CRIMENEWS

ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾರಿನ ಡೋರ್‌ಗೆ ಬೈಕ್ ಡಿಕ್ಕಿಕೊಡೆದ ಪರಣಾಮ ಕೆಳಗೆ ಬಿದ್ದ ಬೈಕ್‌ ಸವಾರ ಮಹಿಳೆ ಮೇಲೆ ಬಿಎಂಟಿಸಿ ಬಸ್ ಹರಿದು ಆಕೆ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನಡೆದಿದೆ.

ಕಾಮಕ್ಷಿಪಾಳ್ಯ ನಿವಾಸಿ ಸರೋಜಾ (42) ಎಂಬುವರೆ ಅವಘಡದಲ್ಲಿ ಮೃತಪಟ್ಟವರು. ಜ್ಞಾನಭಾರತಿಯಲ್ಲಿ ಮದುವೆ ಇದ್ದಿದ್ದರಿಂದ ಅದನ್ನು ಮುಗಿಸಿಕೊಂಡು ಸಹೋದರನ ಜೊತೆ ಮಹಿಳೆ ವಾಪಸ್‌ ಮನೆಗೆ ಹೋಗುತ್ತಿದ್ದಾಗ ಈ ದುರಂತ ನಡೆದಿದೆ.

ಘಟನೆ ಏನು? ಬೈಕ್‌ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್‌ ಅನ್ನು ಸಡೆನ್‌ಆಗಿ ತೆಗೆಯಲಾಗಿ ಇದರಿಂದ ಡೋರ್‌ಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ಸಮಯದಲ್ಲಿ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಸರೋಜಾ ಅವರ ಮೇಲೆ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಕುಡಿದ ಮತ್ತಿನಲ್ಲಿ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿದ ಭೂಪ – ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ರೈಲ್ವೆ ಪ್ಲಾಟ್‌ಫಾರ್ಮ್ ಮೇಲಿಂದ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮವಾಗಿ ಕಾರು ಮತ್ತು ರೈಲ್ವೆ ಹಳಿಗೆ ಡ್ಯಾಮೇಜ್‌ ಆಗಿದೆ.

ಕಾರು ಮಾಲೀಕ ರಾಕೇಶ್‌ ಎಂಬಾತ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಈ ಅವಾಂತರ ಸೃಷ್ಟಿಸಿದ್ದಾನೆ. ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಕಾರು ತೆರವುಗೊಳಿಸಿದ್ದಾರೆ. ರಾಕೇಶ್‌ನನ್ನು ವಶಕ್ಕೆ ಪಡೆದಿರುವ ಬಂಗಾರಪೇಟೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?