ಬೆಂಗಳೂರು: ಕಾರಿನ ಡೋರ್ಗೆ ಬೈಕ್ ಡಿಕ್ಕಿಕೊಡೆದ ಪರಣಾಮ ಕೆಳಗೆ ಬಿದ್ದ ಬೈಕ್ ಸವಾರ ಮಹಿಳೆ ಮೇಲೆ ಬಿಎಂಟಿಸಿ ಬಸ್ ಹರಿದು ಆಕೆ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನಡೆದಿದೆ.
ಕಾಮಕ್ಷಿಪಾಳ್ಯ ನಿವಾಸಿ ಸರೋಜಾ (42) ಎಂಬುವರೆ ಅವಘಡದಲ್ಲಿ ಮೃತಪಟ್ಟವರು. ಜ್ಞಾನಭಾರತಿಯಲ್ಲಿ ಮದುವೆ ಇದ್ದಿದ್ದರಿಂದ ಅದನ್ನು ಮುಗಿಸಿಕೊಂಡು ಸಹೋದರನ ಜೊತೆ ಮಹಿಳೆ ವಾಪಸ್ ಮನೆಗೆ ಹೋಗುತ್ತಿದ್ದಾಗ ಈ ದುರಂತ ನಡೆದಿದೆ.
ಘಟನೆ ಏನು? ಬೈಕ್ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್ ಅನ್ನು ಸಡೆನ್ಆಗಿ ತೆಗೆಯಲಾಗಿ ಇದರಿಂದ ಡೋರ್ಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ಸಮಯದಲ್ಲಿ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಸರೋಜಾ ಅವರ ಮೇಲೆ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಕುಡಿದ ಮತ್ತಿನಲ್ಲಿ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿದ ಭೂಪ – ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ರೈಲ್ವೆ ಪ್ಲಾಟ್ಫಾರ್ಮ್ ಮೇಲಿಂದ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮವಾಗಿ ಕಾರು ಮತ್ತು ರೈಲ್ವೆ ಹಳಿಗೆ ಡ್ಯಾಮೇಜ್ ಆಗಿದೆ.
ಕಾರು ಮಾಲೀಕ ರಾಕೇಶ್ ಎಂಬಾತ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಈ ಅವಾಂತರ ಸೃಷ್ಟಿಸಿದ್ದಾನೆ. ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಕಾರು ತೆರವುಗೊಳಿಸಿದ್ದಾರೆ. ರಾಕೇಶ್ನನ್ನು ವಶಕ್ಕೆ ಪಡೆದಿರುವ ಬಂಗಾರಪೇಟೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....