೆದು ಹೋಗಿದೆ. ದ್ವಿಚಕ್ರವಾಹನಗಳು ಜಖಂಗೊಂಡಿವೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ